AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Rains: ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ; ಐಎಂಡಿಯಿಂದ ಆರೆಂಜ್​ ಅಲರ್ಟ್​ ಘೋಷಣೆ

Kerala Rain Updates: ತಮಿಳುನಾಡಿನಲ್ಲಂತೂ ಧಾರಾಕಾರ ಮಳೆ ಸುರಿಯಲು ಶುರುವಾಗಿ ವಾರವೇ ಆಯಿತು. ಇಲ್ಲಿ ಮಳೆಯಿಂದ ಆದ ಅನಾಹುತಕ್ಕೆ ಇದುವರೆಗೆ 14 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದೆ.

Kerala Rains: ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ; ಐಎಂಡಿಯಿಂದ ಆರೆಂಜ್​ ಅಲರ್ಟ್​ ಘೋಷಣೆ
ಮಳೆಯ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 13, 2021 | 10:09 AM

Share

ತಮಿಳುನಾಡು ಜಲಾವೃತವಾಗಿದೆ. ಮುಂದಿನ ಐದು ದಿನಗಳು ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(India Meteorological Department) ತಿಳಿಸಿದೆ. ಈ ಮಧ್ಯೆ ಕೇರಳದಲ್ಲೂ ಕೂಡ ಮಳೆಯ (Kerala Rain) ಮುನ್ಸೂಚನೆ ನೀಡಲಾಗಿದ್ದು, ಇಂದು ಒಟ್ಟು 6 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್​ ಅಲರ್ಟ್​ ಘೋಷಿಸಿದೆ. ನಾಳೆ (ನವೆಂಬರ್​ 14) ಐದು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಇರಲಿದೆ. ಅಂದರೆ ವಿಪರೀತ ಮಳೆಯಾಗುವ ಸೂಚನೆ ಇದಾಗಿದೆ.  

ಇಂದು ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಆಲಪ್ಪುಳ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಇರಲಿದ್ದು, ನಾಳೆ ಪಥನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿಯಲ್ಲಿ ಆರೆಂಜ್​ ಅಲರ್ಟ್​ ಮುಂದುವರಿಯಲಿದೆ.  ಇಡುಕ್ಕಿಯಲ್ಲಿ ಮಳೆ ವಿಪರೀತವಾಗಿ ಬಿದ್ದರೆ ಇಂದು ಅಥವಾ ನಾಳೆ ಚೆರುತೋನಿ ಅಣೆಕಟ್ಟಿನ ಗೇಟ್​ ತೆರೆಯಲಾಗುವುದು ಎಂದು ಇಡುಕ್ಕಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.  ಹಾಗೇ, ಇಡುಕ್ಕಿ ಅಣೆಕಟ್ಟಿನ ಕೆಳಭಾಗ ಮತ್ತು ಪೆರಿಯಾರ್​ ನದಿ ದಡದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಎಂದೂ ಹೇಳಿದ್ದಾರೆ.

ತಮಿಳುನಾಡಿನಲ್ಲಂತೂ ಧಾರಾಕಾರ ಮಳೆ ಸುರಿಯಲು ಶುರುವಾಗಿ ವಾರವೇ ಆಯಿತು. ಇಲ್ಲಿ ಮಳೆಯಿಂದ ಆದ ಅನಾಹುತಕ್ಕೆ ಇದುವರೆಗೆ 14 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದೆ. ಕರ್ನಾಟಕದಲ್ಲಿ ಕೆಲವೆಡೆ ಇಬ್ಬನಿ ಸಹಿತ, ಚಳಿಯ ವಾತಾವರಣ ಇದ್ದರೂ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ನಿನ್ನೆ ಕರ್ನಾಟಕದಲ್ಲಿ ವಿವಿಧೆಡೆ ಚದುರಿದ ಮಳೆಯಾಗಿದೆ. ಇದು ಇನ್ನೂ 5ದಿನಗಳ ಕಾಲ ಮುಂದುವರಿಯಲಿದೆ.

ಇದನ್ನೂ ಓದಿ: ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ; ತನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್

Published On - 8:47 am, Sat, 13 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ