AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್​

ತಿರುವನಂತಪುರಂ: ಇತ್ತೀಚೆಗೆ ಸುದ್ದಿಯಲ್ಲಿರುವ ಕೇರಳದ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣ ದಿನೇ ದಿನೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್​ರ ಪ್ರಧಾನ ಕಾರ್ಯದರ್ಶಿ M ಶಿವಶಂಕರ್​ರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ. ಆದರೆ, ಇಷ್ಟಕ್ಕೇ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿತ್ತಲ ಕೂಡಲೇ […]

Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್​
KUSHAL V
| Edited By: ಸಾಧು ಶ್ರೀನಾಥ್​|

Updated on:Jul 07, 2020 | 2:12 PM

Share

ತಿರುವನಂತಪುರಂ: ಇತ್ತೀಚೆಗೆ ಸುದ್ದಿಯಲ್ಲಿರುವ ಕೇರಳದ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣ ದಿನೇ ದಿನೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್​ರ ಪ್ರಧಾನ ಕಾರ್ಯದರ್ಶಿ M ಶಿವಶಂಕರ್​ರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ.

ಆದರೆ, ಇಷ್ಟಕ್ಕೇ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿತ್ತಲ ಕೂಡಲೇ ಸಿಬಿಐ ತನಿಖೆ ನಡೆಸಿ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕಳೆದ ಭಾನುವಾರ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ವಿನಾಯಿತಿ (Diplomatic Immunity) ಬಳಸಿ 15 ಕೋಟಿ ರೂಪಾಯಿ ಬೆಲೆಬಾಳುವ ಬರೋಬ್ಬರಿ 30 ಕೆ.ಜಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಈ ವೇಳೆ ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿತ್ತು. ಈ ಪ್ರಕರಣದಲ್ಲಿ ರಾಜ್ಯದಲ್ಲಿರುವ UAE ದೇಶದ ರಾಯಭಾರ ಕಚೇರಿಯ ಹಳೆಯ ಸಿಬ್ಬಂದಿ ಹಾಗೂ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮ್ಯಾನೇಜರ್​ ಸ್ವಪ್ನಾ ಸುರೇಶ್​ರ ಕೈವಾಡ ಬೆಳಕಿಗೆ ಬಂದಿತ್ತು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಜಾವಾಬ್ದಾರಿಯನ್ನು ಸಿಎಂ ವಿಜಯನ್​ ಹೊತ್ತಿದ್ದಾರೆ. ಹೀಗಾಗಿ, ಪ್ರಕರಣದಲ್ಲಿ ಅವರ ಕೈವಾಡವೂ ಇದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಜೊತೆಗೆ, ದೇಶದಲ್ಲಿರುವ ರಾಯಭಾರ ಕಚೇರಿಯ ಸಿಬ್ಬಂದಿಗೆ ನೀಡಲಾಗುವ ರಾಜತಾಂತ್ರಿಕ ವಿನಾಯಿತಿಯ ದುಬರ್ಳಕೆ ಸಹ ಆಗಿದೆ. ಹಾಗಾಗಿ, ಕೂಡಲೇ ತನಿಖೆ ನಡೆಸಬೇಕೆಂದು ರಮೇಶ್​ ಚೆನ್ನಿತ್ತಲ ಆಗ್ರಹಿಸಿದ್ದಾರೆ.

Published On - 1:57 pm, Tue, 7 July 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್