AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ, ವಿವಾದ ಸೃಷ್ಟಿಸಿದೆ ಕಮಲ ಪಾಳಯದ ಆಶ್ವಾಸನೆ

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತ ದಿಟ್ಟತನದಿಂದ ಹೋರಾಡುತ್ತಿದೆ. ಆದ್ರೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಈ ಮಧ್ಯೆ ಕೊರೊನಾ ವ್ಯಾಕ್ಸಿನ್ ವಿಚಾರ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಕೊರೊನಾ ಪದ ಕಿವಿಗೆ ಬಿದ್ದರೆ ಸಾಕು ಜನ ಹೌಹಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೇನು ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕು ಎನ್ನುವಷ್ಟರಲ್ಲಿ ಚಳಿಗಾಲ ಹತ್ತಿರಬಂದಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿ ಆತಂಕ ಹೆಚ್ಚಿಸಿದೆ. ಆದರೆ ಇದೆಲ್ಲಕ್ಕಿಂತ ಹೆಚ್ಚಾಗಿ […]

ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ, ವಿವಾದ ಸೃಷ್ಟಿಸಿದೆ ಕಮಲ ಪಾಳಯದ ಆಶ್ವಾಸನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 23, 2020 | 6:55 AM

Share

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತ ದಿಟ್ಟತನದಿಂದ ಹೋರಾಡುತ್ತಿದೆ. ಆದ್ರೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಈ ಮಧ್ಯೆ ಕೊರೊನಾ ವ್ಯಾಕ್ಸಿನ್ ವಿಚಾರ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ.

ಕೊರೊನಾ ಪದ ಕಿವಿಗೆ ಬಿದ್ದರೆ ಸಾಕು ಜನ ಹೌಹಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೇನು ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕು ಎನ್ನುವಷ್ಟರಲ್ಲಿ ಚಳಿಗಾಲ ಹತ್ತಿರಬಂದಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿ ಆತಂಕ ಹೆಚ್ಚಿಸಿದೆ. ಆದರೆ ಇದೆಲ್ಲಕ್ಕಿಂತ ಹೆಚ್ಚಾಗಿ ವ್ಯಾಕ್ಸಿನ್ ವಿಚಾರವೇ ರಾಜಕೀಯ ತಂತ್ರಗಾರಿಕೆಗೆ ಬಳಕೆಯಾಗ್ತಿದೆ.

ಬಿಹಾರ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್! ಕೆಲವೇ ದಿನಗಳಲ್ಲಿ ಬಿಹಾರ ವಿಧಾನಸಭಗೆ ಚುನಾವಣೆ ನಡೆಯಲಿದೆ. ಹೀಗಾಗಿ ನಿನ್ನೆ ಬಿಜೆಪಿ ಪ್ರಣಾಳಿಕೆ ರಿಲೀಸ್ ಮಾಡಿದೆ. ಈ ಪ್ರಣಾಳಿಕೆಯೇ ಈಗ ವಿವಾದ ಎಬ್ಬಿಸಿರೋದು. ಅಂದಹಾಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ ನೀಡಲಾಗಿದೆ. ಹಾಗೇ ಬಿಹಾರದ ಕಾರ್ಮಿಕ ಸಮುದಾಯಕ್ಕೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವ ಆಶ್ವಾಸನೆ ನೀಡಲಾಗಿದೆ. ಈ ಎರಡೂ ಆಶ್ವಾಸನೆಗಳ ಪೈಕಿ ಸದ್ಯ ಲಸಿಕೆಯನ್ನೂ ಚುನಾವಣೆ ವಿಷಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ವಿಪಕ್ಷ ನಾಯಕರು ಗರಂ ಆಗಿದ್ದಾರೆ.

ಇದೇ ಭರವಸೆ ನೀಡಿದ ತಮಿಳುನಾಡು ಸಿಎಂ: ಒಂದ್ಕಡೆ ಬಿಜೆಪಿ ಪಕ್ಷ ಬಿಹಾರ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಭರವಸೆ ನೀಡಿದ್ರೆ, ತಮಿಳುನಾಡು ಸಿಎಂ ಇನ್ನೊಂದು ರೀತಿಯ ಆಮಿಷ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಮಿಳುನಾಡಿನಲ್ಲಿ ಪ್ರತಿಯೊಬ್ಬರಿಗೂ ಕೊರೊನ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಿಸಿದ್ದಾರೆ.

ವ್ಯಾಕ್ಸಿನ್ ನೀಡುವುದಕ್ಕಾಗಿ ₹51 ಸಾವಿರ ಕೋಟಿ ಮೀಸಲು: ಸುಮಾರು 30 ಕೋಟಿ ಆಯ್ದ ಭಾರತೀಯರಿಗೆ ಕೊರೊನಾ ಲಸಿಕೆಯನ್ನ ಮೊದಲ ಸರದಿಯಲ್ಲಿ ನೀಡೋದಕ್ಕೆ ತೀರ್ಮಾನಿಸಲಾಗಿದೆ. ಹೀಗೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಲಸಿಕೆ ತಲುಪಿಸಲು ಸುಮಾರು 51 ಸಾವಿರ ಕೋಟಿಯ ಅಗತ್ಯತೆ ಇದ್ದು, ಕೇಂದ್ರ ಸರ್ಕಾರ ಈಗಾಗಲೇ ಉಚಿತ ಲಸಿಕೆ ನೀಡಲು ತಯಾರಿ ಆರಂಭಿಸಿದೆ.

ಒಟ್ನಲ್ಲಿ ವ್ಯಾಕ್ಸಿನ್ ವಿಚಾರ ರಾಜಕೀಯ ಅಖಾಡದಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ಆಕ್ಷೇಪ ವ್ಯಕ್ತವಾಗುತ್ತಿದೆ. ಈ ವಿಚಾರ ಮುಂದೆ ಯಾವ ರೀತಿಯ ತಿರುವು ಪಡೆಯಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ