AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್​

ತಿರುವನಂತಪುರಂ: ಇತ್ತೀಚೆಗೆ ಸುದ್ದಿಯಲ್ಲಿರುವ ಕೇರಳದ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣ ದಿನೇ ದಿನೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್​ರ ಪ್ರಧಾನ ಕಾರ್ಯದರ್ಶಿ M ಶಿವಶಂಕರ್​ರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ. ಆದರೆ, ಇಷ್ಟಕ್ಕೇ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿತ್ತಲ ಕೂಡಲೇ […]

Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್​
KUSHAL V
| Updated By: ಸಾಧು ಶ್ರೀನಾಥ್​|

Updated on:Jul 07, 2020 | 2:12 PM

Share

ತಿರುವನಂತಪುರಂ: ಇತ್ತೀಚೆಗೆ ಸುದ್ದಿಯಲ್ಲಿರುವ ಕೇರಳದ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣ ದಿನೇ ದಿನೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್​ರ ಪ್ರಧಾನ ಕಾರ್ಯದರ್ಶಿ M ಶಿವಶಂಕರ್​ರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ.

ಆದರೆ, ಇಷ್ಟಕ್ಕೇ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿತ್ತಲ ಕೂಡಲೇ ಸಿಬಿಐ ತನಿಖೆ ನಡೆಸಿ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕಳೆದ ಭಾನುವಾರ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ವಿನಾಯಿತಿ (Diplomatic Immunity) ಬಳಸಿ 15 ಕೋಟಿ ರೂಪಾಯಿ ಬೆಲೆಬಾಳುವ ಬರೋಬ್ಬರಿ 30 ಕೆ.ಜಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಈ ವೇಳೆ ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿತ್ತು. ಈ ಪ್ರಕರಣದಲ್ಲಿ ರಾಜ್ಯದಲ್ಲಿರುವ UAE ದೇಶದ ರಾಯಭಾರ ಕಚೇರಿಯ ಹಳೆಯ ಸಿಬ್ಬಂದಿ ಹಾಗೂ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮ್ಯಾನೇಜರ್​ ಸ್ವಪ್ನಾ ಸುರೇಶ್​ರ ಕೈವಾಡ ಬೆಳಕಿಗೆ ಬಂದಿತ್ತು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಜಾವಾಬ್ದಾರಿಯನ್ನು ಸಿಎಂ ವಿಜಯನ್​ ಹೊತ್ತಿದ್ದಾರೆ. ಹೀಗಾಗಿ, ಪ್ರಕರಣದಲ್ಲಿ ಅವರ ಕೈವಾಡವೂ ಇದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಜೊತೆಗೆ, ದೇಶದಲ್ಲಿರುವ ರಾಯಭಾರ ಕಚೇರಿಯ ಸಿಬ್ಬಂದಿಗೆ ನೀಡಲಾಗುವ ರಾಜತಾಂತ್ರಿಕ ವಿನಾಯಿತಿಯ ದುಬರ್ಳಕೆ ಸಹ ಆಗಿದೆ. ಹಾಗಾಗಿ, ಕೂಡಲೇ ತನಿಖೆ ನಡೆಸಬೇಕೆಂದು ರಮೇಶ್​ ಚೆನ್ನಿತ್ತಲ ಆಗ್ರಹಿಸಿದ್ದಾರೆ.

Published On - 1:57 pm, Tue, 7 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ