ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು ಉಂಟಾಗಿದೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಯಿತು. ಸದನದಲ್ಲಿ ಜೋರಾದ ಘೋಷಣೆಗಳು ಮತ್ತು ಪ್ರತಿಭಟನೆಗಳ ನಡುವೆ ಧ್ವನಿ ಮತದಿಂದ ನಿರ್ಣಯವನ್ನು ತಿರಸ್ಕರಿಸಲಾಯಿತು. ನಾಳೆ ಬೆಳಿಗ್ಗೆ 11 ಗಂಟೆಗೆ ಸದನ ಮತ್ತೆ ಸಭೆ ಸೇರಲಿದೆ. ಇಂದು ಒಂದು ದಿನದ ಮಟ್ಟಿಗೆ ಕಲಾಪವನ್ನು ಮುಂದೂಡಲಾಯಿತು.

ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು
Parliament Session

Updated on: Mar 11, 2026 | 9:09 PM

ನವದೆಹಲಿ, ಮಾರ್ಚ್ 11: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಇಂದು ಸದನದಲ್ಲಿ ಧ್ವನಿ ಮತದಿಂದ ತಿರಸ್ಕರಿಸಲಾಯಿತು. ಹಲವಾರು ವಿರೋಧ ಪಕ್ಷದ ಸಂಸದರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಅವರು ಈ ನಿರ್ಣಯವನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದ ವೇಳೆ ವಿರೋಧ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಅವರು ಭಾರತದ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಪ್ರಶ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

“ಸಂವಿಧಾನವು ಸ್ಪೀಕರ್‌ಗೆ ಮಧ್ಯವರ್ತಿಯ ಪಾತ್ರವನ್ನು ನೀಡಿದೆ. ನೀವು ಮಧ್ಯವರ್ತಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದೀರಿ. 75 ವರ್ಷಗಳಲ್ಲಿ ಎರಡೂ ಸದನಗಳು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನು ಪಾತಾಳಕ್ಕಿಂತ ಕೆಳಗೆ ನೂಕಿವೆ. ಸ್ಪೀಕರ್ ಆಡಳಿತ ಪಕ್ಷ ಮತ್ತು ಪಕ್ಷ ಎರಡನ್ನೂ ಪ್ರತಿನಿಧಿಸುವ ನಿಷ್ಪಕ್ಷಪಾತ ರಕ್ಷಕನಾಗಿ ಕಾರ್ಯನಿರ್ವಹಿಸುತ್ತಾರೆ” ಎಂದು ಅಮಿತ್ ಶಾ ಹೇಳಿದರು.


ಇದನ್ನೂ ಓದಿ: ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ: ಓಂ ಬಿರ್ಲಾ ಬಗ್ಗೆ ಮೋದಿ ಹೇಳಿದ್ದಿಷ್ಟು

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಾಗ ತನಗೆ ಮಾತನಾಡಲು ಅವಕಾಶ ಸಿಗುತ್ತಿಲ್ಲ. ತನ್ನ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಸಮಯ ನೀಡಿದಾಗ ಅವರು ಹಾಜರಿರುವುದು ಮತ್ತು ಕಲಾಪಗಳಲ್ಲಿ ಭಾಗವಹಿಸುವುದು ಅವರ ಜವಾಬ್ದಾರಿ. ಅಂತಹ ಅವಕಾಶಗಳು ಬಂದಾಗ ರಾಹುಲ್ ಗಾಂಧಿ ಹೆಚ್ಚಾಗಿ ವಿದೇಶದಲ್ಲಿಯೇ ಇರುತ್ತಾರೆ ಎಂದು ಅಮಿತ್ ಶಾ ಟೀಕಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us