AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರುದ್ಧ ನಿರ್ಣಯ; ಸರ್ಕಾರಕ್ಕೆ ಹೆಚ್ಚಿನ ವಿಪಕ್ಷಗಳ ಬೆಂಬಲ; ಬಿಜೆಪಿಯಿಂದ ಸಭಾತ್ಯಾಗ

Tamil Nadu Assembly Passes Resolution Against NEET, BJP Stages Walkout: ತಮಿಳುನಾಡಿನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಅನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಲು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡನೆಯಾಗಿದೆ. ಸಿಎಂ ವಿಜಯ್ ನೇತೃತ್ವದ ಸರ್ಕಾರದ ಈ ನಿರ್ಣಯವನ್ನು ಡಿಎಂಕೆ, ಎಡಿಎಂಕೆ, ಪಿಎಂಕೆ ಇತ್ಯಾದಿ ಹೆಚ್ಚಿನ ವಿಪಕ್ಷಗಳು ಬಂಬಲಿಸಿವೆ. ಬಿಜೆಪಿ ಈ ನಿರ್ಣಯ ವಿರೋಧಿಸಿ ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡಿದೆ.

ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರುದ್ಧ ನಿರ್ಣಯ; ಸರ್ಕಾರಕ್ಕೆ ಹೆಚ್ಚಿನ ವಿಪಕ್ಷಗಳ ಬೆಂಬಲ; ಬಿಜೆಪಿಯಿಂದ ಸಭಾತ್ಯಾಗ
ತಮಿಳುನಾಡು ವಿಧಾನಸಭೆImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 11, 2026 | 1:50 PM

Share

ನವದೆಹಲಿ, ಆಗಸ್ಟ್ 11: ತಮಿಳುನಾಡು ವಿಧಾನಸಭೆಯಲ್ಲಿ ನೀಟ್ (NEET) ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಕೇಂದ್ರವನ್ನು ಒತ್ತಾಯಿಸಿ ಸಿಎಂ ವಿಜಯ್ ನೇತೃತ್ವದ ಸರ್ಕಾರವು ಇಂದು ಮಂಗಳವಾರ ಮಹತ್ವದ ನಿರ್ಣಯವನ್ನು ಮಂಡಿಸಿದೆ. ಬಿಜೆಪಿ ಹೊರತುಪಡಿಸಿ ಹೆಚ್ಚಿನ ವಿಪಕ್ಷಗಳು ಸರ್ಕಾರದ ಈ ನಿರ್ಣಯಕ್ಕೆ ಬೆಂಬಲ ನೀಡಿವೆ. ಬಿಜೆಪಿ ಸದಸ್ಯರು ಈ ನಿರ್ಣಯ ವಿರೋದಿಸಿ ಸದನದಿಂದ ಹೊರನಡೆದರು.

ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್’ ತಮಿಳುನಾಡಿನ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಸರ್ಕಾರ ವಾದಿಸಿ, ರಾಜ್ಯದಲ್ಲಿ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ಅಧಿಕೃತ ನಿರ್ಣಯವನ್ನು ಮಂಡಿಸಿತು.

ರಾಜ್ಯದ ಹಕ್ಕುಗಳ ಪ್ರತಿಪಾದನೆ: ಶಿಕ್ಷಣವು ರಾಜ್ಯ ಪಟ್ಟಿಯ ವಿಷಯವಾಗಿದ್ದು, ಕೇಂದ್ರ ಸರ್ಕಾರವು ನೀಟ್ ಪರೀಕ್ಷೆಯನ್ನು ಹೇರಿರುವುದು ಫೆಡರಲ್ ವ್ಯವಸ್ಥೆಗೆ ವಿರುದ್ಧವಾಗಿದೆ ಎಂಬುದು ಸರ್ಕಾರದ ಮುಖ್ಯ ವಾದ. ತಮಿಳುನಾಡು ತನ್ನದೇ ಆದ ಪ್ರವೇಶ ಪರೀಕ್ಷಾ ವಿಧಾನವನ್ನು ಹೊಂದಲು ಬಯಸುತ್ತಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ನಶೆ ಏಟಲ್ಲ, ತಾಂತ್ರಿಕ ದೋಷ ಕಾರಣ; ಏರ್ ಇಂಡಿಯಾ ವಿಮಾನ ಗಿರಕಿ ಹೊಡೆದ ಘಟನೆಗೆ ಕಾರಣ ಹುಡುಕಿದ ತನಿಖೆ

ಬಿಜೆಪಿಯಿಂದ ವಿರೋಧ ಮತ್ತು ಸಭೆತ್ಯಾಗ: ಈ ನಿರ್ಣಯಕ್ಕೆ ತಮಿಳುನಾಡು ಬಿಜೆಪಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ. ನಿರ್ಣಯವನ್ನು ಮಂಡಿಸಿದ ತಕ್ಷಣ ಬಿಜೆಪಿ ಶಾಸಕರು ಸದನದಲ್ಲಿ ಪ್ರತಿಭಟನೆ ನಡೆಸಿ, ಸಭಾಧ್ಯಕ್ಷರ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಅಂತಿಮವಾಗಿ, ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಸದಸ್ಯರು ಸದನದಿಂದ ವಾಕೌಟ್ ಮಾಡಿದರು.

ಸರ್ಕಾರದ ಸಮರ್ಥನೆ: ವಿರೋಧ ಪಕ್ಷದ ನಾಯಕರು ಈ ನಿರ್ಣಯವನ್ನು ಕೇವಲ ರಾಜಕೀಯ ಪ್ರೇರಿತ ಎಂದು ಟೀಕಿಸಿದರೆ, ಸಿಎಂ ವಿಜಯ್ ಅವರು, “ಇದು ನಮ್ಮ ರಾಜ್ಯದ ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಯಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಆಗಸ್ಟ್ 29ರಂದು ಅಮೆರಿಕದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ

ರಾಜ್ಯ ಸರ್ಕಾರವು ಮಂಡಿಸಿರುವ ಈ ನಿರ್ಣಯವನ್ನು ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅಲ್ಲಿಂದ ಇದು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕೇಂದ್ರ ಸರ್ಕಾರಕ್ಕೆ ರವಾನೆಯಾಗಬೇಕಿದೆ. ಈ ಪ್ರಕ್ರಿಯೆಯು ಕೇಂದ್ರ ಮತ್ತು ರಾಜ್ಯಗಳ ನಡುವಿನ ಮತ್ತೊಂದು ಸಂಘರ್ಷಕ್ಕೆ ನಾಂದಿ ಹಾಡುವ ಸಾಧ್ಯತೆಯಿದೆ. ಈ ಬೆಳವಣಿಗೆಯು ತಮಿಳುನಾಡು ರಾಜಕೀಯದಲ್ಲಿ ನೀಟ್ ವಿರೋಧಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ