AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೇಖ್ ಹಸೀನಾ ಅವರ ನಾಳೆಯ ಸುದ್ದಿಗೋಷ್ಠಿಗೂ ನಮಗೂ ಸಂಬಂಧವಿಲ್ಲ’; ಭಾರತ ಸ್ಪಷ್ಟನೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ನಾಳೆ ನವದೆಹಲಿಯಲ್ಲಿ ನಡೆಸಲು ಉದ್ದೇಶಿಸಿರುವ ಮಾಧ್ಯಮ ಸಂವಾದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತ ಇಂದು ಸ್ಪಷ್ಟಪಡಿಸಿದೆ. ಈ ಕಾರ್ಯಕ್ರಮವನ್ನು 'ಖಾಸಗಿ ಮಾಧ್ಯಮ ಸಂಸ್ಥೆ' ಆಯೋಜಿಸುತ್ತಿದೆ ಎಂದು ಭಾರತ ಒತ್ತಿಹೇಳಿದೆ. ಆ ವೇದಿಕೆಯಲ್ಲಿ ವ್ಯಕ್ತಪಡಿಸಲಾಗುವ ಯಾವುದೇ ಅಭಿಪ್ರಾಯಗಳನ್ನು ಭಾರತ ಸರ್ಕಾರ ಬೆಂಬಲಿಸುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ಚಳವಳಿಯ ಪರಿಣಾಮವಾಗಿ ಅಧಿಕಾರದಿಂದ ಕೆಳಗಿಳಿದ ನಂತರ ಶೇಖ್ ಹಸೀನಾ ಆಗಸ್ಟ್ 5ರಂದು ನವದೆಹಲಿಯಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ.

'ಶೇಖ್ ಹಸೀನಾ ಅವರ ನಾಳೆಯ ಸುದ್ದಿಗೋಷ್ಠಿಗೂ ನಮಗೂ ಸಂಬಂಧವಿಲ್ಲ'; ಭಾರತ ಸ್ಪಷ್ಟನೆ
Sheikh Hasina With Pm ModiImage Credit source: PTI
ಸುಷ್ಮಾ ಚಕ್ರೆ
|

Updated on:Aug 04, 2026 | 9:07 PM

Share

ನವದೆಹಲಿ, ಆಗಸ್ಟ್ 4: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಆಗಸ್ಟ್ 5ರಂದು ನಡೆಸಲಿರುವ ಮಾಧ್ಯಮ ಸಂವಾದಕ್ಕೂ ತನಗೂ ಯಾವುದೇ ಸಂಬಂಧವಿಲ್ಲವೆಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸ್ಪಷ್ಟಪಡಿಸಿದೆ. 2024ರಲ್ಲಿ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ನಂತರ ಅಧಿಕಾರ ಕಳೆದುಕೊಂಡು ದೇಶ ತೊರೆದಿದ್ದ ಶೇಖ್ ಹಸೀನಾ ದೆಹಲಿಯಲ್ಲಿ ಆಶ್ರಯ ಪಡೆದಿದ್ದರು. ಅದಾದ ಬಳಿಕ ಅವರ ಮೊದಲ ಮಾಧ್ಯಮ ಗೋಷ್ಠಿ ಇದಾಗಿದೆ. ಈ ಕಾರ್ಯಕ್ರಮವನ್ನು ಖಾಸಗಿ ಮಾಧ್ಯಮ ಸಂಸ್ಥೆಯೊಂದು ಆಯೋಜಿಸುತ್ತಿದ್ದು, ಇದರಲ್ಲಿ ವ್ಯಕ್ತವಾಗುವ ಯಾವುದೇ ಅಭಿಪ್ರಾಯಗಳನ್ನು ಭಾರತ ಸರ್ಕಾರ ಬೆಂಬಲಿಸುವುದಿಲ್ಲ ಹಾಗೂ ಆ ಕಾರ್ಯಕ್ರಮದೊಂದಿಗೆ ಭಾರತ ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.

“ಶೇಖ್ ಹಸೀನಾ ದೆಹಲಿಯಲ್ಲಿ ನಡೆಸಿರುವ ಸಂವಾದವನ್ನು ಖಾಸಗಿ ಮಾಧ್ಯಮ ಸಂಸ್ಥೆಯೊಂದು ಆಯೋಜಿಸುತ್ತಿದೆ. ಇದರಲ್ಲಿ ಭಾರತ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ವೇದಿಕೆಯಲ್ಲಿ ವ್ಯಕ್ತಪಡಿಸಲಾಗುವ ಯಾವುದೇ ಅಭಿಪ್ರಾಯಗಳನ್ನು ಸರ್ಕಾರ ಬೆಂಬಲಿಸುವುದಿಲ್ಲ” ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: “ನಾನು ಈ ವರ್ಷವೇ ನನ್ನ ದೇಶಕ್ಕೆ ಮರಳುತ್ತೇನೆ”; ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ

ಭಾರತದ ಭೂಪ್ರದೇಶವನ್ನು ಶೇಖ್ ಹಸೀನಾ ಮತ್ತು ಇತರ ಅವಾಮಿ ಲೀಗ್ ನಾಯಕರು ರಾಜಕೀಯ ಭಾಷಣಗಳಿಗೆ ಅಥವಾ ಬಾಂಗ್ಲಾದೇಶದ ಸ್ಥಿರತೆಗೆ ಧಕ್ಕೆ ತರುವ ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಹಾಳುಮಾಡುವ ಕಾರ್ಯಚಟುವಟಿಕೆಗಳಿಗೆ ಬಳಸದಂತೆ ನೋಡಿಕೊಳ್ಳಬೇಕು ಎಂದು ಬಾಂಗ್ಲಾದೇಶದ ಮನವಿಯ ಬೆನ್ನಲ್ಲೇ ಈ ಸ್ಪಷ್ಟನೆ ಬಂದಿದೆ.

ಶೇಖ್ ಹಸೀನಾ ಭಾಷಣ ಏಕೆ ಮುಖ್ಯ?:

ಆಗಸ್ಟ್ 2024ರಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಚಳವಳಿಯ ನಂತರ ಅಧಿಕಾರದಿಂದ ಕೆಳಗಿಳಿದು ಭಾರತದಲ್ಲಿ ತಲೆಮರೆಸಿಕೊಂಡಿರುವ ಶೇಖ್ ಹಸೀನಾ ಸುಮಾರು 2 ವರ್ಷಗಳ ನಂತರ ಆಗಸ್ಟ್ 5ರಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ನವದೆಹಲಿಯ ‘ಸರ್ ಮಾರ್ಕ್ ಟಲ್ಲಿ ಆಡಿಟೋರಿಯಂ’ನಲ್ಲಿ ನಡೆಯಲಿರುವ ‘ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ’ (FCC South Asia) ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶೇಖ್ ಹಸೀನಾ ಆನ್‌ಲೈನ್ ಮೂಲಕ ಭಾಗವಹಿಸಿ ಮಾತನಾಡಲಿದ್ದಾರೆ. ಈ ವೇಳೆ ಅವರು ತಮ್ಮ ಭವಿಷ್ಯದ ಯೋಜನೆಗಳು ಮತ್ತು ಬಾಂಗ್ಲಾದೇಶಕ್ಕೆ ಮರಳುವ ಪ್ರಸ್ತಾವನೆಯ ಬಗ್ಗೆ ಮಾತನಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು? ಸರ್ಕಾರದ ಉತ್ತರ ಇಲ್ಲಿದೆ

ಈ ಕಾರ್ಯಕ್ರಮದಲ್ಲಿ ಅವರ ಪುತ್ರ ಸಜೀಬ್ ವಾಜೆದ್ ಜೋಯ್, ಬಾಂಗ್ಲಾದೇಶದ ಮಾಜಿ ಶಿಕ್ಷಣ ಸಚಿವ ಮೊಹಿಬುಲ್ ಹಸನ್ ಚೌಧರಿ ನೌಫೆಲ್ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಮಹಮ್ಮದ್ ಅಲಿ ಕೂಡ ಭಾಗವಹಿಸಲಿದ್ದಾರೆ. ತಮ್ಮ 15 ವರ್ಷಗಳ ಆಡಳಿತ ಪತನಗೊಂಡು 2 ವರ್ಷಗಳು ಪೂರೈಸುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಭಾಷಣವು ಅವರು ಅಧಿಕಾರದಿಂದ ಕೆಳಗಿಳಿದ ನಂತರ ಭಾಗವಹಿಸುತ್ತಿರುವ ಅತ್ಯಂತ ಪ್ರಮುಖ ಸಾರ್ವಜನಿಕ ಕಾರ್ಯಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಬಹಳ ಮುಖ್ಯವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:50 pm, Tue, 4 August 26

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ