AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್​

ತಿರುವನಂತಪುರಂ: ಇತ್ತೀಚೆಗೆ ಸುದ್ದಿಯಲ್ಲಿರುವ ಕೇರಳದ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣ ದಿನೇ ದಿನೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್​ರ ಪ್ರಧಾನ ಕಾರ್ಯದರ್ಶಿ M ಶಿವಶಂಕರ್​ರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ. ಆದರೆ, ಇಷ್ಟಕ್ಕೇ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿತ್ತಲ ಕೂಡಲೇ […]

Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್​
KUSHAL V
| Edited By: |

Updated on:Jul 07, 2020 | 2:12 PM

Share

ತಿರುವನಂತಪುರಂ: ಇತ್ತೀಚೆಗೆ ಸುದ್ದಿಯಲ್ಲಿರುವ ಕೇರಳದ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣ ದಿನೇ ದಿನೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್​ರ ಪ್ರಧಾನ ಕಾರ್ಯದರ್ಶಿ M ಶಿವಶಂಕರ್​ರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ.

ಆದರೆ, ಇಷ್ಟಕ್ಕೇ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿತ್ತಲ ಕೂಡಲೇ ಸಿಬಿಐ ತನಿಖೆ ನಡೆಸಿ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕಳೆದ ಭಾನುವಾರ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ವಿನಾಯಿತಿ (Diplomatic Immunity) ಬಳಸಿ 15 ಕೋಟಿ ರೂಪಾಯಿ ಬೆಲೆಬಾಳುವ ಬರೋಬ್ಬರಿ 30 ಕೆ.ಜಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಈ ವೇಳೆ ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿತ್ತು. ಈ ಪ್ರಕರಣದಲ್ಲಿ ರಾಜ್ಯದಲ್ಲಿರುವ UAE ದೇಶದ ರಾಯಭಾರ ಕಚೇರಿಯ ಹಳೆಯ ಸಿಬ್ಬಂದಿ ಹಾಗೂ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮ್ಯಾನೇಜರ್​ ಸ್ವಪ್ನಾ ಸುರೇಶ್​ರ ಕೈವಾಡ ಬೆಳಕಿಗೆ ಬಂದಿತ್ತು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಜಾವಾಬ್ದಾರಿಯನ್ನು ಸಿಎಂ ವಿಜಯನ್​ ಹೊತ್ತಿದ್ದಾರೆ. ಹೀಗಾಗಿ, ಪ್ರಕರಣದಲ್ಲಿ ಅವರ ಕೈವಾಡವೂ ಇದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಜೊತೆಗೆ, ದೇಶದಲ್ಲಿರುವ ರಾಯಭಾರ ಕಚೇರಿಯ ಸಿಬ್ಬಂದಿಗೆ ನೀಡಲಾಗುವ ರಾಜತಾಂತ್ರಿಕ ವಿನಾಯಿತಿಯ ದುಬರ್ಳಕೆ ಸಹ ಆಗಿದೆ. ಹಾಗಾಗಿ, ಕೂಡಲೇ ತನಿಖೆ ನಡೆಸಬೇಕೆಂದು ರಮೇಶ್​ ಚೆನ್ನಿತ್ತಲ ಆಗ್ರಹಿಸಿದ್ದಾರೆ.

Published On - 1:57 pm, Tue, 7 July 20

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!