AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ವರ್ಗಾವಣೆ, ನೇಮಕಾತಿಗೆ ಕೇಂದ್ರದಿಂದ ಸುಗ್ರೀವಾಜ್ಞೆ; ಸುಪ್ರೀಂ ಮೆಟ್ಟಿಲೇರಿದ ಕ್ರೇಜಿವಾಲ್​

ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುವ ಲೆಫ್ಟಿನೆಂಟ್ ಗವರ್ನರ್ ಅವರಿಗೇ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಅಧಿಕಾರ ನೀಡಿ ಕಾನೂನು ರೂಪಿಸಲಾಗಿದೆ. ಆದರೆ ಇದೀಗ ಈ ವಿಚಾರವಾಗಿ ದೆಹಲಿ ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಅಧಿಕಾರಿಗಳ ವರ್ಗಾವಣೆ, ನೇಮಕಾತಿಗೆ ಕೇಂದ್ರದಿಂದ ಸುಗ್ರೀವಾಜ್ಞೆ; ಸುಪ್ರೀಂ ಮೆಟ್ಟಿಲೇರಿದ ಕ್ರೇಜಿವಾಲ್​
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 20, 2023 | 1:10 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಮೇಲೆ ದೆಹಲಿ ಸರ್ಕಾರವು ನಿಯಂತ್ರಣವನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಕೆಲವು ದಿನಗಳಲ್ಲಿ, ಕೇಂದ್ರ ಸರ್ಕಾರವು ಶುಕ್ರವಾರ ವಿಶೇಷ ಕಾನೂನನ್ನು ರೂಪಿಸಿದೆ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುವ ಲೆಫ್ಟಿನೆಂಟ್ ಗವರ್ನರ್ ಅವರಿಗೇ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಅಧಿಕಾರ ನೀಡಿ ಕಾನೂನು ರೂಪಿಸಲಾಗಿದೆ. ಆದರೆ ಇದೀಗ ಈ ವಿಚಾರವಾಗಿ ದೆಹಲಿ ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ದೆಹಲಿ ಸರ್ಕಾರದ ವಕೀಲರಾಗಿರುವ ಅಭಿಷೇಕ್ ಸಿಂಘ್ವಿ ಅವರು NDTVಗೆ ತಿಳಿಸಿರುವಂತೆ ದೆಹಲಿ ಸರ್ಕಾರವು ಹೊಸ ಸುಗ್ರೀವಾಜ್ಞೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಹೇಳಿದ್ದಾರೆ.

ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಾಗಿ ಕೇಂದ್ರವು ‘ರಾಷ್ಟ್ರ ರಾಜಧಾನಿ ನಾಗರಿಕ ಸೇವೆಗಳ ಪ್ರಾಧಿಕಾರ’ವನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿದೆ. ಮುಖ್ಯಮಂತ್ರಿ ಅಧ್ಯಕ್ಷರಾಗಿರಲಿದ್ದು, ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಗೃಹ ಕಾರ್ಯದರ್ಶಿ ಸದಸ್ಯರಾಗಿರಲಿದ್ದಾರೆ. ಪ್ರಾಧಿಕಾರದ ಎಲ್ಲ ನಿರ್ಧಾರಗಳು ಸದಸ್ಯರ ಬಹುಪಾಲು ಮತಗಳಿಂದ ನಿರ್ಧರಿಸಲಾಗುತ್ತದೆ. ಭಿನ್ನಾಭಿಪ್ರಾಯವಿದ್ದಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ತೀರ್ಮಾನವೇ ಅಂತಿಮವಾಗಿರಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಸುಗ್ರೀವಾಜ್ಞೆ ಅಂಗೀಕಾರವಾಗಬೇಕಿದೆ. ರಾಜ್ಯಸಭೆಯಲ್ಲಿ ಬಿಜೆಪಿಗೆ ಸಂಖ್ಯಾಬಲದ ಕೊರತೆಯಿದ್ದು, ಈ ವಿಷಯದಲ್ಲಿ ವಿರೋಧ ಪಕ್ಷಗಳು ಒಟ್ಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:Arvind Kejriwal: ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ನಕಲಿಯೇ? ಅದನ್ನು ಏಕೆ ಮರೆಮಾಡಲಾಗುತ್ತಿದೆ?: ಅರವಿಂದ್ ಕ್ರೇಜಿವಾಲ್​ 

ಈ ಮಧ್ಯೆ ಕಾರ್ಯದರ್ಶಿ ಆಶಿಶ್ ಮೋರ್ ಅವರ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ತೆರವುಗೊಳಿಸಲು ವಿಳಂಬ ಮಾಡಿದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾಯಿತ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸುಗ್ರೀವಾಜ್ಞೆಯ ಮೂಲಕ ರದ್ದುಗೊಳಿಸಲು ಕೇಂದ್ರವು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸುಗ್ರೀವಾಜ್ಞೆಯು ಸುಪ್ರೀಂ ಕೋರ್ಟ್ ಆದೇಶವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಎಎಪಿ ಟೀಕಿಸಿದೆ.

Published On - 12:28 pm, Sat, 20 May 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!