AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DGMO Statement: ಆಪರೇಷನ್ ಸಿಂದೂರ್: ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ ಡಿಜಿಎಂಒ

DGMO Press Meet: ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಯಾಗಿ ಭಾರತದ ಮಿಲಿಟರಿ ಮೇ 7ರಂದು ನಡೆಸಿದ ಸಿಂದೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಡಿಜಿಎಂಒ ರಾಜೀವ್ ಘಾಯ್ ಹೇಳಿದ್ಧಾರೆ. ಅಂದು, ಭಾರತವು ಪಾಕಿಸ್ತಾನ ಹಾಗೂ ಪಿಒಕೆಯ 9 ಸ್ಥಗಳಲ್ಲಿ ಉಗ್ರರ ತಾಣಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಮಾಡಿತ್ತು. ಆ ಕಾರ್ಯಾಚರಣೆಯ ಕೆಲ ಸಾಕ್ಷ್ಯಗಳನ್ನು ಡಿಜಿಎಂಒ ರಾಜೀವ್ ಘಾಯ್ ಬಿಚ್ಚಿಟ್ಟಿದ್ದಾರೆ.

DGMO Statement: ಆಪರೇಷನ್ ಸಿಂದೂರ್: ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ ಡಿಜಿಎಂಒ
ಡಿಜಿಎಂಒ ರಾಜೀವ್ ಘಾಯ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 11, 2025 | 7:17 PM

Share

ನವದೆಹಲಿ, ಮೇ 11: ನಾಲ್ಕು ದಿನಗಳ ಹಿಂದೆ ಮೇ 7ರಂದು ಭಾರತ ನಡೆಸಿದ ಆಪರೇಷನ್ ಸಿಂದೂರ್​​​ನಲ್ಲಿ (Operation Sindoor) 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ (DGMO Rajiv Ghai) ಹೇಳಿದ್ದಾರೆ. ಕದನ ವಿರಾಮ (ceasefire) ಘೋಷಣೆಯಾಗಿ ಒಂದು ದಿನದ ಬಳಿಕ ಭಾರತದ ವಿವಿಧ ಪಡೆಗಳ ಮಹಾನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಸಿಂದೂರ್ ಹಾಗು ನಂತರದ ಭಾರತದ ರಣತಂತ್ರಗಳ ಕೆಲ ವಿವರಗಳನ್ನು ಬಿಚ್ಚಿಟ್ಟಿದ್ದಾರೆ.

ವಾಯುಪಡೆ ಕಾರ್ಯಾಚರಣೆಗಳ ಡೈರೆಕ್ಟರ್ ಜನರಲ್ ಏರ್ ಮಾರ್ಷಲ್ ಎ.ಕೆ. ಭಾರ್ತಿ, ನೌಕಾಪಡೆ ಕಾರ್ಯಾಚರಣೆಗಳ ಡೈರೆಕ್ಟರ್ ಜನರಲ್ ವೈಸ್ ಅಡ್ಮಿರಲ್ ಪ್ರಮೋದ್ ಅವರೂ ಈ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು, ಕಾರ್ಯಾಚರಣೆಗಳ ಕೆಲ ವಿವರ ನೀಡಿದ್ದಾರೆ. ಆಪರೇಷನ್ ಸಿಂದೂರ್​​​​ನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ನಾಶ ಮಾಡಿರುವುದಕ್ಕೆ ಸಾಕ್ಷ್ಯಗಳನ್ನೂ ಈ ಸಂದರ್ಭದಲ್ಲಿ ಪ್ರಸ್ತುತಪಡಿಸಿದ್ದಾರೆ.

ಆಪರೇಷನ್ ಸಿಂದೂರ್​​​ನಲ್ಲಿ ಹಲವು ಉಗ್ರರನ್ನು ಕೊಲ್ಲಲಾಗಿದೆ. ಲಷ್ಕರೆ ತೈಯಬಾದ ಮುದಾಸಿರ್, ಜೈಷೆ ಸಂಘಟನೆಯ ಉಗ್ರ ಹಫೀಜ್ ಮೊಹಮ್ಮದ್, ಬಹಾವಲ್ಪುರದ ಮರ್ಕಜ್ ಸಭಾನಲ್ಲಾದ ಉಸ್ತುವಾರಿ ಜಮೀಲ್, ಲಷ್ಕರೆ ತೈಬಾ ಉಗ್ರ ಖಾಲಿದ್ ಮೊದಲಾದವರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ಸಂಗತಿಯನ್ನು ಡಿಜಿಎಂಒ ನೀಡಿದ್ದಾರೆ.

ಇದನ್ನೂ ಓದಿ: ‘ಅಲ್ಲಿಂದ ಗುಂಡು ಹಾರಿಸಿದ್ರೆ, ಇಲ್ಲಿಂದಲೂ ಗುಂಡು ಸಿಡಿಯುತ್ತೆ’: ಎಚ್ಚರಿಕೆ ಸಂದೇಶ ರವಾನಿಸಿದ ಮೋದಿ

ಭಾರತವು ಪಾಕಿಸ್ತಾನದ ನಾಗರಿಕರನ್ನು ಗುರಿಯಾಗಿಸಿ ಯಾವುದೇ ದಾಳಿ ಮಾಡಿಲ್ಲ. ಆದರೆ, ಪಾಕಿಸ್ತಾನವು ಭಾರತದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ ಎಂದರು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು.

ಭಾರತದಲ್ಲಿ ಡಿಜಿಎಂಒ ಪಾತ್ರ ಏನು?

ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇತರ ದೇಶಗಳ ಡಿಜಿಎಂಒಗಳ ಜೊತೆ ನೇರ ಸಂಪರ್ಕದಲ್ಲಿರುತ್ತಾರೆ. ಎರಡು ದೇಶಗಳ ಮಧ್ಯೆ ಅನಗತ್ಯವಾದ ಸಂಘರ್ಷ ಏರ್ಪಡದಂತೆ ನಿಯಂತ್ರಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳು ಅವರಿಗೆ ಇರುತ್ತವೆ.

ಭಯೋತ್ಪಾದನೆ ವಿರೋಧಿ ಕ್ರಮಗಳು ಸೇರಿದಂತೆ ವಿವಿಧ ಮಿಲಿಟರಿ ಕಾರ್ಯಾಚರಣೆಗಳನ್ನು ಯೋಜಿಸುವುದು ಇವರ ಜವಾಬ್ದಾರಿಗಳಲ್ಲಿ ಒಂದು. ಯಾವುದೇ ರೀತಿಯ ಕಾರ್ಯಾಚರಣೆ ಮಾಡಬೇಕೆಂದರೂ ಅದಕ್ಕೆ ಸಶಸ್ತ್ರ ಸೇನಾ ಪಡೆಗಳು ಸರಿಯಾಗಿ ಅಣಿಗೊಂಡಿವೆಯಾ ಎನ್ನುವುದನ್ನು ಇವರು ಖಾತ್ರಿಪಡಿಸುತ್ತಾರೆ.

ಇದನ್ನೂ ಓದಿ: Target Success: ಆಪರೇಷನ್ ಸಿಂದೂರ್​​​ನಿಂದ ಮೂರೂ ಗುರಿ ಈಡೇರಿಕೆ: ಭಾರತ ಹೇಳಿಕೆ

ಭಾರತ ಮತ್ತು ಪಾಕಿಸ್ತಾನದ ಸಂಘರ್ಷದ ವಿಚಾರಕ್ಕೆ ಬಂದರೆ ಎರಡೂ ದೇಶಗಳ ಪ್ರಥಮ ಸಂಪರ್ಕ ಕೇಂದ್ರವು ಡಿಜಿಎಂಒಗಳಾಗಿರುತ್ತಾರೆ. ಭಾರತದೊಂದಿಗೆ ಪಾಕಿಸ್ತಾನ ಕದನ ವಿರಾಮ ಪಡೆಯಲು ಅಲ್ಲಿನ ಡಿಜಿಎಂಒ ಅವರು ಭಾರತದ ಡಿಜಿಎಂಒರನ್ನು ಮೊದಲು ಸಂಪರ್ಕಿಸಿ ಪ್ರಸ್ತಾಪ ಮುಂದಿಟ್ಟರು. ಅಲ್ಲಿಂದ ಎರಡೂ ದೇಶಗಳ ಮಧ್ಯೆ ಕಮ್ಯುನಿಕೇಶನ್ ಸಾಧ್ಯವಾಯಿತು. ಈ ಹಿನ್ನೆಲೆಯಲ್ಲಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಪಾತ್ರ ಮಹತ್ವದ್ದಾಗಿರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Sun, 11 May 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!