AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

ರಾಜ್ಯಸಭಾ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ಇಂಡಿಯಾ ಬಣದ ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯವನ್ನು ಮೇಲ್ಮನೆಯ ಉಪಾಧ್ಯಕ್ಷ ವಜಾಗೊಳಿಸಿದ್ದಾರೆ. ಜಗದೀಪ್ ಧನಕರ್ ಮೇಲ್ಮನೆಯಲ್ಲಿ ವಿಪಕ್ಷಗಳಿಗೆ ಮಾತನಾಡಲು ಅವಕಾಶವನ್ನೇ ನೀಡುತ್ತಿಲ್ಲ, ಬಿಜೆಪಿ ಪರವಾಗಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮತ್ತಿತರ ಇಂಡಿಯಾ ಬಣದ ರಾಜ್ಯಸಭಾ ಸದಸ್ಯರು ಜಗದೀಪ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದರು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ
Jagdeep Dhankar (3)
ಸುಷ್ಮಾ ಚಕ್ರೆ
|

Updated on:Dec 19, 2024 | 4:10 PM

Share

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯ ತಿರಸ್ಕೃತಗೊಂಡಿದೆ. 14 ದಿನಗಳ ನೋಟಿಸ್ ನೀಡಿಲ್ಲ ಮತ್ತು ಜಗದೀಪ್ ಧನಕರ್ ಅವರ ಹೆಸರನ್ನು ಸರಿಯಾಗಿ ಬರೆಯಲಾಗಿಲ್ಲ ಎಂಬ ಕಾರಣಕ್ಕಾಗಿ ವಿಪಕ್ಷಗಳ ಮನವಿಯನ್ನು ತಿರಸ್ಕರಿಸಲಾಗಿದೆ. ರಾಜ್ಯಸಭಾ ಉಪಾಧ್ಯಕ್ಷರು ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ್ದಾರೆ.

ಈ ಕುರಿತು ಎನ್​ಡಿಟಿವಿ ವರದಿ ಮಾಡಿದೆ. ಮೂಲಗಳ ಪ್ರಕಾರ, ರಾಜ್ಯಸಭಾ ಉಪಾಧ್ಯಕ್ಷರ ವಿರುದ್ಧ ನಿರೂಪಣೆಯನ್ನು ರಚಿಸಲು ಜಂಟಿ ಪತ್ರಿಕಾಗೋಷ್ಠಿಯನ್ನು ಸಹ ನಡೆಸಲಾಯಿತು. ಆದರೆ, ಅವಿಶ್ವಾಸ ನಿರ್ಣಯದ ತಿರಸ್ಕಾರಕ್ಕೆ ಕಾರಣಗಳನ್ನು ತಿಳಿಸಿದ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್, ಅಂತಹ ಪ್ರಸ್ತಾವನೆಯನ್ನು ಸಲ್ಲಿಸಲು ಕಡ್ಡಾಯವಾಗಿರುವ 14 ದಿನಗಳ ನೋಟಿಸ್ ನೀಡಲಾಗಿಲ್ಲ ಎಂದು ಹೇಳಿದರು. ಹಾಗೇ, ಜಗದೀಪ್ ಧನಕರ್ ಅವರ ಹೆಸರನ್ನು ಸಹ ಸರಿಯಾಗಿ ಬರೆದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಜಗದೀಪ್ ಧನಕರ್ ಬಿಜೆಪಿ ಸರ್ಕಾರದ ವಕ್ತಾರ; ಅವಿಶ್ವಾಸ ನಿರ್ಣಯಕ್ಕೆ ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ

ಜಗದೀಪ್ ಧನಕರ್ ಅವರನ್ನು “ಸರ್ಕಾರದ ಅತಿದೊಡ್ಡ ವಕ್ತಾರ” ಎಂದು ಟೀಕಿಸಿದ್ದ ವಿರೋಧ ಪಕ್ಷಗಳು ಜಗದೀಪ್ ಧನಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ರಾಜ್ಯಸಭೆಯ ಕಲಾಪಗಳಿಗೆ ಅಡ್ಡಿಯಾಗಿದ್ದಾರೆ. ಜಗದೀಪ್ ಧನಕರ್ ಅವರ ಕ್ರಮಗಳು ಭಾರತದ ಘನತೆಗೆ ಧಕ್ಕೆ ತಂದಿವೆ ಎಂದು ಆರೋಪಿಸಲಾಗಿತ್ತು.

ಸಂವಿಧಾನದ ಪರಿಚ್ಛೇದ 67(ಬಿ) ಅಡಿಯಲ್ಲಿ ಸಲ್ಲಿಸಲಾದ ಈ ಪ್ರಸ್ತಾವನೆಯನ್ನು ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಮತ್ತು ಎಎಪಿ ಸಹ ಬೆಂಬಲಿಸಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Thu, 19 December 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!