AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindhu: ಇಸ್ರೇಲ್ ಜೊತೆಗಿನ ಸಂಘರ್ಷದ ನಡುವೆ ಇರಾನ್‌ನಿಂದ ದೆಹಲಿಗೆ ಬಂದಿಳಿದ 310 ಭಾರತೀಯ ವಿದ್ಯಾರ್ಥಿಗಳು

ಇಸ್ರೇಲ್ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಸಂಘರ್ಷದ ನಡುವೆ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತ ನಡೆಸುತ್ತಿರುವ ನಿರಂತರ ಪ್ರಯತ್ನವಾದ ಆಪರೇಷನ್ ಸಿಂಧು ಅಡಿಯಲ್ಲಿ ವಿಶೇಷ ವಿಮಾನವು ಇಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಮಧ್ಯಪ್ರಾಚ್ಯ ದೇಶದಿಂದ ತನ್ನ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರ ಆಪರೇಷನ್ ಸಿಂಧುವನ್ನು ಪ್ರಾರಂಭಿಸಿದೆ.

Operation Sindhu: ಇಸ್ರೇಲ್ ಜೊತೆಗಿನ ಸಂಘರ್ಷದ ನಡುವೆ ಇರಾನ್‌ನಿಂದ ದೆಹಲಿಗೆ ಬಂದಿಳಿದ 310 ಭಾರತೀಯ ವಿದ್ಯಾರ್ಥಿಗಳು
Operation Sindhu
ಸುಷ್ಮಾ ಚಕ್ರೆ
|

Updated on: Jun 21, 2025 | 8:20 PM

Share

ನವದೆಹಲಿ, ಜೂನ್ 21: ಇರಾನ್‌ನ (Iran) ಟೆಹ್ರಾನ್‌ನಿಂದ 310 ಭಾರತೀಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದ ವಿಶೇಷ ವಿಮಾನವು ಇಂದು ಸಂಜೆ (ಜೂನ್ 21) ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು. ಇರಾನ್​​ನಲ್ಲಿ ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯ ನಡುವೆ ಭಾರತೀಯ ವಿದ್ಯಾರ್ಥಿಗಳನ್ನು ಮನೆಗೆ ಸುರಕ್ಷಿತವಾಗಿ ಕರೆತರಲು ಭಾರತೀಯ ಅಧಿಕಾರಿಗಳು ಸಂಘಟಿತ ಪ್ರಯತ್ನ ನಡೆಸಿದರು. ಈ ಕಾರ್ಯಾಚರಣೆಯನ್ನು ವಿದೇಶಾಂಗ ಸಚಿವಾಲಯ (MEA) ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲ್ವಿಚಾರಣೆ ಮಾಡಿತು. ಈ ವೇಳೆ ವಿದ್ಯಾರ್ಥಿಗಳ ಪ್ರಯಾಣ ಮತ್ತು ಆಗಮನಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಯಿತು.

ದೆಹಲಿಗೆ ವಿಮಾನದ ಆಗಮನದ ನಂತರ ಆರೋಗ್ಯ ಮತ್ತು ವಲಸೆ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಯಿತು. ಈ ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಲಾಯಿತು. ಇಸ್ರೇಲ್-ಇರಾನ್ ಸಂಘರ್ಷ ಹೆಚ್ಚುತ್ತಿರುವ ನಡುವೆ ತಮ್ಮ ಸುರಕ್ಷಿತ ಮರಳುವಿಕೆಗೆ ಸಹಾಯ ಮಾಡಿದ್ದಕ್ಕಾಗಿ ವಿದ್ಯಾರ್ಥಿಗಳು ಭಾರತ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ
Image
ಧಮ್ಕಿಯಿಂದ ಪ್ರಯೋಜನವಾಗಿಲ್ಲ, ಇರಾನ್ ವಿರುದ್ಧ ಯುದ್ಧಕ್ಕೆ ಸಿದ್ಧವಾದ ಟ್ರಂಪ್
Image
ಭಾರತದ ಕಡೆಯಿಂದ ಮೋದಿ ಯುದ್ಧ ನಿಲ್ಲಿಸಿದರು; ವರಸೆ ಬದಲಿಸಿದ ಟ್ರಂಪ್
Image
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
Image
ಇರಾನ್ ಶರಣಾಗುವುದಿಲ್ಲ, ಮಧ್ಯಪ್ರವೇಶಿಸಬೇಡಿ; ಟ್ರಂಪ್​ಗೆ ಖಮೇನಿ ಎಚ್ಚರಿಕೆ

ಇದನ್ನೂ ಓದಿ: Israel-Iran Conflict: ಇಸ್ರೇಲ್‌-ಇರಾನ್‌ ಯುದ್ಧದಲ್ಲಿ 600ಕ್ಕೂ ಹೆಚ್ಚು ಜನ ಸಾವು, ಟೆಲ್ ಅವೀವ್ ಮೇಲೆ 400 ಕ್ಷಿಪಣಿಗಳ ದಾಳಿ

ಇರಾನ್‌ನ ಮಶಾದ್‌ನಿಂದ ಬಂದಿಳಿದ ವಿಮಾನವು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಿಂದ ಬಂದ 290 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತೊಯ್ದಿತು. ಈ ವಿಮಾನ ಶುಕ್ರವಾರ (ಜೂನ್ 20) ತಡರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಇಸ್ರೇಲ್ ಮತ್ತು ಇರಾನ್ ನಡುವಿನ ವೈಷಮ್ಯ ಹೆಚ್ಚುತ್ತಿರುವಂತೆ, ಮಧ್ಯಪ್ರಾಚ್ಯ ದೇಶದಿಂದ ತನ್ನ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರ ಆಪರೇಷನ್ ಸಿಂಧುವನ್ನು ಪ್ರಾರಂಭಿಸಿದೆ. ಭಾರತದ ಸ್ಥಳಾಂತರಿಸುವ ಪ್ರಯತ್ನಗಳಿಗೆ ಅನುಕೂಲವಾಗುವಂತೆ ಜೂನ್ 20ರಂದು ಇರಾನ್ ತನ್ನ ವಾಯುಪ್ರದೇಶವನ್ನು ತೆರೆಯಿತು. ವಿದ್ಯಾರ್ಥಿಗಳನ್ನು ಮೊದಲು ಟೆಹ್ರಾನ್‌ನಿಂದ ಮಶಾದ್‌ಗೆ ಸ್ಥಳಾಂತರಿಸಲಾಯಿತು. ನಂತರ ದೆಹಲಿಗೆ ಕರೆತರಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು