AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor: ಪ್ರಧಾನಿ ಮೋದಿ ರಕ್ತ, ನೀರಿನ ಹರಿವೆರಡನ್ನೂ ನಿಲ್ಲಿಸಿದ್ದಾರೆ: ಸಂಬಿತ್ ಪಾತ್ರಾ

ಪ್ರಧಾನಿ ನರೇಂದ್ರ ಮೋದಿ ರಕ್ತ ಹಾಗೂ ನೀರಿನ ಹರಿವೆರಡನ್ನೂ ನಿಲ್ಲಿಸಿದ್ದಾರೆ ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರಾ ಹೇಳಿದ್ದಾರೆ. ಒಂದು ದೇಶವು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರದೊಳಗೆ ಆಳವಾಗಿ ದಾಳಿ ಮಾಡಿರುವುದು ಇದೇ ಮೊದಲು. ಎರಡೂ ಕಡೆಯ ನಡುವಿನ ಪ್ರಸ್ತುತ ಪರಿಸ್ಥಿತಿ ಕದನ ವಿರಾಮವಲ್ಲ, ಬದಲಾಗಿ ಒಂದು ತಿಳಿವಳಿಕೆಯಾಗಿದೆ ಎಂದು ಬಿಜೆಪಿ ನಾಯಕ ಸ್ಪಷ್ಟಪಡಿಸಿದರು. ಪಾಕಿಸ್ತಾನ ಭಾರತದ ಮೇಲೆ ಮತ್ತೊಂದು ಭಯೋತ್ಪಾದಕ ದಾಳಿ ನಡೆಸಿದ ಕ್ಷಣ ನಾವು ಆ ಬೇಲಿಯಲ್ಲವನ್ನೂ ಮುರಿದು ಮುನ್ನುಗ್ಗುತ್ತೇವೆ ಎಂದು ಪಾತ್ರಾ ಎಚ್ಚರಿಸಿದರು.

Operation Sindoor: ಪ್ರಧಾನಿ ಮೋದಿ ರಕ್ತ, ನೀರಿನ ಹರಿವೆರಡನ್ನೂ ನಿಲ್ಲಿಸಿದ್ದಾರೆ: ಸಂಬಿತ್ ಪಾತ್ರಾ
ಸಂಬಿತ್ ಪಾತ್ರಾ
ನಯನಾ ರಾಜೀವ್
|

Updated on:May 12, 2025 | 12:11 PM

Share

ನವದೆಹಲಿ, ಮೇ 12: ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿ, ಆಪರೇಷನ್ ಸಿಂಧೂರ್(Operation Sindoor) ಆರಂಭಿಸುವ ಮೂಲಕ ಭಾರತ ರಕ್ತ ಮತ್ತು ನೀರಿನ ಹರಿವನ್ನು ನಿಲ್ಲಿಸಿದೆ ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ಇದು ಅಸಾಧಾರಣ ಸಾಧನೆ. ಪಾಕಿಸ್ತಾನದೊಳಗೆ ನುಗ್ಗಿ ದಾಳಿ ಮಾಡಿ ಅವರ ಭಯೋತ್ಪಾದಕ ಶಿಬಿರಗಳನ್ನು ನಿರ್ಮೂಲನೆ ಮಾಡುವುದು ಸುಲಭವಲ್ಲ.

ಇದು ನೂತನ ಭಾರತ, ನಾವು ಅವರ ನೆಲಕ್ಕೆ ತೆರಳಿ ಅವರ ಮೇಲೆ ದಾಳಿ ಮಾಡಿದ್ದೇವೆ ಎಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾತ್ರಾ ಹೇಳಿದ್ದಾರೆ. ಒಂದು ದೇಶವು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರದೊಳಗೆ ಆಳವಾಗಿ ದಾಳಿ ಮಾಡಿರುವುದು ಇದೇ ಮೊದಲು. ಎರಡೂ ಕಡೆಯ ನಡುವಿನ ಪ್ರಸ್ತುತ ಪರಿಸ್ಥಿತಿ ಕದನ ವಿರಾಮವಲ್ಲ, ಬದಲಾಗಿ ಒಂದು ತಿಳಿವಳಿಕೆಯಾಗಿದೆ ಎಂದು ಬಿಜೆಪಿ ನಾಯಕ ಸ್ಪಷ್ಟಪಡಿಸಿದರು.

ಇದನ್ನೂ ಓದಿ
Image
ಪ್ರಮುಖ ವಾಯುನೆಲೆ ಧ್ವಂಸಗೊಳಿಸಿದ ಭಾರತ, ಇದಕ್ಕೆ ಬೆದರಿತೇ ಪಾಕಿಸ್ತಾನ?
Image
ಪ್ರಬಲ ಸಮರ ತಂತ್ರ: ಭಾರತದ ಉದಾಹರಣೆ ಕೊಟ್ಟ ಜಾನ್ ಸ್ಪೆನ್ಸರ್
Image
1971 ಹಾಗೂ 2025ರ ಪರಿಸ್ಥಿತಿಯಲ್ಲಿ ವ್ಯತ್ಯಾಸವಿದೆ: ಶಶಿ ತರೂರ್
Image
ಭಾರತದ ಈ ಮಿಸೈಲ್ ದಾಳಿಗೆ ಪಾಕ್ ಮಾತ್ರವಲ್ಲ, ಅಮೆರಿಕಕ್ಕೂ ಆಗಿತ್ತು ನಡುಕ

ಪಾಕಿಸ್ತಾನ ಭಾರತದ ಮೇಲೆ ಮತ್ತೊಂದು ಭಯೋತ್ಪಾದಕ ದಾಳಿ ನಡೆಸಿದ ಕ್ಷಣ ನಾವು ಆ ಬೇಲಿಯಲ್ಲವನ್ನೂ ಮುರಿದು ಮುನ್ನುಗ್ಗುತ್ತೇವೆ ಎಂದು ಪಾತ್ರಾ ಎಚ್ಚರಿಸಿದರು. ಏಪ್ರಿಲ್ 22 ರಿಂದ ಮೇ 7 ರವರೆಗೆ ದೇಶದೊಳಗೆ ತಕ್ಷಣದ ಕ್ರಮ ಕೈಗೊಳ್ಳುವ ಬೇಡಿಕೆ ಇತ್ತು ಎಂದು ಹೇಳಿದರು.

ಮತ್ತಷ್ಟು ಓದಿ: ಯುದ್ಧ ಬಾಲಿವುಡ್ ಸಿನಿಮಾ ಅಲ್ಲ: ಭಾರತೀಯ ಸೇನಾ ಮಾಜಿ ಮುಖ್ಯಸ್ಥ ನರವಾಣೆ

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಸಂಸದರು ಹೇಳಿದರು. ಇದು ಶತ್ರುಗಳ ಕಲ್ಪನೆಗೂ ಮೀರಿದ್ದು. ಭಾರತೀಯ ಸಶಸ್ತ್ರ ಪಡೆಗಳು ತಮ್ಮ ಭರವಸೆಯನ್ನು ಈಡೇರಿಸಿವೆ ಮತ್ತು ಹಿಂದೆ ಸರ್ಜಿಕಲ್ ಸ್ಟ್ರೈಕ್‌ಗಳಿದ್ದರೂ, ಪಾಕಿಸ್ತಾನ ಯಾವಾಗ ದಾಳಿ ಮಾಡುತ್ತದೆ ಎಂದು ಊಹಿಸಲು ಸಾಧ್ಯವಾಗಲಿಲ್ಲ ಎಂದರು.

ಮೇ 7 ರಂದು ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ನಿಖರ ದಾಳಿಯಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಜೈಶ್-ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್​ಗೆ ಸಂಬಂಧಿಸಿದ 9 ಪ್ರಮುಖ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಒಂಬತ್ತು ಭಯೋತ್ಪಾದಕ ಶಿಬಿರಗಳಲ್ಲಿ ಐದು ಪಿಒಕೆಯಲ್ಲಿ ಮತ್ತು ಉಳಿದ ನಾಲ್ಕು ಪಾಕಿಸ್ತಾನದಲ್ಲಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:06 pm, Mon, 12 May 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!