AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ವಿಷ ಉಣಿಸಿ ಹತ್ಯೆ; ತನಿಖೆ ಪ್ರಾರಂಭಿಸಿದ ಪೊಲೀಸರು

ಸಾಮೂಹಿಕವಾಗಿ ನಾಯಿಗಳನ್ನು ಕೊಂದು ಅವುಗಳ ಶವವನ್ನು ಗುಂಡಿಯೊಳಗೆ ಹಾಕಿರುವ ವಿಡಿಯೋ ಕೂಡ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಈ ಬಗ್ಗೆ ಸಿದ್ದಿಪೇಟ್​ ಜಿಲ್ಲಾಧಿಕಾರಿಗೂ ಗೌತಮ್​ ದೂರು ನೀಡಿದ್ದಾರೆ.

100ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ವಿಷ ಉಣಿಸಿ ಹತ್ಯೆ; ತನಿಖೆ ಪ್ರಾರಂಭಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 30, 2022 | 10:14 AM

Share

ಬೀಡಾಡಿ ಹಸುಗಳು, ಬೀದಿ ನಾಯಿಗಳು, ಊರಿಗೆ ದಾಳಿ ಇಡುವ ಮಂಗಗಳಿಂದ ತೊಂದರೆಗಳು ತಪ್ಪಿದ್ದಲ್ಲ ಎಂಬುದು ಸತ್ಯ. ಅದರಲ್ಲಿ ಈ ಹಸುಗಳು ಬೆಳೆಹಾನಿ ಮಾತ್ರ ಮಾಡಿದರೆ, ನಾಯಿ-ಮಂಗಗಳು ಮನುಷ್ಯರ ಮೇಲೆ ಕೂಡ ಆಕ್ರಮಣ ಮಾಡುತ್ತವೆ. ಅದರಲ್ಲೂ ಬೀದಿ ನಾಯಿಗಳ ಆಕ್ರಮಣದಿಂದ ಅದೆಷ್ಟೋ ಪುಟ್ಟ ಮಕ್ಕಳು ಜೀವವನ್ನೇ ಬಿಟ್ಟ ಉದಾಹರಣೆಗಳೂ ಇವೆ. ಹೀಗಾಗಿ ಬೀಡಾಡಿ ಪ್ರಾಣಿಗಳ ಸಂಖ್ಯೆ ಹೆಚ್ಚಾದಾಗ ಸ್ಥಳೀಯ ಆಡಳಿತಗಳೇ ಮುಂದಾಗಿ ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ ತೆಲಂಗಾಣದ ಸಿದ್ದಿಪೇಟ್​ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಲ್ಲಲಾಗಿದೆ. ಇದು ಪ್ರಾಣಿಗಳ ಹಕ್ಕು ರಕ್ಷಣಾ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪ್ರಾಣಿ ಹಕ್ಕುಗಳ ರಕ್ಷಣಾ ಹೋರಾಟಗಾರ ಗೌತಮ್​ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಿದ್ದಿಪೇಟ್​ ಜಿಲ್ಲೆಯ ಜಗದೇವ್​​ಪುರ ಮಂಡಲ್​​​ನಲ್ಲಿರುವ ತಿಗುಲ್​ ಎಂಬ ಗ್ರಾಮದಲ್ಲಿ 100ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆಗೈಯ್ಯಲಾಗಿದೆ. ಆ ಗ್ರಾಮದ ಸರ್​ಪಂಚ್​, ಗ್ರಾಮಪಂಚಾಯಿತಿ ಕಾರ್ಯದರ್ಶಿ ಸೇರಿ, ಒಬ್ಬ ವೃತ್ತಿಪರ ನಾಯಿಹಿಡಿಯುವವನನ್ನು ನೇಮಕ ಮಾಡಿಕೊಂಡು ಈ ಕೃತ್ಯ ನಡೆಸಿದ್ದಾರೆ. ನಾಯಿಗಳಿಗೆ ವಿಷಪೂರಿತ ಅಂಶವನ್ನು ಇಂಜೆಕ್ಟ್​ ಮಾಡಲಾಗಿದೆ ಎಂದು ಗೌತಮ್​ ಆರೋಪಿಸಿದ್ದಾರೆ.

ಹೀಗೆ ಸಾಮೂಹಿಕವಾಗಿ ನಾಯಿಗಳನ್ನು ಕೊಂದು ಅವುಗಳ ಶವವನ್ನು ಗುಂಡಿಯೊಳಗೆ ಹಾಕಿರುವ ವಿಡಿಯೋ ಕೂಡ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಈ ಬಗ್ಗೆ ಸಿದ್ದಿಪೇಟ್​ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ಘಟನೆ ನಡೆದ ಗ್ರಾಮದ ಸರ್​ಪಂಚ್​ ಮತ್ತು ಕಾರ್ಯದರ್ಶಿಯನ್ನು ಅಮಾನತು ಮಾಡುವಂತೆ ಹೇಳಿದ್ದೇನೆ ಎಂದೂ ಗೌತಮ್ ತಿಳಿಸಿದ್ದಾರೆ.

ಇದನ್ನೂ ಓದಿ: IPL 2022: ರಾಜಸ್ಥಾನ್ ರಾಯಲ್ಸ್ ಎದುರು ಹೀನಾಯ ಪ್ರದರ್ಶನ; ಬೇಡದ ದಾಖಲೆ ಬರೆದ ಸನ್​ರೈಸರ್ಸ್​​ ಹೈದರಾಬಾದ್

Published On - 9:56 am, Wed, 30 March 22

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ