AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

Narendra Modi ಕಾರ್ಯಾಚರಣೆಯ ಯಶಸ್ಸಿಗೆ ಅವಿರತವಾಗಿ ಶ್ರಮಿಸಿದ ಭಾರತೀಯ ಸಮುದಾಯದ ಮುಖಂಡರು, ಸ್ವಯಂಸೇವಕ ಗುಂಪುಗಳು, ಕಂಪನಿಗಳು, ಖಾಸಗಿ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಮೋದಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. 

ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ನರೇಂದ್ರ ಮೋದಿ
TV9 Web
| Edited By: |

Updated on: Mar 15, 2022 | 10:17 PM

Share

ದೆಹಲಿ: ಉಕ್ರೇನ್‌ನಿಂದ (Ukraine) ಇತರ 18 ದೇಶಗಳ ಪ್ರಜೆಗಳನ್ನು ಭಾರತ ಸ್ಥಳಾಂತರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ಹೇಳಿದ್ದಾರೆ. ಭಾರತ ಸರ್ಕಾರ ಉಕ್ರೇನ್ ಮತ್ತು ಅದರ ನೆರೆಯ ದೇಶಗಳಿಗೆ 90 ಟನ್‌ಗಳಷ್ಟು ಮಾನವೀಯ ನೆರವು ಕಳುಹಿಸಿದೆ ಎಂದು ಅವರು ಹೇಳಿದರು. ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ರಾಯಭಾರ ಕಚೇರಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ವರ್ಚುವಲ್ ಸಂವಾದದ ಸಂದರ್ಭದಲ್ಲಿ ಪ್ರಧಾನಿ ಈ ಮಾತುಗಳನ್ನಾಡಿದ್ದಾರೆ. ಕಾರ್ಯಾಚರಣೆಯ ಯಶಸ್ಸಿಗೆ ಅವಿರತವಾಗಿ ಶ್ರಮಿಸಿದ ಭಾರತೀಯ ಸಮುದಾಯದ ಮುಖಂಡರು, ಸ್ವಯಂಸೇವಕ ಗುಂಪುಗಳು, ಕಂಪನಿಗಳು, ಖಾಸಗಿ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.  ಉಕ್ರೇನ್‌ನಿಂದ ಸುಮಾರು 23,000 ಭಾರತೀಯರು ದೇಶಕ್ಕೆ ಮರಳಿದ್ದಾರೆ ಎಂದು ಪ್ರಧಾನಿ ಹೇಳಿದರು. “ಈ ತೆರವು ಕಾರ್ಯಾಚರಣೆಯನ್ನು ನಡೆಸುವುದು ಅಂತಹ ಸಂದರ್ಭಗಳಲ್ಲಿ ಸವಾಲಾಗಿತ್ತು” ಎಂದು ಅವರು ಹೇಳಿದರು.  ಆಪರೇಷನ್ ಗಂಗಾದಲ್ಲಿ(Operation Ganga) ಭಾಗಿಯಾಗಿರುವ ಎಲ್ಲಾ ಪಾಲುದಾರರು ಪ್ರದರ್ಶಿಸಿದ ದೇಶಭಕ್ತಿಯ ಉತ್ಸಾಹ, ಸಮುದಾಯ ಸೇವೆಯ ಪ್ರಜ್ಞೆ ಮತ್ತು ತಂಡದ ಮನೋಭಾವವನ್ನು ಅವರು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಉಕ್ರೇನ್ ಮತ್ತು ಅದರ ನೆರೆಯ ರಾಷ್ಟ್ರಗಳ ನಾಯಕರೊಂದಿಗೆ ತಮ್ಮ ವೈಯಕ್ತಿಕ ಸಂವಾದವನ್ನು ನೆನಪಿಸಿಕೊಂಡರು ಮತ್ತು ಅವರ ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. “ಭಾರತೀಯ ಸಮುದಾಯ ಸಂಸ್ಥೆಗಳು, ನಾಗರಿಕ ಸಮಾಜ ಮತ್ತು ಆಪರೇಷನ್ ಗಂಗಾದಲ್ಲಿ ತೊಡಗಿಸಿಕೊಂಡಿರುವ ಸ್ವಯಂಸೇವಕ ಗುಂಪುಗಳೊಂದಿಗೆ ಸಂವಹನ ನಡೆಸಿದೆ. ಸಾಮೂಹಿಕ ಪ್ರಯತ್ನಗಳು ಉಕ್ರೇನ್‌ನಿಂದ ಸುಮಾರು 23,000 ಭಾರತೀಯರ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿದವು. ವಿದೇಶದಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಪುನರುಚ್ಚರಿಸಿದ ಪ್ರಧಾನಿ ಮೋದಿ, ಯಾವುದೇ ಅಂತರರಾಷ್ಟ್ರೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತವು ತನ್ನ ನಾಗರಿಕರಿಗೆ ಸಹಾಯ ಮಾಡಲು ಯಾವಾಗಲೂ ನಿಷ್ಠೆಯಿಂದ ವರ್ತಿಸಿದೆ ಎಂದು ಸ್ಮರಿಸಿದರು.

ಇದನ್ನೂ ಓದಿ: Parliament Budget Session 2022 ಉಕ್ರೇನ್‌ನಿಂದ 22,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಮರಳಿದ್ದಾರೆ: ಜೈಶಂಕರ್

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು