AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜ್ವಾಗ್ಲೂ ಪೀರಿಯಡ್ಸ್​ ಆಗಿದ್ಯಾ, ಸುಳ್ಳು ಹೇಳ್ತಿದ್ದೀರಾ, ಮಹಿಳಾ ಸಿಬ್ಬಂದಿಗೆ ಬಟ್ಟೆ ಬಿಚ್ಚು ಎಂದ ಯೂನಿವರ್ಸಿಟಿ ಮೇಲ್ವಿಚಾರಕ

ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ಬಳಿ ಪುರುಷ ಮೇಲ್ವಿಚಾರಕ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿರುವ ಘಟನೆ ವರದಿಯಾಗಿದೆ. ನಾಲ್ವರು ನೈರ್ಮಲ್ಯ ಕಾರ್ಮಿಕರು ಮುಟ್ಟಾಗಿದ್ದರು, ಅದಕ್ಕೆ ನಿಮಗೆ ನಿಜವಾಗ್ಲೂ ಪೀರಿಯಡ್ಸ್​ ಆಗಿದೆಯಾ ಅಥವಾ ಸುಳ್ಳು ಹೇಳುತ್ತಿದ್ದೀರಾ ಬಟ್ಟೆ ಬಿಚ್ಚಿ ಎಂದು ಆತ ಒತ್ತಾಯಿಸಿದ್ದಾನೆ ಎನ್ನುವ ದೂರು ಕೇಳಿಬಂದಿದೆ. ಹರಿಯಾಣ ರಾಜ್ಯಪಾಲ ಅಸಿಮ್ ಕುಮಾರ್ ಘೋಷ್ ಅವರು ಅಕ್ಟೋಬರ್ 26 ರಂದು ವಿಶ್ವವಿದ್ಯಾಲಯ ಆವರಣಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ನಿಜ್ವಾಗ್ಲೂ ಪೀರಿಯಡ್ಸ್​ ಆಗಿದ್ಯಾ, ಸುಳ್ಳು ಹೇಳ್ತಿದ್ದೀರಾ, ಮಹಿಳಾ ಸಿಬ್ಬಂದಿಗೆ ಬಟ್ಟೆ ಬಿಚ್ಚು ಎಂದ ಯೂನಿವರ್ಸಿಟಿ ಮೇಲ್ವಿಚಾರಕ
ಮಹಿಳೆ
ನಯನಾ ರಾಜೀವ್
|

Updated on: Oct 31, 2025 | 8:14 AM

Share

ರೋಹ್ಟಕ್, ಅಕ್ಟೋಬರ್ 31: ಹರಿಯಾಣದ ರೋಹ್ಟಕ್ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ಬಳಿ ಪುರುಷ ಮೇಲ್ವಿಚಾರಕ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿರುವ ಘಟನೆ ವರದಿಯಾಗಿದೆ. ನಾಲ್ವರು ನೈರ್ಮಲ್ಯ ಕಾರ್ಮಿಕರು ಮುಟ್ಟಾಗಿದ್ದರು, ಅದಕ್ಕೆ ನಿಮಗೆ ನಿಜವಾಗ್ಲೂ ಪೀರಿಯಡ್ಸ್(Periods)ಆಗಿದೆಯಾ ಅಥವಾ ಸುಳ್ಳು ಹೇಳುತ್ತಿದ್ದೀರಾ ಬಟ್ಟೆ ಬಿಚ್ಚಿ ಎಂದು ಆತ ಒತ್ತಾಯಿಸಿದ್ದಾನೆ ಎನ್ನುವ ದೂರು ಕೇಳಿಬಂದಿದೆ.

ಹರಿಯಾಣ ರಾಜ್ಯಪಾಲ ಅಸಿಮ್ ಕುಮಾರ್ ಘೋಷ್ ಅವರು ಅಕ್ಟೋಬರ್ 26 ರಂದು ವಿಶ್ವವಿದ್ಯಾಲಯ ಆವರಣಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇಬ್ಬರು ಮೇಲ್ವಿಚಾರಕರನ್ನು ವಿನೋದ್ ಕುಮಾರ್ ಮತ್ತು ವಿತೇಂದರ್ ಕುಮಾರ್ ಎಂದು ಗುರುತಿಸಲಾಗಿದೆ. ಕೆಲಸಕ್ಕೆ ತಡವಾಗಿ ತಲುಪಿದ್ದಕ್ಕಾಗಿ ವಿನೋದ್ ಮತ್ತು ವಿತೇಂದರ್ ನಾಲ್ವರು ಉದ್ಯೋಗಿಗಳನ್ನು ಪ್ರಶ್ನಿಸಿದಾಗ, ಅವರು ಪೀರಿಯಡ್ಸ್ಆಗಿದೆ, ಸ್ವಲ್ಪ ಹೊಟ್ಟೆ ನೋವಿತ್ತು ಅದಕ್ಕೆ ತಡವಾಯಿತು ಎಂದು ಹೇಳಿದ್ದಾರೆ.

ಆದರೆ ಅವರಲ್ಲೊಬ್ಬ ಮೇಲ್ವಿಚಾರಕ್ಕೆ ಇವರ ವಿವರಣೆ ಕೇಳಲು ಸಿದ್ಧನಿರಲಿಲ್ಲ. ಪುರಾವೆ ಕೊಡಿ ಎಂದು ಕೇಳಿದ ಆತ ಬಟ್ಟೆ ಬಿಚ್ಚುವಂತೆ ಸೂಚಿಸಿದ್ದಾನೆ. ನಂತರ ಮೇಲ್ವಿಚಾರಕರು ಮತ್ತೊಬ್ಬ ಮಹಿಳಾ ಸಿಬ್ಬಂದಿಗೆ ಅವರು ಸ್ಯಾನಿಟರಿ ಪ್ಯಾಡ್‌ಗಳನ್ನು ಧರಿಸಿದ್ದಾರೆಯೇ ಎಂದು ಪರಿಶೀಲಿಸಲು ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಓದಿ:  ವಿಶ್ವ ಋತುಚಕ್ರ ನೈರ್ಮಲ್ಯ ದಿನ: ಮುಟ್ಟಿನ ಬಗ್ಗೆ ಮೌಢ್ಯ, ಮುಜುಗರ ಬೇಡವೇ ಬೇಡ; ಆ ದಿನಗಳಲ್ಲಿ ಸ್ವಚ್ಛತೆಯೇ ಆದ್ಯತೆಯಾಗಲಿ

ಸಿಬ್ಬಂದಿ ಸ್ಯಾನಿಟರಿ ಪ್ಯಾಡ್‌ಗಳ ಫೋಟೊಗಳನ್ನು ತೆಗೆದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ, ಮಹಿಳಾ ಕಾರ್ಮಿಕರು ಮೇಲ್ವಿಚಾರಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರು ಸಹ ಸ್ಥಳದಲ್ಲಿ ಜಮಾಯಿಸಿ ಇಬ್ಬರು ಪುರುಷರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ರಿಜಿಸ್ಟ್ರಾರ್ ಡಾ. ಕೃಷ್ಣಕಾಂತ್ ಗುಪ್ತಾ ಮತ್ತು ಉಪಕುಲಪತಿ ಪ್ರೊ. ರಾಜ್‌ವೀರ್ ಕೂಡ ನಾಲ್ವರು ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು.

ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಇಬ್ಬರೂ ಮೇಲ್ವಿಚಾರಕರನ್ನು ಅಮಾನತುಗೊಳಿಸಿದೆ. ಪೊಲೀಸರನ್ನೂ ಕರೆಸಲಾಯಿತು. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪ್ರಶ್ನಿಸಲಾಯಿತು. ಹರಿಯಾಣ ಮಹಿಳಾ ಆಯೋಗವು ಘಟನೆಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ಕೋರಿ ರೋಹ್ಟಕ್‌ನ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಪತ್ರ ಬರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ