AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾನ್ಸ್​​ಜೆಂಡರ್​​ಗಳಿಗೆ ಗುರುತು, ಪದ್ಮ ಪ್ರಶಸ್ತಿಗಳನ್ನು ನೀಡಿದ್ದೇವೆ: ಲೋಕಸಭೆಯಲ್ಲಿ ಮೋದಿ

ಬಜೆಟ್ ಅಧಿವೇಶನದ ಕೊನೇ ದಿನವಾದ ಶನಿವಾರ ಲೋಕಸಭೆಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ,ಟ್ರಾನ್ಸ್​​ಜೆಂಡರ್ ಸಮುದಾಯವು ಯಾವಾಗಲೂ ಅಗೌರವವನ್ನು ಅನುಭವಿಸುತ್ತದೆ. ಜನರು ಈ ರೀತಿ ವರ್ತಿಸಬಾರದು. 17 ನೇ ಲೋಕಸಭೆಯ ಸದಸ್ಯರು ಅವರ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಅವರಿಗೆ ಉತ್ತಮ ಜೀವನವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಿದರು. ಭಾರತವು ಟ್ರಾನ್ಸ್​​ಜೆಂಡರ್​​ಗಳಿಗಾಗಿ ಏನು ಮಾಡಿದೆ ಎಂದು ಜಗತ್ತು ಚರ್ಚಿಸುತ್ತದೆ ಎಂದಿದ್ದಾರೆ.

ಟ್ರಾನ್ಸ್​​ಜೆಂಡರ್​​ಗಳಿಗೆ ಗುರುತು, ಪದ್ಮ ಪ್ರಶಸ್ತಿಗಳನ್ನು ನೀಡಿದ್ದೇವೆ: ಲೋಕಸಭೆಯಲ್ಲಿ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Feb 10, 2024 | 8:02 PM

Share

ದೆಹಲಿ ಫೆಬ್ರುವರಿ 10: 17ನೇ ಲೋಕಸಭೆಯ (Lok sabha) ಕೊನೆಯ ಅಧಿವೇಶನದ ಕೊನೆಯ ದಿನದಂದು ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಸರ್ಕಾರದ ಸಾಧನೆಗಳನ್ನು ಹೇಳಿದ್ದಾರೆ. ಸಾಧನೆ ಬಗ್ಗೆ ಮಾತನಾಡಿದ ಮೋದಿ ಸಮಾಜದ ಅಂಚಿನಲ್ಲಿರುವವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಗಣನೀಯ ಪ್ರಮಾಣದ ಕೆಲಸವನ್ನು ಮಾಡಲಾಗಿದೆ, ಅವಮಾನ ಅನುಭವಿಸಿದ ಟ್ರಾನ್ಸ್​​ಜೆಂಡರ್ ಸಮುದಾಯಕ್ಕೆ ಗುರುತನ್ನು ನೀಡಲಾಗಿದೆ ಎಂದಿದ್ದಾರೆ. “ಯಾರಿಗೂ ಕಾಳಜಿಯಿಲ್ಲದ, ಯಾರ ಯೋಗಕ್ಷೇಮವೂ ಇಲ್ಲ ಎಂದು ಯಾವಾಗಲೂ ಅಂಚಿನಲ್ಲಿರುವವರು ಈಗ ಸರ್ಕಾರದ ಅಸ್ತಿತ್ವವನ್ನು ಅನುಭವಿಸಿದ್ದಾರೆ. ಕೋವಿಡ್ ಸಮಯದಲ್ಲಿ ಉಚಿತ (ಲಸಿಕೆ) ಚುಚ್ಚುಮದ್ದನ್ನು ನೀಡಿದಾಗ, ಜನರಲ್ಲಿ ನಂಬಿಕೆಯನ್ನು ಹುಟ್ಟುಹಾಕಿತು. ಯಾರೂ ಅಸಹಾಯಕರಾಗಬಾರದು ಎಂದಿದ್ದಾರೆ ಮೋದಿ.

“ಟ್ರಾನ್ಸ್​​ಜೆಂಡರ್ ಸಮುದಾಯವು ಯಾವಾಗಲೂ ಅಗೌರವವನ್ನು ಅನುಭವಿಸುತ್ತದೆ. ಜನರು ಈ ರೀತಿ ವರ್ತಿಸಬಾರದು. 17 ನೇ ಲೋಕಸಭೆಯ ಸದಸ್ಯರು ಅವರ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಅವರಿಗೆ ಉತ್ತಮ ಜೀವನವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಿದರು. ಭಾರತವು ಟ್ರಾನ್ಸ್​​ಜೆಂಡರ್​​ಗಳಿಗಾಗಿ ಏನು ಮಾಡಿದೆ ಎಂದು ಜಗತ್ತು ಚರ್ಚಿಸುತ್ತದೆ. ನಾವು ಟ್ರಾನ್ಸ್​​ಜೆಂಡರ್​​​ಗಳಿಗಾಗಿ ಗುರುತನ್ನು ನೀಡಿದೆವು. ಆ ಸಮುದಾಯದವರಿಗೆ 16,000-17,000 ಗುರುತಿನ ಚೀಟಿಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಟ್ರಾನ್ಸ್​​ಜೆಂಡರ್ ಸಮುದಾಯದ ಜನರು ಮುದ್ರಾ ಯೋಜನೆಯಡಿ ಸಾಲ ಪಡೆದು ವ್ಯಾಪಾರ ಆರಂಭಿಸಿದ್ದಾರೆ. ನಾವು ಟ್ರಾನ್ಸ್​​ಜೆಂಡರ್​​ಗಳಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿದ್ದೇವೆ. ಅವರು ಈ ಹಿಂದೆ ಮಾಡದ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲಾರಂಭಿಸಿದ್ದಾರೆ. ಅವರು ಈಗ ಗೌರವದ ಜೀವನವನ್ನು ನಡೆಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

2019 ರಲ್ಲಿ, ಭರತನಾಟ್ಯ ನೃತ್ಯಗಾರ್ತಿ ನರ್ತಕಿ ನಟರಾಜ್ ಅವರು ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಮೊದಲ ಟ್ರಾನ್ಸ್​​ಜೆಂಡರ್ ಆಗಿದ್ದಾರೆ. 2021 ರಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯ ಮೊದಲ ಟ್ರಾನ್ಸ್​​ಜೆಂಡರ್ ಅಧ್ಯಕ್ಷರಾದ ಜಾನಪದ ನೃತ್ಯಗಾರ್ತಿ ಮಂಜಮ್ಮ ಜೋಗತಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು.

ಇದನ್ನೂ ಓದಿಮುಂದಿನ 25 ವರ್ಷಗಳಲ್ಲಿ ನಮ್ಮ ದೇಶ ವಿಕಸಿತ ಭಾರತ ಆಗಲಿದೆ: ಪ್ರಧಾನಿ ಮೋದಿ

ಸಾರ್ವತ್ರಿಕ ಚುನಾವಣೆಗೆ ಮುನ್ನ ಸಂಸತ್ತಿನಲ್ಲಿ ಮಾಡಿದ ಕೊನೆಯ ಭಾಷಣದಲ್ಲಿ, 17 ನೇ ಲೋಕಸಭೆಯ ಐದು ವರ್ಷಗಳಲ್ಲಿ “ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆ” ದ ಅವಧಿಯಲ್ಲಿ ಅನೇಕ ಬದಲಾವಣೆಯ ಸುಧಾರಣೆಗಳನ್ನು ಕೈಗೊಳ್ಳಲಾಗಿದೆ ಮುಂಬರುವ 25 ವರ್ಷಗಳು ದೇಶಕ್ಕೆ ಬಹಳ ನಿರ್ಣಾಯಕವಾಗಿದೆ, ಒಂದು ಕಡೆ, ರಾಜಕೀಯ ಆಕಾಂಕ್ಷೆಗಳಿವೆ, ಮತ್ತೊಂದೆಡೆ ದೇಶಕ್ಕಾಗಿ ಕನಸುಗಳಿವೆ. ಮುಂದಿನ 25 ವರ್ಷಗಳಲ್ಲಿ ಭಾರತವು ‘ವಿಕಸಿತ್ ಭಾರತ’ ಆಗಲಿದೆ ಎಂದಿದ್ದಾರೆ. ತಮ್ಮ ಸರ್ಕಾರದ ಸಾಧನೆಗಳನ್ನು ವಿವರಿಸಿದ ಮೋದಿ 370 ನೇ ವಿಧಿಯನ್ನು ರದ್ದುಗೊಳಿಸುವುದು ಮತ್ತು ತ್ರಿವಳಿ ತಲಾಖ್ ಮಸೂದೆಯ ಅಂಗೀಕಾರವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.

ಬ್ರಿಟಿಷರು ನೀಡಿದ ದಂಡ ಸಂಹಿತೆಯೊಂದಿಗೆ ನಾವು 75 ವರ್ಷಗಳ ಕಾಲ ಬದುಕಿದ್ದೇವೆ, ಹೊಸ ಪೀಳಿಗೆಗೆ, ದೇಶವು 75 ವರ್ಷಗಳ ಕಾಲ ದಂಡ ಸಂಹಿತೆಯ ಅಡಿಯಲ್ಲಿ ಬದುಕಿರಬಹುದು. ಆದರೆ ಮುಂದಿನ ಪೀಳಿಗೆಯು ನ್ಯಾಯ ಸಂಹಿತೆಯೊಂದಿಗೆ ಬದುಕುತ್ತದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಇದು ನಿಜವಾದ ಪ್ರಜಾಪ್ರಭುತ್ವ ಎಂದಿದ್ದಾರೆ ಪ್ರಧಾನಿ ಮೋದಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ