AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಾಚೆಗಿನ ಮಿಲಿಟರಿ ದಾಳಿ ನಂತರ ಮಿಜೋರಾಂಗೆ ಪ್ರವೇಶಿಸಿದ್ದಾರೆ ನೂರಕ್ಕೂ ಹೆಚ್ಚು ಮ್ಯಾನ್ಮಾರ್ ಪ್ರಜೆಗಳು

Myanmar: ಇತ್ತೀಚಿನ ದಿನಗಳಲ್ಲಿ ಗಡಿಯುದ್ದಕ್ಕೂ ದಾಳಿ ಕಾರಣದಿಂದಾಗಿ ಮ್ಯಾನ್ಮಾರ್ ಪ್ರಜೆಗಳು ಮಿಜೋರಾಂಗೆ ಬರುತ್ತಿರುವುದು ಕಂಡು ಬಂದಿದೆ. ಈ ಜನರು ಚಾಂಫೈ ಮತ್ತು ಹ್ನಾಥಿಯಾಲ್ ಜಿಲ್ಲೆಗಳನ್ನು ಪ್ರವೇಶಿಸಿದ್ದಾರೆ. ಗಡಿಯುದ್ದಕ್ಕೂ ಪರಿಸ್ಥಿತಿ ಸುಧಾರಿಸಿದ ತಕ್ಷಣ ಅವರು ಹಿಂತಿರುಗುತ್ತಾರೆ ಎಂದು ನಾನು ನಂಬಿರುವುದಾಗಿ ಮಿಜೋರಾಂ ಮುಖ್ಯ ಕಾರ್ಯದರ್ಶಿ ಲಾಲ್ನುಮಾವಿಯಾ ಚುವಾಂಗೊ ಹೇಳಿದರು.

ಗಡಿಯಾಚೆಗಿನ ಮಿಲಿಟರಿ ದಾಳಿ ನಂತರ ಮಿಜೋರಾಂಗೆ ಪ್ರವೇಶಿಸಿದ್ದಾರೆ ನೂರಕ್ಕೂ ಹೆಚ್ಚು ಮ್ಯಾನ್ಮಾರ್ ಪ್ರಜೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 12, 2021 | 5:28 PM

Share

ಮಿಜೋರಾಂ: ಗಡಿಯುದ್ದಕ್ಕೂ ಸೇನಾ ದಾಳಿಯ ನಂತರ ಕಳೆದ ಕೆಲವು ದಿನಗಳಲ್ಲಿ 100 ಕ್ಕೂ ಹೆಚ್ಚು ಮ್ಯಾನ್ಮಾರ್  (Myanmar) ಪ್ರಜೆಗಳು ಮಿಜೋರಾಂನ (Mizoram) ಎರಡು ಜಿಲ್ಲೆಗಳನ್ನು ಪ್ರವೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕಳೆದ ಕೆಲವು ದಿನಗಳಲ್ಲಿ ಮ್ಯಾನ್ಮಾರ್‌ನಿಂದ ನೂರಾರು ಜನರು ಮಿಜೋರಾಂ ಪ್ರವೇಶಿಸಿದ್ದಾರೆ ಎಂದು ನಾನು ಕೇಳಿದ್ದೇನೆ. ಆದರೆ ಪ್ರಸ್ತುತ ಎಷ್ಟು ಜನ ಕ್ವಾರಂಟೈನ್ ನಲ್ಲಿದ್ದಾರೆ ಎಂಬ ನಿಖರ ಅಂಕಿಅಂಶ ನನ್ನ ಬಳಿ ಇಲ್ಲ ಎಂದು ಮಿಜೋರಾಂ ಗೃಹ ಸಚಿವ ಲಾಲ್ಚಮ್ಲಿಯಾನ ಹೇಳಿದರು. ಮಾಧ್ಯಮ ವರದಿಗಳ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಮಿಜೋರಾಂನ ಗಡಿಯ ಬಳಿ ಮ್ಯಾನ್ಮಾರ್‌ನಲ್ಲಿನ ಮಿಲಿಟರಿ ಆಡಳಿತ ಮತ್ತು ನೆರೆಯ ರಾಷ್ಟ್ರದ ಸೇನೆಯನ್ನು ವಿರೋಧಿಸುವ ಸಶಸ್ತ್ರ ನಾಗರಿಕರ ನಡುವೆ “ತೀವ್ರವಾದ ಹೋರಾಟ” ಭುಗಿಲೆದ್ದಿದೆ. ಹಿಂಸಾಚಾರದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿರುವ ಮ್ಯಾನ್ಮಾರ್ ಪ್ರಜೆಗಳು ಮಿಜೋರಾಂಗೆ ಬಂದಿದ್ದಾರೆ ಎಂದು ನಂಬಲಾಗಿದೆ.

ಈ ವರ್ಷದ ಮಾರ್ಚ್‌ನಿಂದ ಸಾವಿರಾರು ಮ್ಯಾನ್ಮಾರ್ ಪ್ರಜೆಗಳು ವಿಶೇಷವಾಗಿ ಭಾರತದ ಗಡಿಯ ಹತ್ತಿರ ವಾಸಿಸುತ್ತಿರುವವರು ಮಿಜೋರಾಂ ಪ್ರವೇಶಿಸಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಅವರಲ್ಲಿ 10,000 ಕ್ಕೂ ಹೆಚ್ಚು ಜನರು ಪ್ರಸ್ತುತ ಈಶಾನ್ಯ ರಾಜ್ಯದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಗಡಿಯುದ್ದಕ್ಕೂ ದಾಳಿ ಕಾರಣದಿಂದಾಗಿ ಮ್ಯಾನ್ಮಾರ್ ಪ್ರಜೆಗಳು ಮಿಜೋರಾಂಗೆ ಬರುತ್ತಿರುವುದು ಕಂಡು ಬಂದಿದೆ. ಈ ಜನರು ಚಾಂಫೈ ಮತ್ತು ಹ್ನಾಥಿಯಾಲ್ ಜಿಲ್ಲೆಗಳನ್ನು ಪ್ರವೇಶಿಸಿದ್ದಾರೆ. ಗಡಿಯುದ್ದಕ್ಕೂ ಪರಿಸ್ಥಿತಿ ಸುಧಾರಿಸಿದ ತಕ್ಷಣ ಅವರು ಹಿಂತಿರುಗುತ್ತಾರೆ ಎಂದು ನಾನು ನಂಬಿರುವುದಾಗಿ ಮಿಜೋರಾಂ ಮುಖ್ಯ ಕಾರ್ಯದರ್ಶಿ ಲಾಲ್ನುಮಾವಿಯಾ ಚುವಾಂಗೊ ಹೇಳಿದರು.

ಮಿಜೋರಾಂ ಮತ್ತು ಮ್ಯಾನ್ಮಾರ್ 510 ಕಿಮೀ ಗಡಿಯನ್ನು ಹಂಚಿಕೊಂಡಿವೆ. ಮಿಜೋರಾಂ ಪ್ರವೇಶಿಸಿದ ಹೆಚ್ಚಿನ ನಿರಾಶ್ರಿತರು ಮ್ಯಾನ್ಮಾರ್‌ನ ಚಿನ್ ರಾಜ್ಯದಿಂದ ಬಂದವರು. ಇದು ರಾಜ್ಯದ ಆರು ಜಿಲ್ಲೆಗಳಾದ ಚಂಪೈ, ಹ್ನಾಥಿಯಾಲ್, ಸೆರ್ಚಿಪ್, ಸೈತುಯಲ್, ಸಿಯಾಹಾ ಮತ್ತು ಲಾವ್ಂಗ್‌ಟಲೈನ್ನು ಹೊಂದಿಗೆ. ಮಿಜೋಸ್ ಮತ್ತು ಚಿನ್ಸ್ ನಿಕಟ ಜನಾಂಗೀಯ ಸಂಬಂಧಗಳನ್ನು ಹಂಚಿಕೊಂಡಿದ್ದಾರೆ.

“ಕಳೆದ ಕೆಲವು ದಿನಗಳಿಂದ ಸಣ್ಣ ಗುಂಪುಗಳಲ್ಲಿ ಹಲವಾರು ಗುಂಪುಗಳು ನಮ್ಮ ಜಿಲ್ಲೆಯನ್ನು ವಿವಿಧ ಗಡಿಗಳ ಮೂಲಕ ಪ್ರವೇಶಿಸಿವೆ. ಇತ್ತೀಚಿನ ದಿನಗಳಲ್ಲಿ ಒಳಹರಿವಿನ ನಿಖರವಾದ ಅಂಕಿಅಂಶ ನಮ್ಮಲ್ಲಿಲ್ಲ. ಪ್ರಸ್ತುತ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಸುಮಾರು 730 ಜನರು ಬಂದಿದ್ದಾರೆ. ಅವರಿಗೆ 6-7 ಹಳ್ಳಿಗಳಲ್ಲಿ ಗ್ರಾಮದ ಹಿರಿಯರು ವಸತಿ ನೀಡುತ್ತಿದ್ದಾರೆ ”ಎಂದು ಹ್ನಾಥಿಯಾಲ್ ನ ಹೆಚ್ಚುವರಿ ಉಪ ಆಯುಕ್ತ ಸೈಜಿಕ್‌ಪುಯಿ ಹೇಳಿದರು.

ಬುಧವಾರ 35 ಮ್ಯಾನ್ಮಾರ್ ಪ್ರಜೆಗಳು, ಅವರಲ್ಲಿ ಹೆಚ್ಚಿನವರು ವಯಸ್ಸಾದ ಮತ್ತು ದುರ್ಬಲ ಮಹಿಳೆಯರು ಮತ್ತು ಸಣ್ಣ ಮಕ್ಕಳು ನಮ್ಮ ಜಿಲ್ಲೆಯನ್ನು ಪ್ರವೇಶಿಸಿದರು. ಸ್ಥಳೀಯ ಎನ್‌ಜಿಒಗಳು ಜೌಲ್‌ಸೀ ಗ್ರಾಮದಿಂದ ನಿರ್ಮಿಸಲಾಗಿರುವ ತಾತ್ಕಾಲಿಕ ಆಶ್ರಯದಲ್ಲಿ ಅವರಿಗೆ ಅವಕಾಶ ಕಲ್ಪಿಸಿವೆ ಎಂದು  ಚಾಂಪೈ ಉಪ ಆಯುಕ್ತೆ ಮಾರಿಯಾ ಸಿಟಿ ಜುವಾಲಿ ಹೇಳಿದರು.

ಇದನ್ನೂ ಓದಿ: ಗಡಿ ಸಂಘರ್ಷ: ಮಿಜೋರಾಂ ರಾಜ್ಯದ ನಾಗರಿಕನ ಮೇಲೆ ಅಸ್ಸಾಂ ಪೊಲೀಸರ ಗುಂಡಿನ ದಾಳಿ

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ನಾಮಫಲಕದಿಂದ ಅದಾನಿ ಏರ್​​ಪೋರ್ಟ್ಸ್ ಟ್ಯಾಗ್ ಮಾಯ

(Over 100 Myanmar nationals have entered two districts of Mizoram after military offensive across border)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ