AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Kaveri: ಲಕ್ನೋ-ಬೌಂಡ್ ವಿಮಾನದ ಮೂಲಕ ಸುಡಾನ್​​​ನಿಂದ ಭಾರತಕ್ಕೆ ಬರುತ್ತಿರುವ 16 ಭಾರತೀಯರು

ಯುದ್ಧ ಪೀಡಿತ ಸುಡಾನ್‌ನಲ್ಲಿರುವ ಭಾರತೀಯರನ್ನು ಭಾರತಕ್ಕೆ ಕರೆತರುವ ಆಪರೇಷನ್ ಕಾವೇರಿ ಮುಂದುವರಿದೆ, ಇದೀಗ ಮತ್ತೆ ಈ ಆಪರೇಷನ್ ಮೂಲಕ 16 ಭಾರತೀಯರ ತಂಡವನ್ನು ಸೌದಿ ಅರೇಬಿಯಾದ ಜೆಡ್ಡಾದಿಂದ ಲಕ್ನೋಗೆ ವಿಮಾನದಲ್ಲಿ ಗುರುವಾರ ಹೊರಟಿದೆ.

Operation Kaveri: ಲಕ್ನೋ-ಬೌಂಡ್ ವಿಮಾನದ ಮೂಲಕ ಸುಡಾನ್​​​ನಿಂದ ಭಾರತಕ್ಕೆ ಬರುತ್ತಿರುವ 16 ಭಾರತೀಯರು
Operation Kaveri
ಅಕ್ಷಯ್​ ಪಲ್ಲಮಜಲು​​
|

Updated on:May 04, 2023 | 11:19 AM

Share

ದೆಹಲಿ: ಯುದ್ಧ ಪೀಡಿತ ಸುಡಾನ್‌ನಲ್ಲಿರುವ ಭಾರತೀಯರನ್ನು ಭಾರತಕ್ಕೆ ಕರೆತರುವ ಆಪರೇಷನ್ ಕಾವೇರಿ ಮುಂದುವರಿದೆ, ಇದೀಗ ಮತ್ತೆ ಈ ಆಪರೇಷನ್ ಮೂಲಕ 16 ಭಾರತೀಯರ ತಂಡವನ್ನು ಸೌದಿ ಅರೇಬಿಯಾದ ಜೆಡ್ಡಾದಿಂದ ಲಕ್ನೋಗೆ ವಿಮಾನದಲ್ಲಿ ಗುರುವಾರ ಹೊರಟಿದೆ. MEA ವಕ್ತಾರ ಅರಿಂದಮ್ ಬಾಗ್ಚಿ ಅವರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. Operation Kaveri ಮೂಲಕ ಈಗಾಗಲೇ 16 ಜನರನ್ನು ಸ್ಥಳಾಂತರಿಸಲಾಗಿದೆ. ಇದೀಗ ಜೆಡ್ಡಾದಿಂದ ಲಕ್ನೋಗೆ ವಿಮಾನದಲ್ಲಿ ಹೊರಟಿದೆ ಎಂದು ಬರೆದಿದ್ದಾರೆ.

ಈ ವಿಮಾನದ ಮೂಲಕ ಈಗಾಗಲೇ 14 ಜನರನ್ನು ಸ್ಥಳಾಂತರಿಸಲಾಗಿದೆ. ಮತ್ತೊಂದು ವಿಮಾನವು ಜೆಡ್ಡಾದಿಂದ ಮುಂಬೈಗೆ ಹೊರಟಿದೆ ಎಂದು ಬಾಗ್ಚಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಭಾರತಕ್ಕೆ ಬರುತ್ತಿರುವ 22 ನೇ ಬ್ಯಾಚ್. 135 ಭಾರತೀಯರ ಜತೆಗೆ ಸೌದಿ ಅರೇಬಿಯಾದ ಜೆಡ್ಡಾದಿಂದ IAF C-130J ವಿಮಾನದಲ್ಲಿ ಹೊರಟಿದೆ. ಇದಕ್ಕೂ ಮುನ್ನ ಬುಧವಾರ 62 ಭಾರತೀಯ ಪ್ರಜೆಗಳು ನವದೆಹಲಿ ತಲುಪಿದ್ದರು.

ಇದನ್ನೂ ಓದಿ:Operation Kaveri: ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ ಸುಡಾನ್​​ನಿಂದ 3,200 ಭಾರತೀಯರ ಸ್ಥಳಾಂತರ

ಮಂಗಳವಾರ ದಕ್ಷಿಣ ಸುಡಾನ್‌ನ ವಿದೇಶಾಂಗ ಸಚಿವಾಲಯದ ಹೇಳಿಕೆಯ ಪ್ರಕಾರ, ಸುಡಾನ್‌ನಲ್ಲಿ ಸೈನ್ಯಗಳ ಮಧ್ಯೆ ನಡೆಯುತ್ತಿರುವ (ಸಶಸ್ತ್ರ ಪಡೆಗಳು (ಎಸ್‌ಎಎಫ್) ಮತ್ತು ಅರೆಸೇನಾ ಕ್ಷಿಪ್ರ ಬೆಂಬಲ ಪಡೆಗಳು (ಆರ್‌ಎಸ್‌ಎಫ್) ಏಳು ದಿನಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ.

ಆಪರೇಷನ್ ಕಾವೇರಿ ಅಡಿಯಲ್ಲಿ ಇದುವರೆಗೆ 3,200 ಭಾರತೀಯರನ್ನು ಸುಡಾನ್‌ನಿಂದ ಸ್ಥಳಾಂತರಿಸಲಾಗಿದೆ. ನಿನ್ನೆಯವರೆಗೆ ಸುಡಾನ್​​ನಲ್ಲಿದ್ದ ಭಾರತೀಯರು ಐದು ಭಾರತೀಯ ನೌಕಾ ಹಡಗುಗಳು ಮತ್ತು ವಾಡಿ ಸಯ್ಯಿದ್​​​ನ ಮಿಲಿಟರಿ ವಾಯುನೆಲೆ ಸೇರಿದಂತೆ 13 ಭಾರತೀಯ ವಾಯುಪಡೆಯ ವಿಮಾನಗಳನ್ನು ಬಳಸಿಕೊಂಡು ಪೋರ್ಟ್ ಸುಡಾನ್‌ನಿಂದ ಹೊರಬಂದಿದ್ದಾರೆ ಎಂದು ಖಾರ್ಟೂಮ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.

ಖಾರ್ಟೂಮ್ ನಗರದಲ್ಲಿ ನಡೆದ ದಾಳಿಗಳು ಸೇರಿದಂತೆ ಸುಡಾನ್‌ನಲ್ಲಿ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಮುಂದಿನ ಬೆಳವಣಿಗೆ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಅನುಸರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಖರ್ಟೂಮ್ ಮತ್ತು ಸುಡಾನ್‌ನ ಇತರ ಭಾಗಗಳಲ್ಲಿ ಏ.15ರಂದು ಸುಡಾನ್​​ ಸೈನ್ಯಗಳ ನಡುವೆ ಸಂಘರ್ಷ ಪ್ರಾರಂಭವಾಯಿತು. ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಸರ್ಕಾರವು ‘ಆಪರೇಷನ್ ಕಾವೇರಿ’ ಅನ್ನು ಪ್ರಾರಂಭಿಸಿತು ಮತ್ತು ಭಾರತೀಯ ನೌಕಾ ಹಡಗುಗಳು, ಭಾರತೀಯ ವಾಯುಪಡೆಯ ವಿಮಾನಗಳು ತ್ವರಿತ ಕಾರ್ಯಚರಣೆ ನಡೆಸಿದೆ ಎಂದು AIR ವರದಿಗಾರರು ವರದಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Thu, 4 May 23

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ