AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧೂರ ಅಳಿಸಿದವರಿಗೆ ಸಿಂಧೂರ್ ಆಪರೇಷನ್ ಮೂಲಕ ತಕ್ಕ ಶಾಸ್ತಿ: ಪಾಕ್​ ಒಳಗೆ ನುಗ್ಗಿ ಹೊಡೆದಿದ್ದೇವೆ ಎಂದ ಸೇನೆ

ಪಾಕಿಸ್ತಾನದ ಮೇಲೆ ಭಾರತ ನಡೆಸಿರುವ ವೈಮಾನಿಕ ದಾಳಿ ಕುರಿತು ಸೇನಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರನ್ನು ಪಾಕ್​ ಒಳಗೇ ನುಗ್ಗಿ ಹೊಡೆದಿದ್ದೇವೆ, ಇದೇ ಮೊದಲ ಬಾರಿಗೆ ಪಾಕಿಸ್ತಾನದ ಒಳಗೆ ನುಗ್ಗಿ ಲಷ್ಕರ್​-ಎ-ತೊಯ್ಬಾ, ಹಿಜ್ಬುಲ್ಲಾದ ಪ್ರಮುಖ ಕಚೇರಿಗಳನ್ನು ಧ್ವಂಸ ಮಾಡಲಾಗಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಮಾಹಿತಿ ನೀಡಿದರು.

ಸಿಂಧೂರ ಅಳಿಸಿದವರಿಗೆ ಸಿಂಧೂರ್ ಆಪರೇಷನ್ ಮೂಲಕ  ತಕ್ಕ ಶಾಸ್ತಿ: ಪಾಕ್​ ಒಳಗೆ ನುಗ್ಗಿ ಹೊಡೆದಿದ್ದೇವೆ ಎಂದ ಸೇನೆ
ಭಾರತೀಯ ಸೇನೆ
Follow us
ನಯನಾ ರಾಜೀವ್
|

Updated on:May 07, 2025 | 11:33 AM

ನವದೆಹಲಿ, ಮೇ 07: ಭಯೋತ್ಪಾದನೆ ನಿರ್ಮೂಲನೆಗೆ ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಲು ಸಿದ್ಧ ಎಂಬುದನ್ನು ಭಾರತೀಯ ಸೇನೆ ನಿರೂಪಿಸಿದೆ. ಸೇನಾಧಿಕಾರಿಗಳು ಆಪರೇಷನ್ ಸಿಂಧೂರ್(Operation Sindoor)​ ಕುರಿತು ಮಾಹಿತಿ ನೀಡಿದ್ದು, ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರನ್ನು ಪಾಕ್​ ಒಳಗೇ ನುಗ್ಗಿ ಹೊಡೆದಿದ್ದೇವೆ, ಇದೇ ಮೊದಲ ಬಾರಿಗೆ ಪಾಕಿಸ್ತಾನದ ಒಳಗೆ ನುಗ್ಗಿ ಲಷ್ಕರ್​-ಎ-ತೊಯ್ಬಾ, ಹಿಜ್ಬುಲ್ಲಾದ ಪ್ರಮುಖ ಕಚೇರಿಗಳನ್ನು ಧ್ವಂಸ ಮಾಡಲಾಗಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಮಾಹಿತಿ ನೀಡಿದರು.

ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಹಂಚಿಕೊಂಡ ಮಾಹಿತಿ ಈ ಕಾರ್ಯಚರಣೆ ಬೆಳಗಿನ ಜಾವ 1.05ರಿಂದ 1.30ರವರೆಗೆ ನಡೆಯಿತು. ಪಹಲ್ಗಾಮ್‌ನಲ್ಲಿ ಸಾವನ್ನಪ್ಪಿದ ಪ್ರವಾಸಿಗರಿಗಾಗಿ ಕಾರ್ಯಾಚರಣೆ ನಡೆಸಲಾಯಿತು. ಕಳೆದ 3 ದಶಕಗಳಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಸೃಷ್ಟಿಸಲಾಗುತ್ತಿದೆ.

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಮಾಕ್ ಡ್ರಿಲ್​ಗೆ ಭಾರತ ಸಜ್ಜು, ಇಸ್ರೇಲ್​ನಂತೆ ದಾಳಿ ನಡೆಯಲಿದೆ ಎಂದ ಪಾಕ್
Image
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
Image
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು

ಪಾಕಿಸ್ತಾನ ಮತ್ತು ಪಿಒಕೆಯಲ್ಲಿ 9 ಗುರಿಗಳನ್ನು ಗುರುತಿಸಲಾಯಿತು ಮತ್ತು ನಾವು ಅವುಗಳನ್ನು ನಾಶಪಡಿಸಿದ್ದೇವೆ. ಲಾಂಚ್‌ಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳನ್ನು ಗುರಿಯಾಗಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ನಾವು ಯಾವುದೇ ನಾಗರಿಕರ ಮೇಲಾಗಲಿ ಅಥವಾ ಪಾಕ್ ಮಿಲಿಟರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ, ಕೇವಲ ಉಗ್ರರ ನೆಲೆಗಳನ್ನು ಮಾತ್ರ ಧ್ವಂಸಗೊಳಿಸಿದ್ದೇವೆ ಎಂದು ಖುರೇಷಿ ಸ್ಪಷ್ಟಪಡಿಸಿದ್ದಾರೆ. ನಾಗರಿಕರಿಗೆ ಹಾನಿ ಮಾಡುವುದು ನಮ್ಮ ಉದ್ದೇಶವಲ್ಲ ಎಂದರು.

ಎಲ್ಲೆಲ್ಲಿ ದಾಳಿ ನಡೆದಿದೆ

  • ಮರ್ಕಜ್, ಸುಭಾನ್​ ಅಲ್ಲಾ, ಬವಾಲ್​ಪುರ್- ಜೈಷ್​-ಎ- ಮೊಹಮ್ಮದ್
  • ಮರ್ಕಜ್ ತೈಬಾ-ಮುರೀದಕೆ-ನಷ್ಕರ್​-ಎ-ತೊಯ್ಬಾ
  • ಸರ್ಜಲ್-ತೇರಾ ಕಲಾ-ಜೈಷ್​-ಎ-ಮೊಹಮ್ಮದ್
  • ಮೆಹನೂನಾ ಜೋಯಾ-ಸಿಯಾಲ್​ಕೋಟ್-ಹಿಜ್ಬುಲ್ ಮುಜಾಹಿದ್ದೀನ್
  • ಮರ್ಕಜ್ ಅಹಲೆ ಹದೀಮ್, ಬರ್​ನಾಲಾ, ಲಷ್ಕರ್​-ಎ-ತೊಯ್ಬಾ
  • ಮರ್ಕಜ್ ಅಬ್ಬಾಸ್, ಕೋಟಲಿ-ಜೈಷ್​ಎ ಮೊಹಮ್ಮದ್
  • ಮಸ್ಕರ್​ ರಹೀಲ್ ಶಾಹಿದ್, ಕೋಟಲಿ-ಜಿಜ್ಬುಲ್ ಮುಜಾಹಿದ್ದೀನ್
  • ಶಾವಯಿ ನಾಲಾ ಕ್ಯಾಂಪ್, ಮುಜಾಫರಾಬಾದ್, ಲಷ್ಕರ್​ ಎ ತೊಯ್ಬಾ
  • ಸೇಯ್​ದನಾ ಬಿಗಾಲ್​ ಕ್ಯಾಂಪ್- ಮುಜಾಫರಾಬಾದ್-ಜೈಷ್​ ಎ ಮೊಹಮ್ಮದ್

ಮತ್ತಷ್ಟು ಓದಿ: ಆಪರೇಷನ್ ಸಿಂಧೂರ್: ಸೇನೆ ಬಳಸಿದ ಅತ್ಯಾಧುನಿಕ ಸ್ಕಾಲ್ಪ್, ಹ್ಯಾಮರ್ ಮಿಸೈಲ್, ಡ್ರೋನ್ ವಿಶೇಷವೇನು?

ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಹೇಳಿದ್ದೇನು? ಇದು 26/11 ರ ನಂತರದ ಅತಿ ದೊಡ್ಡ ಘಟನೆಯಾಗಿದೆ, ಪಹಲ್ಗಾಮ್ ಒಂದು ಹೇಡಿತನದ ದಾಳಿಯಾಗಿದ್ದು, ಇದರಲ್ಲಿ ಜನರನ್ನು ಅವರ ಕುಟುಂಬಗಳ ಮುಂದೆಯೇ ಕೊಲ್ಲಲಾಯಿತು. ಜಮ್ಮು ಮತ್ತು ಕಾಶ್ಮೀರದ ಉತ್ತಮ ಸ್ಥಿತಿಯ ಮೇಲೆ ಪರಿಣಾಮ ಬೀರಲು ಈ ದಾಳಿಯನ್ನು ನಡೆಸಲಾಗಿದೆ. ಕಳೆದ ವರ್ಷ 2.25 ಕೋಟಿಗೂ ಹೆಚ್ಚು ಪ್ರವಾಸಿಗರು ಕಾಶ್ಮೀರಕ್ಕೆ ಬಂದಿದ್ದರು.

ಪಾಕಿಸ್ತಾನದ ಈ ನೆಲೆಗಳಲ್ಲಿ ಕುಳಿತು ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡಲು ಯೋಜನೆ ರೂಪಿಸುತ್ತಿತ್ತು ಹೀಗಾಗಿ, ಆ ದಾಳಿ ತಡೆಯಲು ಈ ದಾಳಿಯು ಅನಿವಾರ್ಯವಾಗಿತ್ತು ಎಂದರು. ಅಭಿವೃದ್ಧಿ ಮತ್ತು ಪ್ರಗತಿಗೆ ಹಾನಿ ಮಾಡುವ ಮೂಲಕ ಹಿಂದುಳಿದಿರುವಿಕೆಯನ್ನು ಕಾಯ್ದುಕೊಳ್ಳುವುದು ಈ ದಾಳಿಯ ಉದ್ದೇಶವಾಗಿದೆ. ಟಿಆರ್‌ಎಫ್ ಎಂದು ಕರೆದುಕೊಳ್ಳುವ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಇದನ್ನು ವಿಶ್ವಸಂಸ್ಥೆ ನಿಷೇಧಿಸಿದೆ ಮತ್ತು ಲಷ್ಕರ್‌ನೊಂದಿಗೆ ಸಂಬಂಧ ಹೊಂದಿದೆ. ಪಾಕಿಸ್ತಾನ ಮೂಲದ ಗುಂಪುಗಳಿಗೆ ಟಿಆರ್‌ಎಫ್ ಅನ್ನು ರಕ್ಷಣೆಯಾಗಿ ಬಳಸಲಾಗುತ್ತಿತ್ತು. ಲಷ್ಕರ್ ನಂತಹ ಸಂಘಟನೆಗಳು ಟಿಆರ್‌ಎಫ್ ನಂತಹ ಸಂಘಟನೆಗಳನ್ನು ಬಳಸುತ್ತಿವೆ. ಪಹಲ್ಗಾಮ್ ದಾಳಿಯ ತನಿಖೆಯು ಭಯೋತ್ಪಾದಕರಿಗೆ ಪಾಕಿಸ್ತಾನದೊಂದಿಗಿನ ಸಂಪರ್ಕವನ್ನು ಬಹಿರಂಗಪಡಿಸಿದೆ. ಪಾಕಿಸ್ತಾನ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ ಎಂಬ ಖ್ಯಾತಿಯನ್ನು ಗಳಿಸಿದೆ.

ಭಾರತವು 7 ರಾಜ್ಯಗಳ 11 ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಶ್ರೀನಗರ, ಜಮ್ಮು, ಶ್ರೀನಗರ, ಲೇಹ್, ಚಂಡೀಗಢ, ಬಿಕಾನೇರ್, ಜೋಧ್‌ಪುರ, ರಾಜ್‌ಕೋಟ್, ಧರ್ಮಶಾಲಾ, ಅಮೃತಸರ, ಭುಜ್ ಮತ್ತು ಜಾಮ್‌ನಗರದಲ್ಲಿ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಈ ವಿಮಾನ ನಿಲ್ದಾಣಗಳು ಪಾಕಿಸ್ತಾನ ಗಡಿಯ ಪಕ್ಕದಲ್ಲಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:32 am, Wed, 7 May 25

ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?