AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್​ಗೆ ಒಂದು ವರ್ಷ: ಪಾಕಿಸ್ತಾನಕ್ಕೆ ಬಲವಾದ ಸಂದೇಶ ಕೊಟ್ಟ ರಾಜನಾಥ್ ಸಿಂಗ್

ಆಪರೇಷನ್ ಸಿಂಧೂರ್‌ಗೆ ಒಂದು ವರ್ಷ. ಇದು ಭಾರತದ ಮಿಲಿಟರಿ ಶೌರ್ಯ ಮತ್ತು ದೃಢ ಸಂಕಲ್ಪದ ಸಂಕೇತವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಸಂದರ್ಭದಲ್ಲಿ ಸೇನೆಯ ಸಾಹಸಕ್ಕೆ ನಮಿಸಿ, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತಂದರೆ ಸಶಸ್ತ್ರ ಪಡೆಗಳು ನಿರ್ಣಾಯಕವಾಗಿ ಉತ್ತರಿಸಲು ಸಿದ್ಧ ಎಂದು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಕಾರ್ಯಾಚರಣೆಯು ಭಯೋತ್ಪಾದನೆ ವಿರುದ್ಧ ಭಾರತದ ಬದ್ಧತೆಯನ್ನು ಎತ್ತಿಹಿಡಿದಿದೆ.

ಆಪರೇಷನ್ ಸಿಂಧೂರ್​ಗೆ ಒಂದು ವರ್ಷ: ಪಾಕಿಸ್ತಾನಕ್ಕೆ ಬಲವಾದ ಸಂದೇಶ ಕೊಟ್ಟ ರಾಜನಾಥ್ ಸಿಂಗ್
ರಾಜನಾಥ್ ಸಿಂಗ್ Image Credit source: Deccan Chronicle
ನಯನಾ ರಾಜೀವ್
|

Updated on: May 07, 2026 | 8:22 AM

Share

ನವದೆಹಲಿ, ಮೇ 08: ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ ಮತ್ತು ದೇಶದ ದೃಢ ಸಂಕಲ್ಪದ ಸಂಕೇತವಾದ ‘ಆಪರೇಷನ್ ಸಿಂಧೂರ್’ (Operation Sindoor)ನಡೆದು ಇಂದು ಭರ್ತಿ ಒಂದು ವರ್ಷ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಹೇಯ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಈ ನಿಖರವಾದ ದಾಳಿಯು ಆಧುನಿಕ ಮಿಲಿಟರಿ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ರಕ್ಷಣಾ ಸಚಿವರ ನಮನ ಮತ್ತು ಎಚ್ಚರಿಕೆ ಈ ವಿಶೇಷ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನೆಯ ಸಾಹಸಕ್ಕೆ ನಮಿಸಿದ್ದಾರೆ. ಆಪರೇಷನ್ ಸಿಂಧೂರ್ ರಾಷ್ಟ್ರೀಯ ಸಂಕಲ್ಪದ ಸಂಕೇತ. ಇದೇ ವೇಳೆ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ ಅವರು, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತಂದರೆ ಸಶಸ್ತ್ರ ಪಡೆಗಳು ನಿರ್ಣಾಯಕವಾಗಿ ಉತ್ತರಿಸಲು ಸದಾ ಸಿದ್ಧ ಎಂದು ಎಚ್ಚರಿಸಿದ್ದಾರೆ.

ಆಪರೇಷನ್ ಸಿಂಧೂರ್ ಹಿನ್ನೆಲೆ ಕಳೆದ ವರ್ಷ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 26 ಅಮಾಯಕ ನಾಗರಿಕರು ಬಲಿಯಾಗಿದ್ದರು. ಈ ರಕ್ತಪಾತಕ್ಕೆ ತಕ್ಕ ಪಾಠ ಕಲಿಸಲು ಭಾರತ ಮೇ 7 ರಂದು ‘ಆಪರೇಷನ್ ಸಿಂಧೂರ್’ ಆರಂಭಿಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ (PoK) ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ದಾಳಿ ನಡೆಸಿತು.

ಮತ್ತಷ್ಟು ಓದಿ: ಆಪರೇಷನ್ ಸಿಂಧೂರ್ ಅಬ್ಬರ, ಪಾಕ್ ಉಗ್ರರ ಕೋಟೆಗೆ ಲಗ್ಗೆ, ಒಂದು ವರ್ಷವಾದ್ರೂ ಹೊರಬರಲು ಹೆದರುತ್ತಿದ್ದಾರೆ ಸಯೀದ್-ಅಜರ್

ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೊಯ್ಬಾ (LeT) ಸಂಘಟನೆಗಳಿಗೆ ಸೇರಿದ 9ಕ್ಕೂ ಹೆಚ್ಚು ಪ್ರಮುಖ ಕಮಾಂಡ್ ಕೇಂದ್ರಗಳನ್ನು ಭಾರತೀಯ ಸೇನೆ ಧೂಳೀಪಟ ಮಾಡಿತು. ಈ ದಾಳಿಯಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ಹತರಾದರು.

ಭಾರತೀಯ ವಾಯುಪಡೆಯು ಕಾರ್ಯಾಚರಣೆಯ ರೋಚಕ ವೀಡಿಯೋವನ್ನು ಹಂಚಿಕೊಂಡಿದ್ದು, ಭಾರತ ಯಾವುದನ್ನೂ ಮರೆಯುವುದಿಲ್ಲ, ಯಾವುದನ್ನೂ ಕ್ಷಮಿಸುವುದಿಲ್ಲ ಎಂದು ಗುಡುಗಿದೆ.

ನಾಲ್ಕು ದಿನಗಳ ಸುದೀರ್ಘ ಸಂಘರ್ಷ ಭಾರತದ ದಾಳಿಗೆ ಬೆಚ್ಚಿಬಿದ್ದ ಪಾಕಿಸ್ತಾನ ಮೇ 8 ರಿಂದ 10 ರವರೆಗೆ ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆದರೆ, ಭಾರತವು ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಮೂಲಕ ಪಾಕಿಸ್ತಾನದ ಸೇನಾ ನೆಲೆಗಳಿಗೇ ತಿರುಗೇಟು ನೀಡಿತು. ನಾಲ್ಕು ದಿನಗಳ ಕಾಲ ಗಡಿಯಲ್ಲಿ ಭೀಕರ ಘರ್ಷಣೆ ನಡೆದ ನಂತರ, ಪಾಕಿಸ್ತಾನದ ಕೋರಿಕೆಯ ಮೇರೆಗೆ ಮೇ 10 ರಂದು ಶಾಂತಿ ಸ್ಥಾಪನೆಯಾಯಿತು.

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತವು ತನ್ನ ಗಡಿ ಮತ್ತು ಜನರ ರಕ್ಷಣೆಗಾಗಿ ಗಡಿಯಾಚೆ ನುಗ್ಗಿ ದಾಳಿ ನಡೆಸಲು ಹಿಂಜರಿಯುವುದಿಲ್ಲ ಎಂಬುದನ್ನು ಆಪರೇಷನ್ ಸಿಂಧೂರ್ ಜಗತ್ತಿಗೆ ಸಾರಿದೆ. ಆತ್ಮನಿರ್ಭರತೆಯತ್ತ ಹೆಜ್ಜೆ ಹಾಕುತ್ತಿರುವ ಭಾರತಕ್ಕೆ ಈ ಕಾರ್ಯಾಚರಣೆಯು ಮಿಲಿಟರಿ ಸಾಮರ್ಥ್ಯದ ದೊಡ್ಡ ಸಾಕ್ಷಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು