Operation Sindoor: ದಾಳಿ ಮಾಡಿದ್ರೆ ನಾವೇನ್ ಸುಮ್ನಿರ್ತೀವಾ ಎಂದಿದ್ದ ಪಾಕ್ಗೆ ಭಾರತ ದಾಳಿ ಮಾಡುವಾಗ ಗೊತ್ತೇ ಆಗಿಲ್ಲ
ಭಾರತವು ಪಹಲ್ಗಾಮ್ನಲ್ಲಿ ಉಗ್ರರು ಮಾಡಿದ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ದಾಳಿ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ ನಾವೇನು ಸುಮ್ಮನಿರ್ತೀವಾ ಎಂದು ಪಾಕಿಸ್ತಾನ ಹೇಳುತ್ತಲೇ ಇತ್ತು, ದಾಳಿ ಮಾಡ್ತೀವಿ ನೀವು ಏನು ಮಾಡ್ತೀರೋ ಮಾಡಿ ಎಂದು ಭಾರತ ದಾಳಿ ಮಾಡಿಯೇ ಬಿಟ್ಟಿದೆ. ಉಗ್ರರು ಅಳಿಸಿದ್ದ ಹಿಂದೂ ಮಹಿಳೆಯರ ಸಿಂಧೂರಕ್ಕೆ ಪ್ರತಿಕ್ರಿಯೆಯಾಗಿ ಭಾರತವು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ.

ನವದೆಹಲಿ, ಮೇ 07: ಭಾರತವು ಪಹಲ್ಗಾಮ್(Pahalgam) ನಲ್ಲಿ ಉಗ್ರರು ಮಾಡಿದ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ದಾಳಿ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ ನಾವೇನು ಸುಮ್ಮನಿರ್ತೀವಾ ಎನ್ನುತ್ತಿದ್ದ ಪಾಕಿಸ್ತಾನಕ್ಕೆ ಭಾರತ ದಾಳಿ ಮಾಡಿದ್ದು ಗೋತ್ತೇ ಆಗಿಲ್ಲ. ಉಗ್ರರು ಅಳಿಸಿದ್ದ ಹಿಂದೂ ಮಹಿಳೆಯರ ಸಿಂಧೂರಕ್ಕೆ ಪ್ರತಿಕ್ರಿಯೆಯಾಗಿ ಭಾರತವು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ.
ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ವಾಯುಪಡೆಯ ವಿಮಾನಗಳು ಪಿಒಕೆ ಮತ್ತು ಪಾಕಿಸ್ತಾನದಲ್ಲಿನ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿವೆ. ಭಾರತದ ಕ್ರಮದಿಂದಾಗಿ ಭಯೋತ್ಪಾದಕರಾದ ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಅವರ ಅಡಗುತಾಣಗಳು ನಾಶವಾಗಿವೆ ಎಂದು ವರದಿಯಾಗಿದೆ. ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ತುರ್ತು ಸಭೆ ಕರೆದಿದ್ದಾರೆ.
ಭಾರತ ತಾನು ಹೇಳಿದ್ದನ್ನು ಮಾಡಿದೆ; ಭಾರತದ ಈ ದಾಳಿಯ ನಂತರ, ಇಡೀ ಜಗತ್ತು ಭಾರತದ ಶಕ್ತಿಯನ್ನು ಒಪ್ಪಿಕೊಳ್ಳುತ್ತಿದೆ. ಭಾರತ ದಾಳಿ ಮಾಡಲು ಧೈರ್ಯ ಮಾಡಬಾರದು, ಇಲ್ಲದಿದ್ದರೆ ಪರಿಣಾಮಗಳು ಕೆಟ್ಟದಾಗಿರುತ್ತವೆ ಎಂದು ಪಾಕಿಸ್ತಾನದ ನಾಯಕರು ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದರು.
ಮತ್ತಷ್ಟು ಓದಿ: ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು
ಪಹಲ್ಗಾಮ್ ದಾಳಿಯ ನಂತರ, ಆಪರೇಷನ್ ಸಿಂಧೂರ್ ಅಡಿಯಲ್ಲಿ 9 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಅಲ್ಲಿಂದ ಭಾರತದ ಮೇಲೆ ದಾಳಿ ನಡೆಸಲು ಯೋಜಿಸಲಾಗಿತ್ತು. ಭಾರತ ಈ ದಾಳಿಯನ್ನು ಬಹಳ ಬುದ್ಧಿವಂತಿಕೆಯಿಂದ ನಡೆಸಿದೆ ಮತ್ತು ಪಾಕಿಸ್ತಾನವನ್ನು ಮತ್ತೊಮ್ಮೆ ಮೂರ್ಖರನ್ನಾಗಿ ಮಾಡಿದೆ.
ಮೂರ್ಖನಾದ ಪಾಕಿಸ್ತಾನ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ಘೋಷಣೆಯನ್ನು ಭಾರತ ಮೊದಲ ದಿನವೇ ಮಾಡಿತ್ತು. ಆದರೆ ಇದನ್ನು ಯಾವಾಗ ಮತ್ತು ಹೇಗೆ ಮಾಡಲಾಗುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ನೀಡಲಾಗಿಲ್ಲ. ದಾಳಿಯ ನಂತರ ಪ್ರಧಾನಿ ಮೋದಿ ಭದ್ರತಾ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಭೆ ನಡೆಸುತ್ತಿದ್ದರು.
ಏಪ್ರಿಲ್ 22 ರ ಸುಮಾರು ಎರಡು ವಾರಗಳ ನಂತರ, ಭಾರತ ಸರ್ಕಾರವು ಮೇ 7 ರಂದು ದೇಶಾದ್ಯಂತ ಅಣಕು ಡ್ರಿಲ್ ನಡೆಸಲಾಗುವುದು ಎಂದು ಘೋಷಿಸಿದೆ. ಮೇ 7 ರ ನಂತರವೇ ಈ ದಾಳಿ ನಡೆಯುತ್ತದೆ ಎಂದು ಪಾಕಿಸ್ತಾನಕ್ಕೆ ಖಚಿತವಾಗಿತ್ತು ಆದರೆ ಭಾರತೀಯ ಸೇನೆಯು ಪಾಕಿಸ್ತಾನವನ್ನು ವಂಚಿಸಿ ಮೇ 7 ರ ಆರಂಭದಲ್ಲಿ ಪಾಕಿಸ್ತಾನಕ್ಕೆ ಆಘಾತ ನೀಡಿತು.
ಎಷ್ಟು ಉಗ್ರರ ಸಾವು ವಾಯುಪಡೆಯ ಪ್ರಕಾರ, ಈ ದಾಳಿಯು ಭಯೋತ್ಪಾದಕರ ಅಡಗುತಾಣಗಳ ಮೇಲೆ ನಡೆಸಲಾಗಿದ್ದು, ಇದರಲ್ಲಿ 9 ಅಡಗುತಾಣಗಳು ನಾಶವಾಗಿವೆ. ವರದಿಗಳ ಪ್ರಕಾರ, ಈ ದಾಳಿಯಲ್ಲಿ 50 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ದಾಳಿಯ ನಂತರ ಬೀದಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅನೇಕ ಕಟ್ಟಡಗಳು ಹಾನಿಗೊಳಗಾಗಿರುವುದನ್ನು ಕಾಣಬಹುದು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:38 am, Wed, 7 May 25