AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ವಿಷ ಉಣಿಸಿ ಹತ್ಯೆ; ತನಿಖೆ ಪ್ರಾರಂಭಿಸಿದ ಪೊಲೀಸರು

ಸಾಮೂಹಿಕವಾಗಿ ನಾಯಿಗಳನ್ನು ಕೊಂದು ಅವುಗಳ ಶವವನ್ನು ಗುಂಡಿಯೊಳಗೆ ಹಾಕಿರುವ ವಿಡಿಯೋ ಕೂಡ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಈ ಬಗ್ಗೆ ಸಿದ್ದಿಪೇಟ್​ ಜಿಲ್ಲಾಧಿಕಾರಿಗೂ ಗೌತಮ್​ ದೂರು ನೀಡಿದ್ದಾರೆ.

100ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ವಿಷ ಉಣಿಸಿ ಹತ್ಯೆ; ತನಿಖೆ ಪ್ರಾರಂಭಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Mar 30, 2022 | 10:14 AM

ಬೀಡಾಡಿ ಹಸುಗಳು, ಬೀದಿ ನಾಯಿಗಳು, ಊರಿಗೆ ದಾಳಿ ಇಡುವ ಮಂಗಗಳಿಂದ ತೊಂದರೆಗಳು ತಪ್ಪಿದ್ದಲ್ಲ ಎಂಬುದು ಸತ್ಯ. ಅದರಲ್ಲಿ ಈ ಹಸುಗಳು ಬೆಳೆಹಾನಿ ಮಾತ್ರ ಮಾಡಿದರೆ, ನಾಯಿ-ಮಂಗಗಳು ಮನುಷ್ಯರ ಮೇಲೆ ಕೂಡ ಆಕ್ರಮಣ ಮಾಡುತ್ತವೆ. ಅದರಲ್ಲೂ ಬೀದಿ ನಾಯಿಗಳ ಆಕ್ರಮಣದಿಂದ ಅದೆಷ್ಟೋ ಪುಟ್ಟ ಮಕ್ಕಳು ಜೀವವನ್ನೇ ಬಿಟ್ಟ ಉದಾಹರಣೆಗಳೂ ಇವೆ. ಹೀಗಾಗಿ ಬೀಡಾಡಿ ಪ್ರಾಣಿಗಳ ಸಂಖ್ಯೆ ಹೆಚ್ಚಾದಾಗ ಸ್ಥಳೀಯ ಆಡಳಿತಗಳೇ ಮುಂದಾಗಿ ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ ತೆಲಂಗಾಣದ ಸಿದ್ದಿಪೇಟ್​ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಲ್ಲಲಾಗಿದೆ. ಇದು ಪ್ರಾಣಿಗಳ ಹಕ್ಕು ರಕ್ಷಣಾ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪ್ರಾಣಿ ಹಕ್ಕುಗಳ ರಕ್ಷಣಾ ಹೋರಾಟಗಾರ ಗೌತಮ್​ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಿದ್ದಿಪೇಟ್​ ಜಿಲ್ಲೆಯ ಜಗದೇವ್​​ಪುರ ಮಂಡಲ್​​​ನಲ್ಲಿರುವ ತಿಗುಲ್​ ಎಂಬ ಗ್ರಾಮದಲ್ಲಿ 100ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆಗೈಯ್ಯಲಾಗಿದೆ. ಆ ಗ್ರಾಮದ ಸರ್​ಪಂಚ್​, ಗ್ರಾಮಪಂಚಾಯಿತಿ ಕಾರ್ಯದರ್ಶಿ ಸೇರಿ, ಒಬ್ಬ ವೃತ್ತಿಪರ ನಾಯಿಹಿಡಿಯುವವನನ್ನು ನೇಮಕ ಮಾಡಿಕೊಂಡು ಈ ಕೃತ್ಯ ನಡೆಸಿದ್ದಾರೆ. ನಾಯಿಗಳಿಗೆ ವಿಷಪೂರಿತ ಅಂಶವನ್ನು ಇಂಜೆಕ್ಟ್​ ಮಾಡಲಾಗಿದೆ ಎಂದು ಗೌತಮ್​ ಆರೋಪಿಸಿದ್ದಾರೆ.

ಹೀಗೆ ಸಾಮೂಹಿಕವಾಗಿ ನಾಯಿಗಳನ್ನು ಕೊಂದು ಅವುಗಳ ಶವವನ್ನು ಗುಂಡಿಯೊಳಗೆ ಹಾಕಿರುವ ವಿಡಿಯೋ ಕೂಡ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಈ ಬಗ್ಗೆ ಸಿದ್ದಿಪೇಟ್​ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ಘಟನೆ ನಡೆದ ಗ್ರಾಮದ ಸರ್​ಪಂಚ್​ ಮತ್ತು ಕಾರ್ಯದರ್ಶಿಯನ್ನು ಅಮಾನತು ಮಾಡುವಂತೆ ಹೇಳಿದ್ದೇನೆ ಎಂದೂ ಗೌತಮ್ ತಿಳಿಸಿದ್ದಾರೆ.

ಇದನ್ನೂ ಓದಿ: IPL 2022: ರಾಜಸ್ಥಾನ್ ರಾಯಲ್ಸ್ ಎದುರು ಹೀನಾಯ ಪ್ರದರ್ಶನ; ಬೇಡದ ದಾಖಲೆ ಬರೆದ ಸನ್​ರೈಸರ್ಸ್​​ ಹೈದರಾಬಾದ್

Published On - 9:56 am, Wed, 30 March 22

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್