AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿ ಡ್ರೋನ್‌ ಬಳಸಿ ಭಾರತದ 36 ಸ್ಥಳಗಳ ಮೇಲೆ ಪಾಕಿಸ್ತಾನ ದಾಳಿಗೆ ಯತ್ನ; ಸೋಫಿಯಾ ಖುರೇಷಿ

ಗುರುವಾರ ರಾತ್ರಿ 4 ರಾಜ್ಯಗಳಲ್ಲಿ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿತ್ತು. ಇದಕ್ಕೆ ಉತ್ತರವಾಗಿ ಭಾರತ ಪಾಕಿಸ್ತಾನದ ಕರಾಚಿ, ಲಾಹೋರ್, ಸಿಯಾಚಿನ್ ಮುಂತಾದ ಪ್ರದೇಶಗಳಿಗೆ ನುಗ್ಗಿ ವೈಮಾನಿಕ ದಾಳಿ ನಡೆಸಿತ್ತು. ನಿನ್ನೆ ಎರಡೂ ದೇಶಗಳ ನಡುವೆ ನಡೆದ ದಾಳಿಯ ಬಗ್ಗೆ ಮಾಹಿತಿ ನೀಡಲು ವಿದೇಶಾಂಗ ಸಚಿವಾಲಯ ಇದೀಗ ಸುದ್ದಿಗೋಷ್ಠಿ ನಡೆಸುತ್ತಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಸಿಂಧೂರ್-2 ಬಗ್ಗೆ ಮಾಹಿತಿ ನೀಡಿದ್ದಾರೆ.

ಟರ್ಕಿ ಡ್ರೋನ್‌ ಬಳಸಿ ಭಾರತದ 36 ಸ್ಥಳಗಳ ಮೇಲೆ ಪಾಕಿಸ್ತಾನ ದಾಳಿಗೆ ಯತ್ನ; ಸೋಫಿಯಾ ಖುರೇಷಿ
Mea's Briefing
Follow us
ಸುಷ್ಮಾ ಚಕ್ರೆ
|

Updated on:May 09, 2025 | 6:07 PM

ನವದೆಹಲಿ, ಮೇ 9: ಗುರುವಾರ ರಾತ್ರಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಡ್ರೋನ್ ದಾಳಿಯ (Pakistan Drone Attack) ಬಗ್ಗೆ ವಿದೇಶಾಂಗ ಸಚಿವಾಲಯ ಹಾಗೂ ಭಾರತೀಯ ಸೇನೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದೆ. ಪಾಕಿಸ್ತಾನ ನಾಗರಿಕ ವಿಮಾನಗಳನ್ನು ಗುರಾಣಿಗಳಾಗಿ ಬಳಸುತ್ತಿದೆ. ಪಾಕಿಸ್ತಾನ ಪಡೆಗಳು ಟರ್ಕಿಶ್ ಡ್ರೋನ್‌ಗಳನ್ನು ಬಳಸಿ 36 ಸ್ಥಳಗಳ ಮೇಲೆ ದಾಳಿಗೆ ಯತ್ನಿಸಿವೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ನಿನ್ನೆ ರಾತ್ರಿ ಭಾರತದ ಹಲವು ನಗರಗಳ ಮೇಲೆ ಡ್ರೋನ್ ದಾಳಿಗೆ ಯತ್ನ ನಡೆದಿದೆ. ಪಾಕಿಸ್ತಾನ ಸೇನೆ ಡ್ರೋನ್ ದಾಳಿಗೆ ಯತ್ನಿಸಿತ್ತು. ನಾವು ಆ ಡ್ರೋನ್ ದಾಳಿ ಯತ್ನವನ್ನು ವಿಫಲಗೊಳಿಸಿದ್ದೇವೆ. ಭಾರತದ ಮೇಲೆ ಹಾರಿಸಿದ್ದ ಹಲವು ಡ್ರೋನ್‌ಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಖುರೇಷಿ ಹೇಳಿದ್ದಾರೆ.

“ಭಾರತದ ಮೇಲೆ ಹಾರಿಸಿದ್ದ ಹಲವು ಡ್ರೋನ್‌ಗಳನ್ನು ಧ್ವಂಸಗೊಳಿಸಿದ್ದೇವೆ. ಉರಿ, ಪೂಂಚ್‌, ಅಖ್ನೂರ್‌ ಸೇರಿ ಎಲ್‌ಒಸಿಯಲ್ಲಿ ಭಾರಿ ಗುಂಡಿನ ದಾಳಿ ನಡೆದಿದೆ. ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೂ ತಕ್ಕ ತಿರುಗೇಟು ನೀಡಿದ್ದೇವೆ. ಪಂಜಾಬ್‌ ಏರ್ ಡಿಫೆನ್ಸ್‌ ಸಿಸ್ಟಮ್‌ ಮೂಲಕ ಪಾಕಿಸ್ತಾನದ ಸೇನೆಯ ದಾಳಿ ಯತ್ನ ವಿಫಲಗೊಳಿಸಲಾಗಿದೆ. ಪಾಕಿಸ್ತಾನದಿಂದ 300-400 ಡ್ರೋನ್‌ಗಳನ್ನು ಹಾರಿಸಲಾಗಿದೆ. ಮೇ 8 ಮತ್ತು ಮೇ 9ರ ಮಧ್ಯರಾತ್ರಿ ಪಾಕಿಸ್ತಾನಿ ಸೇನೆಯು ಪಶ್ಚಿಮ ಗಡಿಗಳಲ್ಲಿನ ಮಿಲಿಟರಿ ಸ್ಥಾಪನೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು” ಎಂದಿದ್ದಾರೆ.

ಇದನ್ನೂ ಓದಿ
Image
ಸೇನಾ ಕಾರ್ಯಾಚರಣೆಯ ಲೈವ್ ಬೇಡ: ಟಿವಿ ಚಾನೆಲ್​ಗಳಿಗೆ ರಕ್ಷಣಾ ಇಲಾಖೆ ಸೂಚನೆ
Image
ಪಾಕ್​ ಜನ ಪ್ರಧಾನಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?
Image
ಭಾರತೀಯ ಸೇನೆ ದಾಳಿ ಮಾಡಿದ ಪಾಕಿಸ್ತಾನದ ನಗರಗಳ ಇತಿಹಾಸವೇನು ಗೊತ್ತೇ?
Image
ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?

“ಲೇಹ್‌ನಿಂದ ಸರ್ ಕ್ರೀಕ್‌ವರೆಗೆ ಪಾಕಿಸ್ತಾನಿ ಸೇನೆಯು ಒಳನುಸುಳುವಿಕೆಗಾಗಿ ಡ್ರೋನ್‌ಗಳನ್ನು ಬಳಸಿತು. ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನಿ ಡ್ರೋನ್‌ಗಳನ್ನು ತಟಸ್ಥಗೊಳಿಸಿವೆ. ಈ ಡ್ರೋನ್‌ಗಳನ್ನು ಗುಪ್ತಚರ ಮಾಹಿತಿ ಸಂಗ್ರಹಿಸಲು ಬಳಸಲಾಗುತ್ತಿತ್ತು. ಆರಂಭಿಕ ವರದಿಗಳ ಪ್ರಕಾರ, ಪಾಕಿಸ್ತಾನದ ಬಳಸಿದ ಡ್ರೋನ್​ಗಳು ಟರ್ಕಿಯ ಸೋಂಗಾರ್ ಡ್ರೋನ್‌ಗಳು. ಪಾಕಿಸ್ತಾನಿ ಯುಎವಿ ಕೂಡ ಭಟಿಂಡಾದಲ್ಲಿರುವ ಮಿಲಿಟರಿ ನೆಲೆಯ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆದರೆ ಆ ಪ್ರಯತ್ನವನ್ನು ವಿಫಲಗೊಳಿಸಲಾಯಿತು” ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.

ಕೆಲವು ಸೈನಿಕರಿಗೆ ಗಾಯ:

“ಪಾಕಿಸ್ತಾನದ ದಾಳಿಗೆ ಪ್ರತಿಕ್ರಿಯೆಯಾಗಿ 4 ಪಾಕಿಸ್ತಾನಿ ಮಿಲಿಟರಿ ಸ್ಥಾಪನೆಗಳ ವಿರುದ್ಧ ಡ್ರೋನ್‌ಗಳನ್ನು ಹಾರಿಸಲಾಯಿತು. ಈ ಡ್ರೋನ್‌ಗಳಲ್ಲಿ ಒಂದು ಎಡಿ (ವಾಯು ರಕ್ಷಣಾ) ರಾಡಾರ್ ಅನ್ನು ನಾಶಮಾಡಲು ಸಾಧ್ಯವಾಯಿತು. ಆದರೆ, ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಉರಿ, ಪೂಂಚ್, ರಾಜೌರಿ, ಅಖ್ನೂರ್ ಇತ್ಯಾದಿಗಳಲ್ಲಿ ದಾಳಿ ನಡೆಸಲು ಭಾರೀ ಫಿರಂಗಿ ಮತ್ತು ಡ್ರೋನ್‌ಗಳನ್ನು ಬಳಸಿತು. ಇದು ಕೆಲವು ಭಾರತೀಯ ಸೈನಿಕರನ್ನು ಗಾಯಗೊಳಿಸಿದೆ” ಎಂದು ಸೋಫಿಯಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Fri, 9 May 25

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?