AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾದರ್ ಸ್ಟಾನ್ ಸ್ವಾಮಿ ನಿಧನ; ರಾಷ್ಟ್ರಪತಿಗಳಿಗೆ ಪತ್ರ ಬರೆದು ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ನಾಯಕರು

ಸೋನಿಯಾ ಗಾಂಧಿ, ಶರದ್ ಪವಾರ್, ಮಮತಾ ಬ್ಯಾನರ್ಜಿ, ಎಂ.ಕೆ. ಸ್ಟಾಲಿನ್, ಹೇಮಂತ್ ಸೊರೇನ್, ಹೆಚ್.ಡಿ. ದೇವೇಗೌಡ, ಫರೂಕ್ ಅಬ್ದುಲ್ಲಾ, ತೇಜಸ್ವಿ ಯಾದವ್, ಡಿ. ರಾಜ, ಸೀತಾರಾಮ್ ಯೆಚೂರಿ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್​ಗೆ ಪತ್ರ ಬರೆದಿದ್ದಾರೆ.

ಫಾದರ್ ಸ್ಟಾನ್ ಸ್ವಾಮಿ ನಿಧನ; ರಾಷ್ಟ್ರಪತಿಗಳಿಗೆ ಪತ್ರ ಬರೆದು ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷ ನಾಯಕರು
ಸ್ಟ್ಯಾನ್ ಸ್ವಾಮಿ
TV9 Web
| Updated By: ganapathi bhat|

Updated on: Jul 06, 2021 | 11:29 PM

Share

ದೆಹಲಿ: ಫಾದರ್ ಸ್ಟಾನ್ ಸ್ವಾಮಿ ನಿಧನದ ಬಗ್ಗೆ ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರು ರಾಷ್ಟ್ರಪತಿಗಳಿಗೆ ಪತ್ರ ಬರೆದು ದುಃಖ ವ್ಯಕ್ತಪಡಿಸಿದ್ದಾರೆ. ಸ್ಟಾನ್ ಸ್ವಾಮಿಯನ್ನು ಕೆಟ್ಟದಾಗಿ ನಡೆಸಿಕೊಂಡವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಹಾಗೂ ಇದಕ್ಕೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ. ಸೋನಿಯಾ ಗಾಂಧಿ, ಶರದ್ ಪವಾರ್, ಮಮತಾ ಬ್ಯಾನರ್ಜಿ, ಎಂ.ಕೆ. ಸ್ಟಾಲಿನ್, ಹೇಮಂತ್ ಸೊರೇನ್, ಹೆಚ್.ಡಿ. ದೇವೇಗೌಡ, ಫರೂಕ್ ಅಬ್ದುಲ್ಲಾ, ತೇಜಸ್ವಿ ಯಾದವ್, ಡಿ. ರಾಜ, ಸೀತಾರಾಮ್ ಯೆಚೂರಿ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್​ಗೆ ಪತ್ರ ಬರೆದಿದ್ದಾರೆ.

84 ವರ್ಷ ವಯಸ್ಸಿನ ಫಾದರ್ ಹಾಗೂ ಹೋರಾಟಗಾರ ಸ್ಟಾನ್ ಸ್ವಾಮಿ ಜಾರ್ಖಂಡ್ ಭಾಗದ ಆದಿವಾಸಿ ಜನಾಂಗದ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದ್ದರು. ಅವರನ್ನು ಕಳೆದ ಅಕ್ಟೋಬರ್​ನಲ್ಲಿ ಯುಎಪಿಎ ಹಾಗೂ ಭಿಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿತ್ತು ಎಂದು ಪತ್ರವನ್ನು ಆರಂಭಿಸಲಾಗಿದೆ.

ಅವರಿಗೆ ಪಾರ್ಕಿನ್​ಸನ್ ಖಾಯಿಲೆ ಹಾಗೂ ಕೆಲವು ಆರೋಗ್ಯ ಸಮಸ್ಯೆಗಳು ಇದ್ದರೂ ಚಿಕಿತ್ಸೆ ನಿರಾಕರಿಸಲಾಗಿತ್ತು. ಈ ಬಗ್ಗೆ ದೇಶವ್ಯಾಪಿ ಪ್ರತಿಭಟನೆ ನಡೆಸಿದ ಬಳಿಕವಷ್ಟೇ ಜೈಲಿನಲ್ಲಿ ಸಣ್ಣ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಕೊರೊನಾ ಕೇಸ್​ನಲ್ಲಿ ಅತಿಯಾದ ಏರಿಕೆ ಕಂಡುಬಂದಿದ್ದ ತಲೋಜಾ ಜೈಲಿನಿಂದ ಅವರನ್ನು ಸ್ಥಳಾಂತರಿಸುವ ಬಗ್ಗೆಯೂ ಬಹಳಷ್ಟು ಬೇಡಿಕೆಗಳನ್ನು ಮಾಡಲಾಗಿತ್ತು ಎಂದು ಉಲ್ಲೇಖಿಸಲಾಗಿದೆ.

ತನ್ನನ್ನು ಮನೆಗೆ ಕಳುಹಿಸುವ ಬಗ್ಗೆ ಹಾಗೂ ಜಾಮೀನು ನೀಡುವ ಬಗ್ಗೆ ಮಾಡಿದ ಮನವಿಯೂ ತಿರಸ್ಕರಿಸಲ್ಪಟ್ಟಿದ್ದವು. ಈ ಮಧ್ಯೆ ಬಾಂಬೆ ಹೈಕೋರ್ಟ್​ನ ಮಧ್ಯಸ್ಥಿಕೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಕೊವಿಡ್-19 ಕಾರಣದಿಂದ ಆರೋಗ್ಯ ಹದಗೆಡುತ್ತಿರುವಾಗಲಾದರೂ ಈ ಕ್ರಮ ಕೈಗೊಂಡ ಬಾಂಬೆ ಹೈಕೋರ್ಟ್​ಗೆ ಧನ್ಯವಾದಗಳು. ಆದರೆ, ಇದು ನ್ಯಾಯಾಂಗ ಬಂಧನದಲ್ಲಿ ಇರುವಾಗಲೇ ಸಂಭವಿಸಬಹುದಾದ ಸಾವನ್ನು ತಡೆಗಟ್ಟಲು ಅದಾಗಲೇ ಬಹಳ ತಡವಾಗಿತ್ತು ಎಂದು ಬೇಸರ ಹಾಗೂ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಈ ಪ್ರಕರಣದಲ್ಲಿ ತಪ್ಪು ಕೇಸ್ ದಾಖಲಿಸಿ, ಸ್ಟಾನ್ ಸ್ವಾಮಿ ಜೈಲಿನಲ್ಲೇ ಇರುವಂತೆ ಮಾಡಿದ ಹಾಗೂ ಅಮಾನವೀಯವಾಗಿ ನಡೆಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿಮ್ಮ ಸರ್ಕಾರಕ್ಕೆ ತಕ್ಷಣ ಆದೇಶಿಸಬೇಕು ಎಂದು ರಾಷ್ಟ್ರಪತಿಗಳಲ್ಲಿ ವಿರೋಧ ಪಕ್ಷದವರು ಕೇಳಿಕೊಳ್ಳುತ್ತೇವೆ. ಹಾಗೂ ಭಿಮಾ ಕೊರೆಗಾಂವ್ ಪ್ರಕರಣ ಮತ್ತು ರಾಜಕೀಯ ಪ್ರೇರಿತ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಯುಎಪಿಎ, ದೇಶದ್ರೋಹ ಪ್ರಕರಣವನ್ನು ದುರ್ಬಳಕೆ ಮಾಡಿಕೊಂಡು ಜೈಲುವಾಸ ಅನುಭವಿಸುತ್ತಿರುವವರನ್ನು ಬಿಡುಗಡೆಗೊಳಿಸಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಜಾಮೀನು ಅರ್ಜಿ ವಿಚಾರಣೆಯ ದಿನವೇ ಭೀಮಾ ಕೊರೆಗಾಂವ್ ಗಲಭೆ ಆರೋಪಿ ಫಾದರ್ ಸ್ಟಾನ್ ಸ್ವಾಮಿ ನಿಧನ

ಭೀಮಾ-ಕೋರೆಗಾಂವ್ ಕದನಕ್ಕೆ 203 ವರ್ಷ; ಭಾರತದ ದಲಿತ ಕಥನದಲ್ಲಿ ಈ ಯುದ್ಧಕ್ಕೆ ಏಕಿಷ್ಟು ಪ್ರಾಮುಖ್ಯ?

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ