AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್​ ಸಿಂಧೂರ್​ ಬಳಿಕ ದಾಳಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ

Modi Cabinet Meeting: ಭಾರತವು ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿಯನ್ನು ಯಶಸ್ವಿಯಾಗಿ ನಡೆದಿದೆ. ಆಪರೇಷನ್ ಸಿಂಧೂರ್(Operation Sindoor)​ ಎಂದು ಹೆಸರಿಡಲಾಗಿತ್ತು. ಈ ಕುರಿತು ಪ್ರಧಾನಿ ಮೋದಿ ಇಂದು ಸಚಿವ ಸಂಪುಟ ಸಭೆ ನಡೆಸಿದ್ದು, ಅದರಲ್ಲಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಸೇನೆಯು ಯಾವುದೇ ಪೂರ್ವಸಿದ್ಧತೆಯಿಲ್ಲದೆ ಮತ್ತು ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ ಎಂದು ಪ್ರಧಾನಿ ಹೇಳಿದರು. ಇದು ನಮಗೆ ಹೆಮ್ಮೆಯ ಕ್ಷಣ. ಪ್ರಧಾನಿ ಸೇನೆಯನ್ನು ಶ್ಲಾಘಿಸಿದರು.

ಆಪರೇಷನ್​ ಸಿಂಧೂರ್​ ಬಳಿಕ ದಾಳಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ
ಭಾರತೀಯ ಸೇನೆಯು ಯಾವುದೇ ಪೂರ್ವಸಿದ್ಧತೆಯಿಲ್ಲದೆ ಮತ್ತು ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇದು ನಮಗೆ ಹೆಮ್ಮೆಯ ಕ್ಷಣ. ಪ್ರಧಾನಿ ಮೋದಿ ಸೇನೆಯನ್ನು ಶ್ಲಾಘಿಸಿದರು.
ನಯನಾ ರಾಜೀವ್
|

Updated on: May 07, 2025 | 2:50 PM

Share

ನವದೆಹಲಿ, ಮೇ 07: ಭಾರತವು ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿಯನ್ನು ಯಶಸ್ವಿಯಾಗಿ ನಡೆದಿದೆ. ಆಪರೇಷನ್ ಸಿಂಧೂರ್(Operation Sindoor)​ ಎಂದು ಹೆಸರಿಡಲಾಗಿತ್ತು. ಈ ಕುರಿತು ಪ್ರಧಾನಿ ಮೋದಿ ಇಂದು ಸಚಿವ ಸಂಪುಟ ಸಭೆ ನಡೆಸಿದ್ದು, ಅದರಲ್ಲಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಸೇನೆಯು ಯಾವುದೇ ಪೂರ್ವಸಿದ್ಧತೆಯಿಲ್ಲದೆ ಮತ್ತು ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ ಎಂದು ಪ್ರಧಾನಿ ಹೇಳಿದರು. ಇದು ನಮಗೆ ಹೆಮ್ಮೆಯ ಕ್ಷಣ. ಪ್ರಧಾನಿ ಸೇನೆಯನ್ನು ಶ್ಲಾಘಿಸಿದರು.

ಇದಾದ ನಂತರ, ಕೇಂದ್ರ ಸಚಿವ ಸಂಪುಟದ ಎಲ್ಲಾ ಸಚಿವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ತಮ್ಮ ನಂಬಿಕೆಯನ್ನು ವ್ಯಕ್ತಪಡಿಸಿದರು ಮತ್ತು ಇಡೀ ದೇಶವು ಅವರೊಂದಿಗಿದೆ ಎಂದು ಹೇಳಿದರು.

ಇದನ್ನೂ ಓದಿ
Image
ಜೈ ಹಿಂದ್, ಜಸ್ಟೀಸ್ ಸರ್ವ್ಡ್: ಆಪರೇಷನ್ ಬೆನ್ನಲ್ಲೇ ಭಾರತೀಯ ಸೇನೆ ಪೋಸ್ಟ್
Image
ಆಪರೇಷನ್ ಸಿಂಧೂರ್: ಪ್ರಧಾನಿ ಮೋದಿ ನಿರಂತರ ಮೇಲ್ವಿಚಾರಣೆ
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಆಪರೇಷನ್ ಸಿಂಧೂರ್, ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ಸಂಪುಟ ಸಭೆಯಲ್ಲಿದ್ದ ಎಲ್ಲರಿಗೂ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ. ತಡರಾತ್ರಿಯಲ್ಲಿ ಭಾರತವು ಪಾಕಿಸ್ತಾನದಲ್ಲಿರುವ ಒಟ್ಟು ಒಂಬತ್ತು ಭಯೋತ್ಪಾದಕ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿತು, ಇದರಲ್ಲಿ ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೊಯ್ಬಾ ಪ್ರಧಾನ ಕಚೇರಿ, ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಲಾಂಚ್ ಪ್ಯಾಡ್ ಮತ್ತು ಇತರ ಸ್ಥಳಗಳು ಸೇರಿವೆ. ಇದರಲ್ಲಿ ಕನಿಷ್ಠ 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಭಾರತವು ಪಾಕಿಸ್ತಾನದ ವಿರುದ್ಧ ನಿನ್ನೆ ತಡರಾತ್ರಿ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲು ಇಂದು ರಕ್ಷಣಾ ಇಲಾಖೆ ಮತ್ತು ವಿದೇಶಾಂಗ ಸಚಿವಾಲಯದ ಜಂಟಿ ಪತ್ರಿಕಾಗೋಷ್ಠಿ ಕೂಡ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಭಾರತೀಯ ಸೇನಾ ಕರ್ನಲ್ ಸೋಫಿಯಾ ಖುರೇಷಿ, ಭಾರತೀಯ ಸಶಸ್ತ್ರ ಪಡೆಗಳು ಮೇ 6 ಮತ್ತು 7 ರ ರಾತ್ರಿ 1.05 ರಿಂದ 1.30 ರ ನಡುವೆ ಪಾಕಿಸ್ತಾನದಲ್ಲಿ ತಮ್ಮ ಕಾರ್ಯಾಚರಣೆಯನ್ನು ನಡೆಸಿದ್ದವು ಎಂದು ಹೇಳಿದರು.

ಮತ್ತಷ್ಟು ಓದಿ: ಇದು ಮೋದಿ ಸಂಖ್ಯಾಶಾಸ್ತ್ರ : 11,12,13 ದಿನಗಳ ಅಂತರದಲ್ಲಿ ಪಾಕ್ ಮೇಲೆ ಮಹತ್ವದ ದಾಳಿ

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಈ ಸಂಪೂರ್ಣ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಭಾರತ ಸರ್ಕಾರ ಹೇಳಿದೆ. ಈ ದಿನ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ, ಭಯೋತ್ಪಾದಕರು 26 ಅಮಾಯಕರನ್ನು ಅವರ ಕುಟುಂಬ ಸದಸ್ಯರ ಮುಂದೆಯೇ ಕೊಂದಿದ್ದರು. ಒಬ್ಬ ನೇಪಾಳಿ ಪ್ರಜೆಯೂ ಇದ್ದರು.

ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿ ಪಾಕಿಸ್ತಾನ ಮತ್ತು ಭಯೋತ್ಪಾದಕರಿಗೆ ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ಮೋದಿಯವರ ಭಾರತವನ್ನು ಕೆರಳಿಸಬೇಡಿ ಅವರು ಹೇಳಿದ್ದನ್ನು ಮಾಡುತ್ತಾರೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ