ರಾಜ್ಯಗಳಲ್ಲಿ 18 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಲಭ್ಯವಿದೆ: ಕೇಂದ್ರ

18.15 ಕೋಟಿಗಿಂತ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಗಳಲ್ಲಿ 18 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಲಭ್ಯವಿದೆ: ಕೇಂದ್ರ
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on:May 12, 2022 | 8:19 AM

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 18.15 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್-19 ಲಸಿಕೆ ಡೋಸ್‌ಗಳು (Covid 19 Vaccine) ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Union Ministry of Health and Family Welfare) ಮಂಗಳವಾರ ತಿಳಿಸಿದೆ. 18.15 ಕೋಟಿಗಿಂತ ಹೆಚ್ಚು (18,15,94,995) ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು,ಕೇಂದ್ರಾಡಳಿತ ಪ್ರದೇಶದಲ್ಲಿ ಲಭ್ಯವಿದೆ ಎಂದು ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇದಲ್ಲದೆ, 193.53 ಕೋಟಿ (1,93,53,58,865) ಕೊವಿಡ್ ಲಸಿಕೆ ಡೋಸ್‌ಗಳನ್ನು ಕೇಂದ್ರದ ಉಚಿತ  ಮತ್ತು ನೇರ ರಾಜ್ಯ ಸಂಗ್ರಹಣೆ ವರ್ಗದ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒದಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕೊವಿಡ್-19 ವ್ಯಾಕ್ಸಿನೇಷನ್ ಡ್ರೈವ್‌ನ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶದಲ್ಲಿರುವ ಲಸಿಕೆ ತಯಾರಕರು ಉತ್ಪಾದಿಸುವ ಶೇಕಡ 75 ರಷ್ಟು ಲಸಿಕೆಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಕೆ ಮಾಡುತ್ತದೆ. ಮಂಗಳವಾರ ಬೆಳಗ್ಗೆ 7 ಗಂಟೆಯವರೆಗೆ  ವರದಿಗಳ ಪ್ರಕಾರ ಭಾರತದ ಕೊವಿಡ್ ವ್ಯಾಕ್ಸಿನೇಷನ್ ಕವರೇಜ್ 190.50 ಕೋಟಿ (1,90,50,86,706) ಮೀರಿದೆ. ಇದನ್ನು 2,37,09,334 ಸೆಷನ್ ಮೂಲಕ ಸಾಧಿಸಲಾಗಿದೆ.

ಮಾರ್ಚ್ 16 ರಂದು ಪ್ರಾರಂಭವಾದ 12-14 ವರ್ಷ ವಯಸ್ಸಿನವರಿಗೆ ಕೊವಿಡ್ ಲಸಿಕೆ ನೀಡಿಕೆ ಅಡಿಯಲ್ಲಿ, 3.06 ಕೋಟಿ (3,06,99,031) ಹದಿಹರೆಯದವರಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ.

ಇದನ್ನೂ ಓದಿ
Image
ಅಮೆರಿಕ ಅಧ್ಯಕ್ಷ ಬೈಡನ್ ಆಯೋಜಿಸಿರುವ ಜಾಗತಿಕ ಕೊವಿಡ್-19 ಶೃಂಗಸಭೆಯಲ್ಲಿ ಇಂದು ಭಾಗವಹಿಸಲಿದ್ದಾರೆ ಮೋದಿ

Published On - 8:04 am, Thu, 12 May 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ