Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸರ್ಕಾರದ ಯೋಜನೆ ಕ್ರಿಶ್ಚಿಯನ್ ಸಮುದಾಯದ ಬಡವರಿಗೆ ತಲುಪುತ್ತಿದೆ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕ್ರಿಸ್ಮಸ್​​​ ಹಬ್ಬದ ಪ್ರಯುಕ್ತ ದೆಹಲಿಯ 7 ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿ ಆಯೋಜಿಸಿದ ಕ್ರಿಸ್ಮಸ್ ಕಾರ್ಯಕ್ರಮದಲ್ಲಿ ಕ್ರೈಸ್ತ ಧರ್ಮದ ಜನರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ಯೋಜನೆಗಳು ಕ್ರಿಶ್ಚಿಯನ್ ಸಮುದಾಯದ ಎಲ್ಲರಿಗೂ, ಅದರಲ್ಲೂ ವಿಶೇಷವಾಗಿ ಬಡವರಿಗೆ ಹಾಗೂ ವಂಚಿತರಿಗೆ ತಲುಪುತ್ತಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಯೋಜನೆ ಕ್ರಿಶ್ಚಿಯನ್ ಸಮುದಾಯದ ಬಡವರಿಗೆ ತಲುಪುತ್ತಿದೆ: ಪ್ರಧಾನಿ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 25, 2023 | 4:42 PM

ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ಇಂದು ಬೆಳಿಗ್ಗೆ ಕ್ರೈಸ್ತ ಧರ್ಮದ ಜನರಿಗೆ ಎಕ್ಸ್​​​​​​ನಲ್ಲಿ ಕ್ರಿಸ್ಮಸ್​​​​​ ಶುಭಾಶಯಗಳನ್ನು ತಿಳಿಸಿದರು. ಇದರ ಜತೆಗೆ ರಾಷ್ಟ್ರಪತಿ ಕೂಡ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಇದೀಗ ಕ್ರಿಸ್ಮಸ್​​​ ಪ್ರಯುಕ್ತ ದೆಹಲಿಯ 7 ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿ ಕ್ರಿಸ್ಮಸ್​​​ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಕ್ರೈಸ್ತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಕೆಲವು ವರ್ಷಗಳ ಹಿಂದೆ ಪೋಪ್ ಅವರನ್ನು ಭೇಟಿಯಾಗಿದ್ದೆ, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದೇವು. ಇನ್ನು ಇಂದು ಯೇಸ್​​ ಅವರು ಜನಿಸಿದ ದಿನ, ಇದೊಂದು ಪ್ರಮುಖ ದಿನವಾಗಿದೆ. ಹಾಗಾಗಿ ಇದನ್ನು ಕ್ರಿಸ್ಮಸ್​​​ ಎಂದು ಆಚರಣೆ ಮಾಡುತ್ತೇವೆ.

ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಂತ್ರವನ್ನು ನಂಬುತ್ತೇವೆ. ನಮ್ಮ ಸರ್ಕಾರದ ಎಲ್ಲ ಯೋಜನೆಗಳು ಸಕಾಲದಲ್ಲಿ ಎಲ್ಲರಿಗೂ ತಲುಪುವಂತೆ ಮಾಡಿದ್ದೇವೆ. ಅದರಿಂದ ಯಾರು ವಂಚಿತರಾಗಬಾರದು ಎಂದು ಹೇಳಿದರು.

ಅಭಿವೃದ್ಧಿಯ ಪ್ರಯೋಜನಗಳು ಹಿಂದುಳಿದವರಿಗೆ ತಲುಪುತ್ತಿವೆ

ಇಂದು ದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿಯ ಪ್ರಯೋಜನಗಳು ಕ್ರಿಶ್ಚಿಯನ್ ಸಮುದಾಯದ ಅನೇಕ ಜನರನ್ನು, ವಿಶೇಷವಾಗಿ ಬಡವರು ಮತ್ತು ವಂಚಿತರನ್ನು ತಲುಪುತ್ತಿದೆ ಎಂದರು. ಯೇಸು ಕ್ರಿಸ್ತನು ಸಹಾನುಭೂತಿ ಮತ್ತು ಸೇವೆಯ ಮೌಲ್ಯಗಳನ್ನು ಜೀವಿಸಿದರು. ಎಲ್ಲರಿಗೂ ನ್ಯಾಯವಿರುವ ಸಮಾಜವನ್ನು ರಚಿಸಲು ಅವರು ಶ್ರಮಿಸಿದರು.

ಇದನ್ನೂ ಓದಿ: ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವತ್ತ ಸಾಗುತ್ತಿದ್ದೇವೆ

ಭಾರತ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವತ್ತ ಸಾಗುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯೊಂದಿಗೆ ಸರ್ಕಾರವು ತನ್ನ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಈಗಾಗಲೇ ಅದಕ್ಕೆ ವೇಗವನ್ನು ಕೇಂದ್ರ ಸರ್ಕಾರ ನೀಡಿದೆ. ಕ್ರಿಸ್ಮಸ್​​ಗೆ ಉಡುಗೊರೆ ನೀಡುವ ಕ್ರಮ ಇದೆ. ಹಾಗಾಗಿ ನಾವು ಮುಂದಿನ ಪೀಳಿಗೆಗೆ ಒಳ್ಳೆಯ ಮತ್ತು ಉತ್ತಮವಾದ ಉಡುಗೊರೆಯನ್ನು ನೀಡಬೇಕಿದೆ, ಅವರಿಗೊಂದು ಉತ್ತಮ ಹಾದಿಯನ್ನು ಮತ್ತು ಮಾರ್ಗದರ್ಶವನ್ನು ನೀಡಬೇಕಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:57 pm, Mon, 25 December 23

ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ