AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

Narendra Modi ಕಾರ್ಯಾಚರಣೆಯ ಯಶಸ್ಸಿಗೆ ಅವಿರತವಾಗಿ ಶ್ರಮಿಸಿದ ಭಾರತೀಯ ಸಮುದಾಯದ ಮುಖಂಡರು, ಸ್ವಯಂಸೇವಕ ಗುಂಪುಗಳು, ಕಂಪನಿಗಳು, ಖಾಸಗಿ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಮೋದಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. 

ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 15, 2022 | 10:17 PM

Share

ದೆಹಲಿ: ಉಕ್ರೇನ್‌ನಿಂದ (Ukraine) ಇತರ 18 ದೇಶಗಳ ಪ್ರಜೆಗಳನ್ನು ಭಾರತ ಸ್ಥಳಾಂತರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ಹೇಳಿದ್ದಾರೆ. ಭಾರತ ಸರ್ಕಾರ ಉಕ್ರೇನ್ ಮತ್ತು ಅದರ ನೆರೆಯ ದೇಶಗಳಿಗೆ 90 ಟನ್‌ಗಳಷ್ಟು ಮಾನವೀಯ ನೆರವು ಕಳುಹಿಸಿದೆ ಎಂದು ಅವರು ಹೇಳಿದರು. ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ರಾಯಭಾರ ಕಚೇರಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ವರ್ಚುವಲ್ ಸಂವಾದದ ಸಂದರ್ಭದಲ್ಲಿ ಪ್ರಧಾನಿ ಈ ಮಾತುಗಳನ್ನಾಡಿದ್ದಾರೆ. ಕಾರ್ಯಾಚರಣೆಯ ಯಶಸ್ಸಿಗೆ ಅವಿರತವಾಗಿ ಶ್ರಮಿಸಿದ ಭಾರತೀಯ ಸಮುದಾಯದ ಮುಖಂಡರು, ಸ್ವಯಂಸೇವಕ ಗುಂಪುಗಳು, ಕಂಪನಿಗಳು, ಖಾಸಗಿ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.  ಉಕ್ರೇನ್‌ನಿಂದ ಸುಮಾರು 23,000 ಭಾರತೀಯರು ದೇಶಕ್ಕೆ ಮರಳಿದ್ದಾರೆ ಎಂದು ಪ್ರಧಾನಿ ಹೇಳಿದರು. “ಈ ತೆರವು ಕಾರ್ಯಾಚರಣೆಯನ್ನು ನಡೆಸುವುದು ಅಂತಹ ಸಂದರ್ಭಗಳಲ್ಲಿ ಸವಾಲಾಗಿತ್ತು” ಎಂದು ಅವರು ಹೇಳಿದರು.  ಆಪರೇಷನ್ ಗಂಗಾದಲ್ಲಿ(Operation Ganga) ಭಾಗಿಯಾಗಿರುವ ಎಲ್ಲಾ ಪಾಲುದಾರರು ಪ್ರದರ್ಶಿಸಿದ ದೇಶಭಕ್ತಿಯ ಉತ್ಸಾಹ, ಸಮುದಾಯ ಸೇವೆಯ ಪ್ರಜ್ಞೆ ಮತ್ತು ತಂಡದ ಮನೋಭಾವವನ್ನು ಅವರು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಉಕ್ರೇನ್ ಮತ್ತು ಅದರ ನೆರೆಯ ರಾಷ್ಟ್ರಗಳ ನಾಯಕರೊಂದಿಗೆ ತಮ್ಮ ವೈಯಕ್ತಿಕ ಸಂವಾದವನ್ನು ನೆನಪಿಸಿಕೊಂಡರು ಮತ್ತು ಅವರ ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. “ಭಾರತೀಯ ಸಮುದಾಯ ಸಂಸ್ಥೆಗಳು, ನಾಗರಿಕ ಸಮಾಜ ಮತ್ತು ಆಪರೇಷನ್ ಗಂಗಾದಲ್ಲಿ ತೊಡಗಿಸಿಕೊಂಡಿರುವ ಸ್ವಯಂಸೇವಕ ಗುಂಪುಗಳೊಂದಿಗೆ ಸಂವಹನ ನಡೆಸಿದೆ. ಸಾಮೂಹಿಕ ಪ್ರಯತ್ನಗಳು ಉಕ್ರೇನ್‌ನಿಂದ ಸುಮಾರು 23,000 ಭಾರತೀಯರ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿದವು. ವಿದೇಶದಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಪುನರುಚ್ಚರಿಸಿದ ಪ್ರಧಾನಿ ಮೋದಿ, ಯಾವುದೇ ಅಂತರರಾಷ್ಟ್ರೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತವು ತನ್ನ ನಾಗರಿಕರಿಗೆ ಸಹಾಯ ಮಾಡಲು ಯಾವಾಗಲೂ ನಿಷ್ಠೆಯಿಂದ ವರ್ತಿಸಿದೆ ಎಂದು ಸ್ಮರಿಸಿದರು.

ಇದನ್ನೂ ಓದಿ: Parliament Budget Session 2022 ಉಕ್ರೇನ್‌ನಿಂದ 22,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಮರಳಿದ್ದಾರೆ: ಜೈಶಂಕರ್

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್