AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ನಲ್ಲಿ ದೆಹಲಿ ದಳ್ಳುರಿ, ಅಧಿವೇಶನದಲ್ಲಿ ಕೇಂದ್ರದ ವಿರುದ್ಧ ಮುಗಿಬೀಳಲು ಕೈ ಸಜ್ಜು

ದೆಹಲಿ: ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು ಏಪ್ರಿಲ್ 3 ರವರೆಗೆ ನಡೆಯಲಿದೆ. ಈಶಾನ್ಯ ದೆಹಲಿ ಹಿಂಸಾಚಾರ, ಕುಸಿದಿರುವ ಆರ್ಥಿಕತೆ ವಿಚಾರದಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತಯಾರಿ ನಡೆಸಿವೆ. ಸಂಸತ್​ ಅಧಿವೇಶನ ಮತ್ತೆ ಕದನವ್ಯೂಹವಾಗಲಿದೆ. ಏಟಿಗೆ ಎದಿರೇಟು. ಪಟ್ಟುಗಳಿಗೆ ಪ್ರತಿ ಪಟ್ಟುಗಳು. ದೆಹಲಿ ದಂಗೆ ವಿರುದ್ಧ ದಂಗಲ್ ಮಾಡಲು ಪ್ರತಿಪಕ್ಷಗಳ ರಣತಂತ್ರ. ಹೌದು, ಇಂದಿನಿಂದ ಆರಂಭವಾಗಲಿರುವ ಬಜೆಟ್ ಮೇಲಿನ ಅಧಿವೇಶನದಲ್ಲಿ ಬೆಂಕಿ ಬಿರುಗಾಳಿಯೇ ಬೀಸಲಿದೆ. ಮಾತಿನ ಮೊರೆತ. ಸದನದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗೋದು ಪಕ್ಕಾ. ಕೇಂದ್ರ ಸರ್ಕಾರದ […]

ಸಂಸತ್​ನಲ್ಲಿ ದೆಹಲಿ ದಳ್ಳುರಿ, ಅಧಿವೇಶನದಲ್ಲಿ ಕೇಂದ್ರದ ವಿರುದ್ಧ ಮುಗಿಬೀಳಲು ಕೈ  ಸಜ್ಜು
ಸಾಧು ಶ್ರೀನಾಥ್​
|

Updated on:Mar 02, 2020 | 10:27 AM

Share

ದೆಹಲಿ: ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು ಏಪ್ರಿಲ್ 3 ರವರೆಗೆ ನಡೆಯಲಿದೆ. ಈಶಾನ್ಯ ದೆಹಲಿ ಹಿಂಸಾಚಾರ, ಕುಸಿದಿರುವ ಆರ್ಥಿಕತೆ ವಿಚಾರದಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತಯಾರಿ ನಡೆಸಿವೆ.

ಸಂಸತ್​ ಅಧಿವೇಶನ ಮತ್ತೆ ಕದನವ್ಯೂಹವಾಗಲಿದೆ. ಏಟಿಗೆ ಎದಿರೇಟು. ಪಟ್ಟುಗಳಿಗೆ ಪ್ರತಿ ಪಟ್ಟುಗಳು. ದೆಹಲಿ ದಂಗೆ ವಿರುದ್ಧ ದಂಗಲ್ ಮಾಡಲು ಪ್ರತಿಪಕ್ಷಗಳ ರಣತಂತ್ರ. ಹೌದು, ಇಂದಿನಿಂದ ಆರಂಭವಾಗಲಿರುವ ಬಜೆಟ್ ಮೇಲಿನ ಅಧಿವೇಶನದಲ್ಲಿ ಬೆಂಕಿ ಬಿರುಗಾಳಿಯೇ ಬೀಸಲಿದೆ. ಮಾತಿನ ಮೊರೆತ. ಸದನದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗೋದು ಪಕ್ಕಾ.

ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ‘ಕೈ’ ಪಡೆ ಸಜ್ಜು..! ಹೌದು, ಮೊದಲ ಅಧಿವೇಶನ ಸ್ವಲ್ಪ ಬ್ರೇಕ್ ಪಡೆದು, ಎರಡನೇ ಅವಧಿಯ ಸೆಷನ್ ಇಂದಿನಿಂದ ಆರಂಭವಾಗ್ತಿದೆ. ಏಪ್ರಿಲ್ 3 ರವರೆಗೂ ಅಧಿವೇಶನದ ನಡೆಯಲಿದ್ದು, ಈಶಾನ್ಯ ದೆಹಲಿ ಹಿಂಸಾಚಾರ, ಕುಸಿದ ಆರ್ಥಿಕ ವ್ಯವಸ್ಥೆ ವಿಚಾರಗಳೇ ಪ್ರತಿಪಕ್ಷಗಳಿಗೆ ಅಸ್ತ್ರವಾಗಿದ್ದು, ಕೇಂದ್ರ ಸರ್ಕಾರಕ್ಕೆ ಸವಾಲಾಗೋ ಸಾಧ್ಯತೆ ಇದೆ.

ದೇಶದ ಆರ್ಥಿಕತೆಗೆ ಗರ ಬಡಿದಂತಾಗಿದೆ. ಸತತ ಏಳನೇ ಅವಧಿಯಲ್ಲೂ ದೇಶದ ಜಿಡಿಪಿ ಬೆಳವಣಿಗೆ ಪಾತಳಕ್ಕಿಳಿದಿದೆ. ಜಿಡಿಪಿ ಬೆಳವಣಿಗೆ ಶೇಕಡ 4.7ಕ್ಕೆ ಕುಸಿದಿರುವ ಬಗ್ಗೆ ವಿಪಕ್ಷ ನಾಯಕರು ಸಂಸತ್​ನಲ್ಲಿ ಗಮನ ಸೆಳೆಯಲಿದ್ದಾರೆ. ಈಗಾಗಲೇ ಆರ್ಥಿಕ ಹಿಂಜರಿತದ ಬಗ್ಗೆ ಮಾತನಾಡಲು ಕಾಂಗ್ರೆಸ್ ಸಜ್ಜಾಗಿದೆ.

ಪ್ರತಿಪಕ್ಷಗಳ ಅಸ್ತ್ರ: ಇನ್ನು ಪೌರತ್ವ ತಿದ್ಡುಪಡಿ ಕಾಯ್ದೆ ವಿಚಾರವಾಗಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ವಿಚಾರವನ್ನು ಪ್ರತಿಪಕ್ಷಗಳು ಎತ್ತಿಕೊಂಡಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ದತೆ ನಡೆಸಿವೆ. ದೆಹಲಿ ಹಿಂಸಾಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ. 43 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ನಾಯಕರು ಆಗ್ರಹಿಸುವ ಸಾಧ್ಯತೆ ಇದೆ.

ಇನ್ನು ವಿರೋಧ ಪಕ್ಷಗಳ ಟೀಕಾಸ್ತ್ರಕ್ಕೆ ತಿರುಗೇಟು ನೀಡಲು ಆಡಳಿತ ಪಕ್ಷ ಬಿಜೆಪಿ ಸಿದ್ಧತೆ ನಡೆಸಿದೆ. ದೆಹಲಿ ಹಿಂಸಾಚಾರಕ್ಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಕೈವಾಡ ಇದೆ ಎಂಬ ವಾದ ಮಂಡಿಸಲು ಬಿಜೆಪಿ ನಾಯಕುರ ಸರ್ವ ಸಿದ್ದತೆ ಮಾಡಿಕೊಂಡಿದ್ದಾರೆ.

ಒಟ್ನಲ್ಲಿ ಬಜೆಟ್ ಅಧಿವೇಶನದ ಎರಡನೇ ಅವಧಿಯ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಕಲಾಪ ಹೇಗೆ ನಡೆಯಲಿದೆ ಅನ್ನೋ ವಿಚಾರವೇ ರಣರೋಚಕವಾಗಿರಲಿದೆ.

Published On - 7:03 am, Mon, 2 March 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!