AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Opposition Meeting Postponed: ಜುಲೈ 17-18ರಂದು ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ: ಕಾಂಗ್ರೆಸ್

ಸಂಸತ್ ಮುಂಗಾರು ಅಧಿವೇಶನ(Parliament Monsoon Session) ದ ನೆಪವೊಡ್ಡಿ ಪ್ರತಿಪಕ್ಷಗಳು ತಮ್ಮ ಸಭೆಯನ್ನು ಮತ್ತೆ ಮುಂದೂಡಿವೆ. ಇದೀಗ ಜುಲೈ 17-18ರಂದು ಪ್ರತಿಪಕ್ಷಗಳ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ

Opposition Meeting Postponed: ಜುಲೈ 17-18ರಂದು ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ: ಕಾಂಗ್ರೆಸ್
ಪ್ರತಿಪಕ್ಷಗಳ ಸಭೆ
ನಯನಾ ರಾಜೀವ್
|

Updated on:Jul 03, 2023 | 2:45 PM

Share

ಸಂಸತ್ ಮುಂಗಾರು ಅಧಿವೇಶನ(Parliament Monsoon Session) ದ ನೆಪವೊಡ್ಡಿ ಪ್ರತಿಪಕ್ಷಗಳು ತಮ್ಮ ಸಭೆಯನ್ನು ಮತ್ತೆ ಮುಂದೂಡಿವೆ. ಇದೀಗ ಜುಲೈ 17-18ರಂದು ಪ್ರತಿಪಕ್ಷಗಳ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ.  ಎನ್‌ಸಿಪಿಯಲ್ಲಿ ಉದ್ಭವವಾಗಿರುವ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ವಿಪಕ್ಷಗಳ ಒಗ್ಗಟ್ಟಿಗೂ ಬೆದರಿಕೆಗಳು ಎದುರಾಗಿವೆ. ಪಾಟ್ನಾ ನಂತರ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪ್ರತಿಪಕ್ಷಗಳ ಸಭೆಯನ್ನು ಸಂಸತ್ ಅಧಿವೇಶನದವರೆಗೆ ಮುಂದೂಡಲಾಗಿದೆ. ಈ ಒಗ್ಗಟ್ಟಿನ ಪ್ರಮುಖ ಮುಖವೆಂದು ಪರಿಗಣಿಸಲಾದ ಶರದ್ ಪವಾರ್ ಅವರ ಪಕ್ಷದ ಆಜ್ಞೆಯನ್ನು ಈಗ ಪ್ರಶ್ನಿಸಿರುವ ಕಾರಣ ಪ್ರತಿಪಕ್ಷಗಳ ಒಗ್ಗಟ್ಟಿಗೂ ದೊಡ್ಡ ಹೊಡೆತ ಬಿದ್ದಿದೆ.

ಈ ಮೊದಲು ಮೇ 23ಕ್ಕೆ ಪಾಟ್ನಾದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು, ಬಳಿಕ ಜುಲೈ 13-14ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಮುಂಗಾರು ಅಧಿವೇಶನದ ನಂತರ ನಡೆಸಲಾಗುವುದು ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪಾಟ್ನಾದಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಂಡ ನಾಯಕರು ಹಗರಣಗಳಲ್ಲಿ ಭಾಗಿಯಾಗಿದ್ದಾರೆ: ಅಮಿತ್ ಶಾ

ಜೂನ್ 23 ರಂದು ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಸುಮಾರು 15 ರಾಜಕೀಯ ಪಕ್ಷಗಳು ಭಾಗವಹಿಸಿದ್ದವು. ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್, ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆ ಭಾಗವಹಿಸಿದ್ದರು. ಇದಲ್ಲದೇ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಸಭೆಯಲ್ಲಿದ್ದರು.

ಪಾಟ್ನಾದ ಸಭೆಯ ನಂತರ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಿದ್ದರೂ ಕೂಡ, ಅನೇಕ ಪಕ್ಷಗಳು ಏಕರೂಪ ನಾಗರಿಕ ಸಂಹಿತೆ ವಿಷಯದಲ್ಲಿ ಬಿಜೆಪಿಯಂತೆಯೇ ವಿಭಿನ್ನ ಅಭಿಪ್ರಾಯ ಹೊಂದಿದ್ದವು. ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷವು ಯುಸಿಸಿಗೆ ತಾತ್ವಿಕ ಬೆಂಬಲ ನೀಡಿದ್ದರೆ, ಉದ್ಧವ್ ಠಾಕ್ರೆ ಅವರ ಶಿವಸೇನೆ ಕೂಡ ಅದೇ ನಿಲುವನ್ನು ಹೊಂದಿತ್ತು. ಇದಲ್ಲದೆ ಶರದ್ ಪವಾರ್ ಎನ್​ಸಿಪಿ ಕೂಡ ತಟಸ್ಥವಾಗಿತ್ತು.

ಅಜಿತ್ ಪವಾರ್ ಎನ್​ಸಿಪಿ ತೊರೆದು ಏಕನಾಥ್ ಶಿಂದೆ ಸರ್ಕಾರ ಸೇರಿ ಈಗ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್​ಸಿಪಿಯು ಕೂಡ ಶಿವಸೇನೆಯಂತೆ ಇಬ್ಭಾಗವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:00 am, Mon, 3 July 23

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ