AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಅರ್ಥವಾಗದಿರೋರು ಎದ್ದು ಹೋಗಬಹುದು -ಅಧಿಕಾರಿಯ ಮಾತಿಗೆ ಭುಗಿಲೆದ್ದ ಆಕ್ರೋಶ

ದೆಹಲಿ: ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯ ಆಯೋಜಿಸಿದ್ದ ಆನ್​ಲೈನ್​ ತರಬೇತಿ ವಿಚಾರ ಸಂಕಿರಣ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದೆ. ಆಗಸ್ಟ್​ 18ರಿಂದ 21ರವರೆಗೆ ರಾಷ್ಟ್ರಮಟ್ಟದಲ್ಲಿ ಆಯೋಜಿಸಿಲಾಗಿದ್ದ ಆನ್​​ಲೈನ್​ ಸಂಕಿರಣವು ಮತ್ತೊಂದು ಭಾಷಾ ಸಮರಕ್ಕೆ ಅಣಿಮಾಡಿಕೊಟ್ಟಿದೆ. ಹೌದು, ಆಯುಷ್ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ಆಯೋಜಿಸಿದ್ದ ಆನ್​ಲೈನ್​ ತರಬೇತಿ ಸಂಕಿರಣದಲ್ಲಿ ಸುಮಾರು 350ಕ್ಕು ಹೆಚ್ಚು ಜನ ಪಾಲ್ಗೊಂಡಿದ್ದರು. ಯೋಗ ತರಬೇತಿ ಕುರಿತು ಆಯೋಜಿಸಲಾಗಿದ್ದ ಈ ಆನ್​ಲೈನ್​ ಸಂಕಿರಣದಲ್ಲಿ ತಮಿಳುನಾಡಿನ ಸುಮಾರು 37 ವೈದ್ಯರು ಸಹ ಭಾಗಿಯಿದ್ದರು. ಈ ವೈದ್ಯರು ಹೇಳುವ ಪ್ರಕಾರ […]

ಹಿಂದಿ ಅರ್ಥವಾಗದಿರೋರು ಎದ್ದು ಹೋಗಬಹುದು -ಅಧಿಕಾರಿಯ ಮಾತಿಗೆ ಭುಗಿಲೆದ್ದ ಆಕ್ರೋಶ
KUSHAL V
|

Updated on: Aug 22, 2020 | 5:35 PM

Share

ದೆಹಲಿ: ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯ ಆಯೋಜಿಸಿದ್ದ ಆನ್​ಲೈನ್​ ತರಬೇತಿ ವಿಚಾರ ಸಂಕಿರಣ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದೆ. ಆಗಸ್ಟ್​ 18ರಿಂದ 21ರವರೆಗೆ ರಾಷ್ಟ್ರಮಟ್ಟದಲ್ಲಿ ಆಯೋಜಿಸಿಲಾಗಿದ್ದ ಆನ್​​ಲೈನ್​ ಸಂಕಿರಣವು ಮತ್ತೊಂದು ಭಾಷಾ ಸಮರಕ್ಕೆ ಅಣಿಮಾಡಿಕೊಟ್ಟಿದೆ. ಹೌದು, ಆಯುಷ್ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ಆಯೋಜಿಸಿದ್ದ ಆನ್​ಲೈನ್​ ತರಬೇತಿ ಸಂಕಿರಣದಲ್ಲಿ ಸುಮಾರು 350ಕ್ಕು ಹೆಚ್ಚು ಜನ ಪಾಲ್ಗೊಂಡಿದ್ದರು. ಯೋಗ ತರಬೇತಿ ಕುರಿತು ಆಯೋಜಿಸಲಾಗಿದ್ದ ಈ ಆನ್​ಲೈನ್​ ಸಂಕಿರಣದಲ್ಲಿ ತಮಿಳುನಾಡಿನ ಸುಮಾರು 37 ವೈದ್ಯರು ಸಹ ಭಾಗಿಯಿದ್ದರು. ಈ ವೈದ್ಯರು ಹೇಳುವ ಪ್ರಕಾರ ಸಂಕಿರಣದಲ್ಲಿ ನಡೆದ ಬಹಳಷ್ಟು ತರಬೇತಿ ಕ್ಲಾಸ್​ಗಳನ್ನು ಬಹುಪಾಲು ಹಿಂದಿಯಲ್ಲೇ ನಡೆಸಲಾಯಿತು. ವೈದ್ಯರಿಗೆ ಹಿಂದಿ ಅರ್ಥವಾಗದ ಕಾರಣ ಕ್ಲಾಸ್​ಗಳನ್ನು ಇಂಗ್ಲಿಷ್​ನಲ್ಲಿ ನಡೆಸಲು ಮನವಿ ಮಾಡಿದರೂ ಅದಕ್ಕೆ ಯಾರೂ ಸ್ಪಂದಿಸಲಿಲ್ಲ ಎಂದು ತಿಳಿದುಬಂದಿದೆ.

ಈ ನಡುವೆ ಸಂಕಿರಣದ ಅಂತಿಮ ದಿನದಂದು ಆಯುಷ್ ಸಚಿವಾಲಯದ ಕಾರ್ಯದರ್ಶಿಗಳಾದ ವೈದ್ಯ ರಾಜೇಶ್​ ಕೊಟೇಚಾರವರು ತಮ್ಮ ಭಾಷಣವನ್ನು ಹಿಂದಿಯಲ್ಲಿ ಮಾಡಲು ಪ್ರಾರಂಭಿಸಿದ್ದರಂತೆ. ಇದಕ್ಕೆ ತಮಿಳುನಾಡಿನ ವೈದ್ಯರು ದಯವಿಟ್ಟು ಇಂಗ್ಲಿಷ್​ನಲ್ಲಿ ಮಾತನಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಕೊಟೇಚಾರವರು ನನಗೆ ಸಮರ್ಪಕವಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ. ಹಾಗಾಗಿ, ನಾನು ಹಿಂದಿಯಲ್ಲಿ ಮಾತನಾಡುತ್ತೇನೆ. ಹಿಂದಿ ಅರ್ಥವಾಗದೆ ಇರುವವರು ಸೆಷನ್​ ಬಿಟ್ಟು ಹೋಗಬಹುದು ಎಂದು ಹೇಳಿದ್ದಾರಂತೆ.

ಕಾರ್ಯದರ್ಶಿ ಕೊಟೇಚಾರ ಮಾತಿಗೆ ಇದೀಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. DMK ಸಂಸದೆ ಕನಿಮೋಳಿ ಮತ್ತು ಕಾಂಗ್ರೆಸ್​ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ P ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಸಹ ಇದನ್ನು ಖಂಡಿಸಿದ್ದಾರೆ. ಸಂಸದೆ ಕನಿಮೋಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಆಗ್ರಹಿಸಿ ಸಹ ಕೇಂದ್ರ ಆಯುಷ್​ ಸಚಿವ ಶ್ರೀಪಾದ್ ನಾಯಕ್​ರಿಗೆ ಪತ್ರ ಬರೆದಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು