AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಗಳಲ್ಲಿ 18 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಲಭ್ಯವಿದೆ: ಕೇಂದ್ರ

18.15 ಕೋಟಿಗಿಂತ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಗಳಲ್ಲಿ 18 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಲಭ್ಯವಿದೆ: ಕೇಂದ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 12, 2022 | 8:19 AM

Share

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 18.15 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್-19 ಲಸಿಕೆ ಡೋಸ್‌ಗಳು (Covid 19 Vaccine) ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Union Ministry of Health and Family Welfare) ಮಂಗಳವಾರ ತಿಳಿಸಿದೆ. 18.15 ಕೋಟಿಗಿಂತ ಹೆಚ್ಚು (18,15,94,995) ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು,ಕೇಂದ್ರಾಡಳಿತ ಪ್ರದೇಶದಲ್ಲಿ ಲಭ್ಯವಿದೆ ಎಂದು ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇದಲ್ಲದೆ, 193.53 ಕೋಟಿ (1,93,53,58,865) ಕೊವಿಡ್ ಲಸಿಕೆ ಡೋಸ್‌ಗಳನ್ನು ಕೇಂದ್ರದ ಉಚಿತ  ಮತ್ತು ನೇರ ರಾಜ್ಯ ಸಂಗ್ರಹಣೆ ವರ್ಗದ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒದಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕೊವಿಡ್-19 ವ್ಯಾಕ್ಸಿನೇಷನ್ ಡ್ರೈವ್‌ನ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶದಲ್ಲಿರುವ ಲಸಿಕೆ ತಯಾರಕರು ಉತ್ಪಾದಿಸುವ ಶೇಕಡ 75 ರಷ್ಟು ಲಸಿಕೆಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಕೆ ಮಾಡುತ್ತದೆ. ಮಂಗಳವಾರ ಬೆಳಗ್ಗೆ 7 ಗಂಟೆಯವರೆಗೆ  ವರದಿಗಳ ಪ್ರಕಾರ ಭಾರತದ ಕೊವಿಡ್ ವ್ಯಾಕ್ಸಿನೇಷನ್ ಕವರೇಜ್ 190.50 ಕೋಟಿ (1,90,50,86,706) ಮೀರಿದೆ. ಇದನ್ನು 2,37,09,334 ಸೆಷನ್ ಮೂಲಕ ಸಾಧಿಸಲಾಗಿದೆ.

ಮಾರ್ಚ್ 16 ರಂದು ಪ್ರಾರಂಭವಾದ 12-14 ವರ್ಷ ವಯಸ್ಸಿನವರಿಗೆ ಕೊವಿಡ್ ಲಸಿಕೆ ನೀಡಿಕೆ ಅಡಿಯಲ್ಲಿ, 3.06 ಕೋಟಿ (3,06,99,031) ಹದಿಹರೆಯದವರಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ.

ಇದನ್ನೂ ಓದಿ
Image
ಅಮೆರಿಕ ಅಧ್ಯಕ್ಷ ಬೈಡನ್ ಆಯೋಜಿಸಿರುವ ಜಾಗತಿಕ ಕೊವಿಡ್-19 ಶೃಂಗಸಭೆಯಲ್ಲಿ ಇಂದು ಭಾಗವಹಿಸಲಿದ್ದಾರೆ ಮೋದಿ

Published On - 8:04 am, Thu, 12 May 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?