ಲಕ್ಷದ್ವೀಪ ಕರಾವಳಿಯಲ್ಲಿ ₹ 1,526 ಕೋಟಿ ಮೌಲ್ಯದ ಹೆರಾಯಿನ್ ವಶ

ಎರಡು ಅಥವಾ ಮೂರನೇ ವಾರದಲ್ಲಿ ತಮಿಳುನಾಡಿನ ಕರಾವಳಿಯಿಂದ ನೌಕಾಯಾನ ಮಾಡುವ ಎರಡು ಭಾರತೀಯ ದೋಣಿಗಳು ಅರಬ್ಬಿ ಸಮುದ್ರದಲ್ಲಿ ಯಾವುದೋ ಕಡೆ ಭಾರಿ ಪ್ರಮಾಣದಲ್ಲಿ ಮಾದಕ ದ್ರವ್ಯಗಳನ್ನು ಸ್ವೀಕರಿಸುತ್ತವೆ ಎಂದು ಡಿಆರ್‌ಐಗೆ ಮಾಹಿತಿ ಲಭಿಸಿತ್ತು

ಲಕ್ಷದ್ವೀಪ ಕರಾವಳಿಯಲ್ಲಿ ₹ 1,526 ಕೋಟಿ ಮೌಲ್ಯದ ಹೆರಾಯಿನ್ ವಶ
ವಶ ಪಡಿಸಿಕೊಂಡಿರುವ ಹೆರಾಯಿನ್ Image Credit source: ANI
Follow us
| Updated By: ರಶ್ಮಿ ಕಲ್ಲಕಟ್ಟ

Updated on:May 20, 2022 | 11:03 PM

ಲಕ್ಷದ್ವೀಪ ದ್ವೀಪಗಳ ಕರಾವಳಿಯಲ್ಲಿ ₹ 1,526 ಕೋಟಿ ಮೌಲ್ಯದ ಹೆರಾಯಿನ್ ವಶ ಪಡಿಸಿಕೊಳ್ಳಲಾಗಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಮತ್ತು ಭಾರತೀಯ ಕರಾವಳಿ ಕಾವಲು ಪಡೆ (IGC) ಜಂಟಿಯಾಗಿ ‘ಆಪರೇಷನ್ ಖೋಜ್‌ಬೀನ್’ (Operation Khojbeen) ಎಂಬ ಹೆಸರಿನಲ್ಲಿ ಕೈಗೊಂಡಿರುವ ಕಾರ್ಯಾಚರಣೆಯಲ್ಲಿ ‘ಹೈ-ಗ್ರೇಡ್ ಹೆರಾಯಿನ್’ ವಶಪಡಿಸಿಕೊಳ್ಳಲಾಗಿದೆ. ಕೊಚ್ಚಿಯಲ್ಲಿರುವ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಯಲ್ಲಿ ಎರಡು ಬೋಟ್‌ಗಳಲ್ಲಿ ನಡೆಸಿದ ಶೋಧ ವೇಳೆ ತಲಾ 1 ಕೆಜಿ ಹೆರಾಯಿನ್ ಹೊಂದಿರುವ 218 ಪ್ಯಾಕೆಟ್‌ಗಳು ಪತ್ತೆಯಾಗಿವೆ. ಎರಡು ಅಥವಾ ಮೂರನೇ ವಾರದಲ್ಲಿ ತಮಿಳುನಾಡಿನ ಕರಾವಳಿಯಿಂದ ನೌಕಾಯಾನ ಮಾಡುವ ಎರಡು ಭಾರತೀಯ ದೋಣಿಗಳು ಅರಬ್ಬಿ ಸಮುದ್ರದಲ್ಲಿ ಯಾವುದೋ ಕಡೆ ಭಾರಿ ಪ್ರಮಾಣದಲ್ಲಿ ಮಾದಕ ದ್ರವ್ಯಗಳನ್ನು ಸ್ವೀಕರಿಸುತ್ತವೆ ಎಂದು ಡಿಆರ್‌ಐಗೆ ಮಾಹಿತಿ ಲಭಿಸಿತ್ತು. ಈ ಮಾಹಿತಿ ಮೇರೆಗೆ ‘ಆಪರೇಷನ್ ಖೋಜ್‌ಬೀನ್’ ಅನ್ನು ಮೇ 2022 ಮೇ 7 ರಂದು ಪ್ರಾರಂಭಿಸಲಾಯಿತು. ಕಾರ್ಯಾಚರಣೆಯ ಅಡಿಯಲ್ಲಿ ಡಿಆರ್‌ಐ ಅಧಿಕಾರಿಗಳೊಂದಿಗೆ ಕೋಸ್ಟ್ ಗಾರ್ಡ್ ಹಡಗು ‘ಸುಜೀತ್’ ವಿಶೇಷ ಆರ್ಥಿಕ ವಲಯ (EEZ) ಬಳಿ ನಿಕಟ ನಿಗಾ ಇರಿಸಿದೆ.  ಹಲವಾರು ದಿನಗಳ ನಿರಂತರ ಹುಡುಕಾಟ ಮತ್ತು ಸಮುದ್ರಗಳ ಮೇಲ್ವಿಚಾರಣೆಯ ನಂತರ, ಎರಡು ಶಂಕಿತ ದೋಣಿಗಳಾದ ಪ್ರಿನ್ಸ್  ಮತ್ತು ಲಿಟಲ್ ಜೀಸಸ್ ಅನ್ನು ಮೇ 18 ರಂದು ಲಕ್ಷದ್ವೀಪ ದ್ವೀಪಗಳ ಕರಾವಳಿಯಲ್ಲಿ ಐಸಿಜಿ ಮತ್ತು ಡಿಆರ್​​ಐ ಅಧಿಕಾರಿಗಳು ತಡೆದರು.

ವಿಚಾರಣೆಯ ನಂತರ ಕೆಲವು ಸಿಬ್ಬಂದಿಗಳು ಸಮುದ್ರದಲ್ಲಿ ಭಾರಿ ಪ್ರಮಾಣದಲ್ಲಿ ಹೆರಾಯಿನ್ ಪಡೆದಿದ್ದು ಎರಡೂ ದೋಣಿಗಳಲ್ಲಿ ಬಚ್ಚಿಟ್ಟಿದ್ದಾರೆ ಎಂದು ಬಹಿರಂಗಪಡಿಸಿದರು. ಡಿಆರ್‌ಐ ವಿವಿಧ ಸ್ಥಳಗಳಲ್ಲಿ ಹುಡುಕಾಟ ನಡೆಸುತ್ತಿದ್ದು ತನಿಖೆ ಪ್ರಗತಿಯಲ್ಲಿದೆ .

ಕಳೆದ ತಿಂಗಳಲ್ಲಿ ಡಿಆರ್‌ಐ ನಡೆಸಿದ ನಾಲ್ಕನೇ ಪ್ರಮುಖ ಮಾದಕ ದ್ರವ್ಯ ಪತ್ತೆ ಇದಾಗಿದೆ. ಏಪ್ರಿಲ್ 2021 ರಿಂದ ಅಂತರರಾಷ್ಟ್ರೀಯ ಅಕ್ರಮ ಮಾರುಕಟ್ಟೆಯಲ್ಲಿ ಅಂದಾಜು ₹ 26,000 ಕೋಟಿ ಮೌಲ್ಯದ 3,800 ಕೆಜಿಗೂ ಹೆಚ್ಚು ಹೆರಾಯಿನ್ ವಶಪಡಿಸಿಕೊಂಡಿದೆ.

ಏತನ್ಮಧ್ಯೆ, ಭಾರತೀಯ ಕೋಸ್ಟ್ ಗಾರ್ಡ್ ಕಳೆದ 3 ವರ್ಷಗಳಲ್ಲಿ ವಿವಿಧ ಕಾರ್ಯಾಚರಣೆಗಳಲ್ಲಿ ಸುಮಾರು ₹ 6,200 ಕೋಟಿ ಮೌಲ್ಯದ ಸುಮಾರು 3 ಟನ್ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದೆ. ಇಲ್ಲಿಯವರೆಗೆ ₹ 12,206 ಕೋಟಿ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.

Published On - 11:01 pm, Fri, 20 May 22

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ