AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಗ್ಯಾಲರಿಯಲ್ಲಿ ಸಾರ್ವಜನಿಕರಿಂದ ಮೋದಿ ಪರ ಘೋಷಣೆ; ಕ್ರಮಕ್ಕೆ ಒತ್ತಾಯಿಸಿ ವಿಪಕ್ಷ ಸದಸ್ಯರಿಂದ ಪತ್ರ

Rajya Sabha Political Sloganeering Incident: ಸೆಪ್ಟೆಂಬರ್ 21ರಂದು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾದಾಗ, ಅದರ ಮೇಲೆ ಚರ್ಚೆ ನಡೆಯುತ್ತಿರುವಾಗ ವಿಸಿಟರ್ಸ್ ಗ್ಯಾಲರಿಯಿಂದ 50 ಮಂದಿ ಸಾರ್ವಜನಿಕರು ಮೋದಿ ಪರವಾಗಿ ಘೋಷಣೆಗಳನ್ನು ಕೂಗಿದ ಘಟನೆ ನಡೆದಿತ್ತು. ಇದು ಭದ್ರತಾ ವ್ಯವಸ್ಥೆಯ ನಿಯಮಗಳ ಉಲ್ಲಂಘನೆ ಆಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಿವಸೇನಾ ಮತ್ತು ಟಿಎಂಸಿ ಸದಸ್ಯೆಯರಾದ ಪ್ರಿಯಾಂಕಾ ಚತುರ್ವೇದಿ ಮತ್ತು ಮೌಸಮ್ ನೂರ್ ಅವರುಗಳು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯಸಭೆ ಗ್ಯಾಲರಿಯಲ್ಲಿ ಸಾರ್ವಜನಿಕರಿಂದ ಮೋದಿ ಪರ ಘೋಷಣೆ; ಕ್ರಮಕ್ಕೆ ಒತ್ತಾಯಿಸಿ ವಿಪಕ್ಷ ಸದಸ್ಯರಿಂದ ಪತ್ರ
ರಾಜ್ಯಸಭೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2023 | 12:09 PM

Share

ನವದೆಹಲಿ, ಸೆಪ್ಟೆಂಬರ್ 25: ನಾಲ್ಕು ದಿನಗಳ ಹಿಂದೆ ರಾಜ್ಯಸಭೆಯ ವಿಸಟರ್ಸ್ ಗ್ಯಾಲರಿಯಲ್ಲಿ (Rajya Sabha Visitors’ Gallery) ಘೋಷಣೆಗಳನ್ನು ಕೂಗಿದ ಘಟನೆ ಬಗ್ಗೆ ಕೆಲ ರಾಜ್ಯಸಭಾ ಸದಸ್ಯರು ಗಂಭೀರವಾಗಿ ಪರಿಗಣಿಸಿದ್ದಾರೆ. ಆ ಘಟನೆ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಬ್ಬರು ರಾಜ್ಯಸಭೆ ಸದಸ್ಯೆಯರು ಸಭಾಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯೆ ಮೌಸಮ್ ನೂರ್ ಮತ್ತು ಶಿವಸೇನಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಈ ಪತ್ರ ಬರೆದಿದ್ದು, ಸೆಪ್ಟೆಂಬರ್ 21ರಂದು ಸಂಭವಿಸಿದ್ದ ಘಟನೆ (Political sloganeering incident) ಬಗ್ಗೆ ತಮ್ಮ ಆತಂಕ ತೋರ್ಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಬಿಗಿ ಭದ್ರತೆ ಇದ್ದರೂ ರಾಜಕೀಯ ಘೋಷಣೆಗಳು ನಡೆದಿರುವುದಕ್ಕೆ ಗಾಬರಿ ಪಟ್ಟಿರುವ ಈ ಇಬ್ಬರು ಸದಸ್ಯೆಯರು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಯ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ದೇವೇಗೌಡರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ್ದೆ, ಈಗಲೂ ವಿರೋಧಿಸುತ್ತೇನೆ ಎಂದ ಉಮಾ ಭಾರತಿ; ಕಾರಣ ಏನು ಗೊತ್ತಾ?

ಮೋದಿ ಮೋದಿ ಎಂದು ಕೂಗಿದ್ದ ಸಾರ್ವಜನಿಕರು..!

ಸೆಪ್ಟೆಂಬರ್ 21ರಂದು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಗಿತ್ತು. ಆ ವೇಳೆ ಮಸೂದೆ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆ ನಡೆಯುತ್ತಿರುವಂತೆಯೇ ವಿಸಿಟರ್ಸ್ ಗ್ಯಾಲರಿಯಿಂದ 50 ಮಂದಿ ಸಾರ್ವಜನಿಕರು ‘ಮೋದಿ ಮೋದಿ’ ಎಂದು ಘೋಷಣೆಗಳನ್ನು ಕೂಗಿದರು. ಇದರಿಂದ ಕ್ರುದ್ಧಗೊಂಡ ವಿಕ್ಷಗಳ ಸದಸ್ಯರು 10 ನಿಮಿಷ ಆ ಸಭೆಯಿಂದ ಹೊರಗೆ ಹೋದರು.

ರಾಜ್ಯಸಭೆ ಅಥವಾ ಲೋಕಸಭೆಯಲ್ಲಿ ಕಲಾಪಗಳನ್ನು ಸಾರ್ವಜನಿಕರು ವೀಕ್ಷಿಸಲು ಅವಕಾಶ ಇದೆಯಾದರೂ ಯಾರೂ ಕೂಡ ಸದ್ದು ಮಾಡುವಂತಿಲ್ಲ. ಕಲಾಪಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿ ತರುವಂತಿಲ್ಲ. ಆದರೂ ಕೂಡ ಗ್ಯಾಲರಿಯಲ್ಲಿ ಕೂತು ಮೋದಿ ಮೋದಿ ಎಂದು ಘೋಷಣೆಗಳನ್ನು ಕೂಗಲಾಗಿದ್ದರ ಬಗ್ಗೆ ಪ್ರಿಯಾಂಕಾ ಚತುರ್ವೇದಿ ಮತ್ತು ಮೌಸಮ್ ನೂರ್ ಅಸಮಾಧಾನ ವ್ಯಕ್ತಪಡಿಸಿ ಈಗ ರಾಜ್ಯಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ, ಮಧ್ಯಪ್ರದೇಶಗಳಿಗೆ ಇಂದು ಪ್ರಧಾನಿ ಭೇಟಿ; ಪರಿವರ್ತನ್ ಸಂಕಲ್ಪ್ ಮಹಾಸಭಾ ಮತ್ತು ಬಿಜೆಪಿ ಕಾರ್ಯಕರ್ತರ ಮಹಾಕುಂಭ ಉದ್ದೇಶಿಸಿ ಮೋದಿ ಭಾಷಣ

ಇನ್ನು, ಲೋಕಸಭೆಯ ಕಲಾಪದ ವೇಳೆ, ಬಿಎಸ್​ಪಿ ಸದಸ್ಯ ದಾನಿಶ್ ಅಲಿ ಬಗ್ಗೆ ಬಿಜೆಪಿ ಸಂಸದ ರಮೇಶ್ ಬಿಧೂರಿ ಅವಹೇಳನಕಾರಿ ಹೇಳಿಕೆ ನೀಡಿದ್ದರೆನ್ನಲಾಗಿದ್ದು, ಈ ವಿಚಾರದ ಬಗ್ಗೆ ವಿಪಕ್ಷಗಳ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಸಭೆಯ ಪ್ರಿವಿಲೇಜ್ ಕಮಿಟಿಗೆ ವಹಿಸುವಂತೆ ಒತ್ತಾಯಿಸಿ ಹಲವು ವಿಪಕ್ಷಗಳ ಸದಸ್ಯರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದುಂಟು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ