AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಶ್ರಮ್​​ ವೆಬ್​ಸೈಟ್​​ನ ದಾಖಲೆ; ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ

ಒಡಿಶಾ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಿಂದ ಅತಿಹೆಚ್ಚು ಸಂಖ್ಯೆಯ ಕಾರ್ಮಿಕರು ಇ-ಶ್ರಮ್​​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರೇ ಜಾಸ್ತಿಯಿದ್ದಾರೆ.

ಇ-ಶ್ರಮ್​​ ವೆಬ್​ಸೈಟ್​​ನ ದಾಖಲೆ; ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 17, 2021 | 6:09 PM

Share

ದೇಶದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್​ ತಯಾರಿಸಲು ಕೇಂದ್ರ ಸರ್ಕಾರ ಹೊರತಂದ ಇ-ಶ್ರಮ್​ ಪೋರ್ಟಲ್ (E-Shram Portal)​ ಯಶಸ್ವಿಯಾಗಿದೆ. ಈ-ಶ್ರಮ್​ ಪ್ರಾರಂಭವಾಗಿ ಎರಡೇ ತಿಂಗಳಲ್ಲಿ ಅಸಂಘಟಿತ ವಲಯದ 4 ಕೋಟಿಗೂ ಅಧಿಕ ಕಾರ್ಮಿಕರು ಇದರಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಸಚಿವ ಭೂಪೇಂದ್ರ ಯಾದವ್​ ತಿಳಿಸಿದ್ದಾರೆ. ಇದು ನಿಜಕ್ಕೂ ಒಂದು ಮೈಲಿಗಲ್ಲು. ಈ ಪೋರ್ಟಲ್​​ನಲ್ಲಿ ಹೆಸರು ನೋಂದಣಿ ಮಾಡಿಕೊಂಡ ಕಾರ್ಮಿಕರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅರ್ಹರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.  

ಇ-ಶ್ರಮ್​ ಯೋಜನೆ ಆಗಸ್ಟ್​ 26ರಂದು ಉದ್ಘಾಟನೆಯಾಗಿದೆ. ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣ ಯೋಜನೆ ಇದು. ಅಕ್ಟೋಬರ್​ 17ರವರೆಗೆ ಒಟ್ಟು 4.15 ಕೋಟಿ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು eshram.gov.in ವೆಬ್​​ಸೈಟ್​​ನಲ್ಲಿ ತೋರಿಸುತ್ತಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಕಾರ್ಮಿಕ ಸಚಿವಾಲಯ, ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಂಡವರಲ್ಲಿ ಶೇ.50.02ರಷ್ಟು ಮಹಿಳೆಯರೇ ಆಗಿದ್ದಾರೆ. ಉಳಿದ 49.98 ಪರ್ಸಂಟ್​ ಜನರು ಪುರುಷರು. ಹಾಗೇ, ಶೇ.43 ಕಾರ್ಮಿಕರು ಒಬಿಸಿ ಸಮುದಾಯದವು, ಶೇ.27 ಜನರು ಜನರಲ್​ ಕೆಟೆಗರಿ, ಶೇ.23ರಷ್ಟು ಜನರು ಎಸ್​ಸಿಯವರು ಮತ್ತು ಶೇ.7ರಷ್ಟು ಕಾರ್ಮಿಕರು ಎಸ್​ಟಿ ಸಮುದಾಯಕ್ಕೆ ಸೇರಿದವರು ಎಂದು ತಿಳಿಸಿದೆ.

ಒಡಿಶಾ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಿಂದ ಅತಿಹೆಚ್ಚು ಸಂಖ್ಯೆಯ ಕಾರ್ಮಿಕರು ಇ-ಶ್ರಮ್​​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರೇ ಜಾಸ್ತಿಯಿದ್ದಾರೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.  ಅದನ್ನು ಹೊರತುಪಡಿಸಿದರೆ ಆಟೋಮೊಬೈಲ್​, ಸಾರಿಗೆ, ಎಲೆಕ್ಟ್ರಾನಿಕ್ಸ್​, ಹಾರ್ಡ್​ವೇರ್​, ಶಿಕ್ಷಣ, ಆರೋಗ್ಯ, ರಿಟೇಲ್​, ಪ್ರವಾಸೋದ್ಯಮ, ಆತಿಥ್ಯ, ಆಹಾರ ಉದ್ಯಮದ ಕಾರ್ಮಿಕರೂ ಕೂಡ ಇ-ಶ್ರಮ್​ ವೇದಿಕೆಯಲ್ಲಿ ಹೆಸರು ನೋಂದಣಿ ಮಾಡಿದ್ದಾರೆ ಎಂದು ಹೇಳಿದೆ. ಇನ್ನು,  ನೋಂದಾಯಿತರಲ್ಲಿ ಶೇ.65.68 ರಷ್ಟು ಮಂದಿ 16-40ವರ್ಷದವರು. ಶೇ.34.32 ರಷ್ಟು ಮಂದಿ 40 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಎಂದೂ ಮಾಹಿತಿ ನೀಡಿದೆ.

ಇದನ್ನೂ ಓದಿ: ಉತ್ತರಾಖಂಡ್​​ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ರಕ್ಷಣಾ ತಂಡಗಳು ಸಜ್ಜು

ಟಿ20 ವಿಶ್ವಕಪ್​ಗೆ ಸಾಕ್ಷಿಯಾಗಲು ದುಬೈಗೆ ತೆರಳಿದ್ದಾರಾ ಅನುಷ್ಕಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ