AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ, ವಿವಾದ ಸೃಷ್ಟಿಸಿದೆ ಕಮಲ ಪಾಳಯದ ಆಶ್ವಾಸನೆ

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತ ದಿಟ್ಟತನದಿಂದ ಹೋರಾಡುತ್ತಿದೆ. ಆದ್ರೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಈ ಮಧ್ಯೆ ಕೊರೊನಾ ವ್ಯಾಕ್ಸಿನ್ ವಿಚಾರ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಕೊರೊನಾ ಪದ ಕಿವಿಗೆ ಬಿದ್ದರೆ ಸಾಕು ಜನ ಹೌಹಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೇನು ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕು ಎನ್ನುವಷ್ಟರಲ್ಲಿ ಚಳಿಗಾಲ ಹತ್ತಿರಬಂದಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿ ಆತಂಕ ಹೆಚ್ಚಿಸಿದೆ. ಆದರೆ ಇದೆಲ್ಲಕ್ಕಿಂತ ಹೆಚ್ಚಾಗಿ […]

ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ, ವಿವಾದ ಸೃಷ್ಟಿಸಿದೆ ಕಮಲ ಪಾಳಯದ ಆಶ್ವಾಸನೆ
ಆಯೇಷಾ ಬಾನು
|

Updated on: Oct 23, 2020 | 6:55 AM

Share

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತ ದಿಟ್ಟತನದಿಂದ ಹೋರಾಡುತ್ತಿದೆ. ಆದ್ರೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಈ ಮಧ್ಯೆ ಕೊರೊನಾ ವ್ಯಾಕ್ಸಿನ್ ವಿಚಾರ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ.

ಕೊರೊನಾ ಪದ ಕಿವಿಗೆ ಬಿದ್ದರೆ ಸಾಕು ಜನ ಹೌಹಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೇನು ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕು ಎನ್ನುವಷ್ಟರಲ್ಲಿ ಚಳಿಗಾಲ ಹತ್ತಿರಬಂದಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿ ಆತಂಕ ಹೆಚ್ಚಿಸಿದೆ. ಆದರೆ ಇದೆಲ್ಲಕ್ಕಿಂತ ಹೆಚ್ಚಾಗಿ ವ್ಯಾಕ್ಸಿನ್ ವಿಚಾರವೇ ರಾಜಕೀಯ ತಂತ್ರಗಾರಿಕೆಗೆ ಬಳಕೆಯಾಗ್ತಿದೆ.

ಬಿಹಾರ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್! ಕೆಲವೇ ದಿನಗಳಲ್ಲಿ ಬಿಹಾರ ವಿಧಾನಸಭಗೆ ಚುನಾವಣೆ ನಡೆಯಲಿದೆ. ಹೀಗಾಗಿ ನಿನ್ನೆ ಬಿಜೆಪಿ ಪ್ರಣಾಳಿಕೆ ರಿಲೀಸ್ ಮಾಡಿದೆ. ಈ ಪ್ರಣಾಳಿಕೆಯೇ ಈಗ ವಿವಾದ ಎಬ್ಬಿಸಿರೋದು. ಅಂದಹಾಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ ನೀಡಲಾಗಿದೆ. ಹಾಗೇ ಬಿಹಾರದ ಕಾರ್ಮಿಕ ಸಮುದಾಯಕ್ಕೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವ ಆಶ್ವಾಸನೆ ನೀಡಲಾಗಿದೆ. ಈ ಎರಡೂ ಆಶ್ವಾಸನೆಗಳ ಪೈಕಿ ಸದ್ಯ ಲಸಿಕೆಯನ್ನೂ ಚುನಾವಣೆ ವಿಷಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ವಿಪಕ್ಷ ನಾಯಕರು ಗರಂ ಆಗಿದ್ದಾರೆ.

ಇದೇ ಭರವಸೆ ನೀಡಿದ ತಮಿಳುನಾಡು ಸಿಎಂ: ಒಂದ್ಕಡೆ ಬಿಜೆಪಿ ಪಕ್ಷ ಬಿಹಾರ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಭರವಸೆ ನೀಡಿದ್ರೆ, ತಮಿಳುನಾಡು ಸಿಎಂ ಇನ್ನೊಂದು ರೀತಿಯ ಆಮಿಷ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಮಿಳುನಾಡಿನಲ್ಲಿ ಪ್ರತಿಯೊಬ್ಬರಿಗೂ ಕೊರೊನ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಿಸಿದ್ದಾರೆ.

ವ್ಯಾಕ್ಸಿನ್ ನೀಡುವುದಕ್ಕಾಗಿ ₹51 ಸಾವಿರ ಕೋಟಿ ಮೀಸಲು: ಸುಮಾರು 30 ಕೋಟಿ ಆಯ್ದ ಭಾರತೀಯರಿಗೆ ಕೊರೊನಾ ಲಸಿಕೆಯನ್ನ ಮೊದಲ ಸರದಿಯಲ್ಲಿ ನೀಡೋದಕ್ಕೆ ತೀರ್ಮಾನಿಸಲಾಗಿದೆ. ಹೀಗೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಲಸಿಕೆ ತಲುಪಿಸಲು ಸುಮಾರು 51 ಸಾವಿರ ಕೋಟಿಯ ಅಗತ್ಯತೆ ಇದ್ದು, ಕೇಂದ್ರ ಸರ್ಕಾರ ಈಗಾಗಲೇ ಉಚಿತ ಲಸಿಕೆ ನೀಡಲು ತಯಾರಿ ಆರಂಭಿಸಿದೆ.

ಒಟ್ನಲ್ಲಿ ವ್ಯಾಕ್ಸಿನ್ ವಿಚಾರ ರಾಜಕೀಯ ಅಖಾಡದಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ಆಕ್ಷೇಪ ವ್ಯಕ್ತವಾಗುತ್ತಿದೆ. ಈ ವಿಚಾರ ಮುಂದೆ ಯಾವ ರೀತಿಯ ತಿರುವು ಪಡೆಯಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು