AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ, ವಿವಾದ ಸೃಷ್ಟಿಸಿದೆ ಕಮಲ ಪಾಳಯದ ಆಶ್ವಾಸನೆ

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತ ದಿಟ್ಟತನದಿಂದ ಹೋರಾಡುತ್ತಿದೆ. ಆದ್ರೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಈ ಮಧ್ಯೆ ಕೊರೊನಾ ವ್ಯಾಕ್ಸಿನ್ ವಿಚಾರ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಕೊರೊನಾ ಪದ ಕಿವಿಗೆ ಬಿದ್ದರೆ ಸಾಕು ಜನ ಹೌಹಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೇನು ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕು ಎನ್ನುವಷ್ಟರಲ್ಲಿ ಚಳಿಗಾಲ ಹತ್ತಿರಬಂದಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿ ಆತಂಕ ಹೆಚ್ಚಿಸಿದೆ. ಆದರೆ ಇದೆಲ್ಲಕ್ಕಿಂತ ಹೆಚ್ಚಾಗಿ […]

ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ, ವಿವಾದ ಸೃಷ್ಟಿಸಿದೆ ಕಮಲ ಪಾಳಯದ ಆಶ್ವಾಸನೆ
ಆಯೇಷಾ ಬಾನು
|

Updated on: Oct 23, 2020 | 6:55 AM

Share

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತ ದಿಟ್ಟತನದಿಂದ ಹೋರಾಡುತ್ತಿದೆ. ಆದ್ರೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಈ ಮಧ್ಯೆ ಕೊರೊನಾ ವ್ಯಾಕ್ಸಿನ್ ವಿಚಾರ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ.

ಕೊರೊನಾ ಪದ ಕಿವಿಗೆ ಬಿದ್ದರೆ ಸಾಕು ಜನ ಹೌಹಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೇನು ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕು ಎನ್ನುವಷ್ಟರಲ್ಲಿ ಚಳಿಗಾಲ ಹತ್ತಿರಬಂದಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿ ಆತಂಕ ಹೆಚ್ಚಿಸಿದೆ. ಆದರೆ ಇದೆಲ್ಲಕ್ಕಿಂತ ಹೆಚ್ಚಾಗಿ ವ್ಯಾಕ್ಸಿನ್ ವಿಚಾರವೇ ರಾಜಕೀಯ ತಂತ್ರಗಾರಿಕೆಗೆ ಬಳಕೆಯಾಗ್ತಿದೆ.

ಬಿಹಾರ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್! ಕೆಲವೇ ದಿನಗಳಲ್ಲಿ ಬಿಹಾರ ವಿಧಾನಸಭಗೆ ಚುನಾವಣೆ ನಡೆಯಲಿದೆ. ಹೀಗಾಗಿ ನಿನ್ನೆ ಬಿಜೆಪಿ ಪ್ರಣಾಳಿಕೆ ರಿಲೀಸ್ ಮಾಡಿದೆ. ಈ ಪ್ರಣಾಳಿಕೆಯೇ ಈಗ ವಿವಾದ ಎಬ್ಬಿಸಿರೋದು. ಅಂದಹಾಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ ನೀಡಲಾಗಿದೆ. ಹಾಗೇ ಬಿಹಾರದ ಕಾರ್ಮಿಕ ಸಮುದಾಯಕ್ಕೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವ ಆಶ್ವಾಸನೆ ನೀಡಲಾಗಿದೆ. ಈ ಎರಡೂ ಆಶ್ವಾಸನೆಗಳ ಪೈಕಿ ಸದ್ಯ ಲಸಿಕೆಯನ್ನೂ ಚುನಾವಣೆ ವಿಷಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ವಿಪಕ್ಷ ನಾಯಕರು ಗರಂ ಆಗಿದ್ದಾರೆ.

ಇದೇ ಭರವಸೆ ನೀಡಿದ ತಮಿಳುನಾಡು ಸಿಎಂ: ಒಂದ್ಕಡೆ ಬಿಜೆಪಿ ಪಕ್ಷ ಬಿಹಾರ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಭರವಸೆ ನೀಡಿದ್ರೆ, ತಮಿಳುನಾಡು ಸಿಎಂ ಇನ್ನೊಂದು ರೀತಿಯ ಆಮಿಷ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಮಿಳುನಾಡಿನಲ್ಲಿ ಪ್ರತಿಯೊಬ್ಬರಿಗೂ ಕೊರೊನ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಿಸಿದ್ದಾರೆ.

ವ್ಯಾಕ್ಸಿನ್ ನೀಡುವುದಕ್ಕಾಗಿ ₹51 ಸಾವಿರ ಕೋಟಿ ಮೀಸಲು: ಸುಮಾರು 30 ಕೋಟಿ ಆಯ್ದ ಭಾರತೀಯರಿಗೆ ಕೊರೊನಾ ಲಸಿಕೆಯನ್ನ ಮೊದಲ ಸರದಿಯಲ್ಲಿ ನೀಡೋದಕ್ಕೆ ತೀರ್ಮಾನಿಸಲಾಗಿದೆ. ಹೀಗೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಲಸಿಕೆ ತಲುಪಿಸಲು ಸುಮಾರು 51 ಸಾವಿರ ಕೋಟಿಯ ಅಗತ್ಯತೆ ಇದ್ದು, ಕೇಂದ್ರ ಸರ್ಕಾರ ಈಗಾಗಲೇ ಉಚಿತ ಲಸಿಕೆ ನೀಡಲು ತಯಾರಿ ಆರಂಭಿಸಿದೆ.

ಒಟ್ನಲ್ಲಿ ವ್ಯಾಕ್ಸಿನ್ ವಿಚಾರ ರಾಜಕೀಯ ಅಖಾಡದಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ಆಕ್ಷೇಪ ವ್ಯಕ್ತವಾಗುತ್ತಿದೆ. ಈ ವಿಚಾರ ಮುಂದೆ ಯಾವ ರೀತಿಯ ತಿರುವು ಪಡೆಯಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ