AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್ ಚದುರಂಗ ಆಟದಂತಿತ್ತು, ನಾವು ಪಾಕ್​ ಅನ್ನು ಚೆಕ್​​ಮೇಟ್ ಮಾಡಿದ್ದೇವೆ: ಸೇನಾ ಮುಖ್ಯಸ್ಥ

ಆಪರೇಷನ್ ಸಿಂಧೂರ್(Operation Sindoor) ಚೆಸ್ ಆಟದಂಡಿತ್ತು, ನಾವು ಪಾಕ್​ ಅನ್ನು ಚೆಕ್​​ಮೇಟ್ ಮಾಡಿದ್ದೇವೆ ಎಂದು ಭಾರತ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಹೇಗೆ ಆಪರೇಷನ್ ಸಿಂಧೂರ್ ಬೇರೆಲ್ಲಾ ಕಾರ್ಯಾಚರಣೆಗಳಿಗಿಂತ ಭಿನ್ನವಾಗಿತ್ತು ಎಂಬುದನ್ನು ವಿವರಿಸಿದ್ದಾರೆ. ಆಪರೇಷನ್ ಸಿಂಧೂರ್​​ನ್ನು ನಾವು ಚೆಸ್​​ನಂತೆ ಆಡಿದ್ದೇವೆ. ಶತ್ರುಗಳ ಮುಂದಿನ ನಡೆ ಏನು? ನಾವು ಏನು ಮಾಡಲಿದ್ದೇವೆ ಎಂಬುದು ಗೊತ್ತಿರಲಿಲ್ಲ. ಇದನ್ನು ಗ್ರೇಝೋನ್ ಎಂದು ಕರೆಯಲಾಗುತ್ತದೆ.

ಆಪರೇಷನ್ ಸಿಂಧೂರ್ ಚದುರಂಗ ಆಟದಂತಿತ್ತು, ನಾವು ಪಾಕ್​ ಅನ್ನು ಚೆಕ್​​ಮೇಟ್ ಮಾಡಿದ್ದೇವೆ: ಸೇನಾ ಮುಖ್ಯಸ್ಥ
ಉಪೇಂದ್ರ ದ್ವಿವೇದಿ
ನಯನಾ ರಾಜೀವ್
|

Updated on: Aug 10, 2025 | 9:25 AM

Share

ನವದೆಹಲಿ, ಆಗಸ್ಟ್​ 10: ಆಪರೇಷನ್ ಸಿಂಧೂರ್(Operation Sindoor) ಚೆಸ್ ಆಟದಂಡಿತ್ತು, ನಾವು ಪಾಕ್​ ಅನ್ನು ಚೆಕ್​​ಮೇಟ್ ಮಾಡಿದ್ದೇವೆ ಎಂದು ಭಾರತ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಹೇಗೆ ಆಪರೇಷನ್ ಸಿಂಧೂರ್ ಬೇರೆಲ್ಲಾ ಕಾರ್ಯಾಚರಣೆಗಳಿಗಿಂತ ಭಿನ್ನವಾಗಿತ್ತು ಎಂಬುದನ್ನು ವಿವರಿಸಿದ್ದಾರೆ. ಆಪರೇಷನ್ ಸಿಂಧೂರ್​​ನ್ನು ನಾವು ಚೆಸ್​​ನಂತೆ ಆಡಿದ್ದೇವೆ. ಶತ್ರುಗಳ ಮುಂದಿನ ನಡೆ ಏನು? ನಾವು ಏನು ಮಾಡಲಿದ್ದೇವೆ ಎಂಬುದು ಗೊತ್ತಿರಲಿಲ್ಲ. ಇದನ್ನು ಗ್ರೇಝೋನ್ ಎಂದು ಕರೆಯಲಾಗುತ್ತದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ಸಂಬಂಧಿಸಿದ ಮೊದಲ ಸಭೆ ನಡೆಸಲಾಯಿತು. ಏಪ್ರಿಲ್ 23 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮೂವರು ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಭೆ ನಡೆಸಲಾಯಿತು, ಆಗ ಕಾರ್ಯಾಚರಣೆಯನ್ನು ನಿರ್ಧರಿಸಲು ಸೇನೆಗೆ ಮುಕ್ತ ಹಸ್ತ ನೀಡಲಾಯಿತು ಎಂದು ದ್ವಿವೇದಿ ಹೇಳಿದರು.

ಮತ್ತಷ್ಟು ಓದಿ: ಭಾರತ ನಮ್ಮ ಒಂದು ವಿಮಾನವನ್ನೂ ಹೊಡೆದುರುಳಿಸಿಲ್ಲ; ಐಎಎಫ್​ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯೆ

ಮೇ 7 ರಿಂದ ಪಾಕಿಸ್ತಾನದ ವಿರುದ್ಧ ನಡೆಸಿದ ಕಾರ್ಯಾಚರಣೆಗಳನ್ನು ವಿವರಿಸಲು ಸೇನಾ ಮುಖ್ಯಸ್ಥರು ಚೆಸ್‌ನ ಉದಾಹರಣೆಯನ್ನು ತೆಗೆದುಕೊಂಡು, ಇದು ಸಾಂಪ್ರದಾಯಿಕ ಯುದ್ಧಗಳಂತಲ್ಲ ಎಂದು ಹೇಳಿದರು. ಈ ಕಾರ್ಯಾಚರಣೆಯು ಭಾರತದ ಹೆಚ್ಚಿನ ನಿಖರತೆ, ಸಂಘಟಿತ ಮಿಲಿಟರಿ ಕ್ರಮದ ಸಾಮರ್ಥ್ಯವನ್ನು ಪ್ರದರ್ಶಿಸಿತು, ಇದು ಭಯೋತ್ಪಾದಕ ಮೂಲಸೌಕರ್ಯವನ್ನು ಯಶಸ್ವಿಯಾಗಿ ಕೆಡವಿತು.

ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಕ್ಷಿಪಣಿಯು ಆಪರೇಷನ್ ಸಿಂಧೂರ್‌ನಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಧ್ಯಕ್ಷ ಸಮೀರ್ ವಿ. ಕಾಮತ್ ಹೇಳಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಯಿತು. ಈ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು.

ಆಪರೇಷನ್ ಸಿಂಧೂರ್ ಮೂಲಕ ಭಾರತವು ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ನಾಶಪಡಿಸಿದ್ದಷ್ಟೇ ಅಲ್ಲದೆ ತನ್ನ ಸ್ಥಳೀಯ ತಂತ್ರಜ್ಞಾನದ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಹೇಗೆ ಎಂಬುದನ್ನು ಭಾರತ ತೋರಿಸಿಕೊಟ್ಟಿದೆ ಎಂದಿದ್ದಾರೆ.

ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮುಖ್ಯಸ್ಥ ಸಮೀರ್ ಕಾಮತ್ ಸಮೀರ್, ಭಾರತವು ತನ್ನ ಸ್ಥಳೀಯ ತಂತ್ರಜ್ಞಾನದಿಂದ ತನ್ನ ಗಡಿಗಳನ್ನು ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬ ಸಂದೇಶವೂ ಆಗಿತ್ತು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ