AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಶ್ರಮ್​​ ವೆಬ್​ಸೈಟ್​​ನ ದಾಖಲೆ; ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ

ಒಡಿಶಾ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಿಂದ ಅತಿಹೆಚ್ಚು ಸಂಖ್ಯೆಯ ಕಾರ್ಮಿಕರು ಇ-ಶ್ರಮ್​​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರೇ ಜಾಸ್ತಿಯಿದ್ದಾರೆ.

ಇ-ಶ್ರಮ್​​ ವೆಬ್​ಸೈಟ್​​ನ ದಾಖಲೆ; ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 17, 2021 | 6:09 PM

Share

ದೇಶದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್​ ತಯಾರಿಸಲು ಕೇಂದ್ರ ಸರ್ಕಾರ ಹೊರತಂದ ಇ-ಶ್ರಮ್​ ಪೋರ್ಟಲ್ (E-Shram Portal)​ ಯಶಸ್ವಿಯಾಗಿದೆ. ಈ-ಶ್ರಮ್​ ಪ್ರಾರಂಭವಾಗಿ ಎರಡೇ ತಿಂಗಳಲ್ಲಿ ಅಸಂಘಟಿತ ವಲಯದ 4 ಕೋಟಿಗೂ ಅಧಿಕ ಕಾರ್ಮಿಕರು ಇದರಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಸಚಿವ ಭೂಪೇಂದ್ರ ಯಾದವ್​ ತಿಳಿಸಿದ್ದಾರೆ. ಇದು ನಿಜಕ್ಕೂ ಒಂದು ಮೈಲಿಗಲ್ಲು. ಈ ಪೋರ್ಟಲ್​​ನಲ್ಲಿ ಹೆಸರು ನೋಂದಣಿ ಮಾಡಿಕೊಂಡ ಕಾರ್ಮಿಕರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅರ್ಹರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.  

ಇ-ಶ್ರಮ್​ ಯೋಜನೆ ಆಗಸ್ಟ್​ 26ರಂದು ಉದ್ಘಾಟನೆಯಾಗಿದೆ. ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣ ಯೋಜನೆ ಇದು. ಅಕ್ಟೋಬರ್​ 17ರವರೆಗೆ ಒಟ್ಟು 4.15 ಕೋಟಿ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು eshram.gov.in ವೆಬ್​​ಸೈಟ್​​ನಲ್ಲಿ ತೋರಿಸುತ್ತಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಕಾರ್ಮಿಕ ಸಚಿವಾಲಯ, ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಂಡವರಲ್ಲಿ ಶೇ.50.02ರಷ್ಟು ಮಹಿಳೆಯರೇ ಆಗಿದ್ದಾರೆ. ಉಳಿದ 49.98 ಪರ್ಸಂಟ್​ ಜನರು ಪುರುಷರು. ಹಾಗೇ, ಶೇ.43 ಕಾರ್ಮಿಕರು ಒಬಿಸಿ ಸಮುದಾಯದವು, ಶೇ.27 ಜನರು ಜನರಲ್​ ಕೆಟೆಗರಿ, ಶೇ.23ರಷ್ಟು ಜನರು ಎಸ್​ಸಿಯವರು ಮತ್ತು ಶೇ.7ರಷ್ಟು ಕಾರ್ಮಿಕರು ಎಸ್​ಟಿ ಸಮುದಾಯಕ್ಕೆ ಸೇರಿದವರು ಎಂದು ತಿಳಿಸಿದೆ.

ಒಡಿಶಾ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಿಂದ ಅತಿಹೆಚ್ಚು ಸಂಖ್ಯೆಯ ಕಾರ್ಮಿಕರು ಇ-ಶ್ರಮ್​​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರೇ ಜಾಸ್ತಿಯಿದ್ದಾರೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.  ಅದನ್ನು ಹೊರತುಪಡಿಸಿದರೆ ಆಟೋಮೊಬೈಲ್​, ಸಾರಿಗೆ, ಎಲೆಕ್ಟ್ರಾನಿಕ್ಸ್​, ಹಾರ್ಡ್​ವೇರ್​, ಶಿಕ್ಷಣ, ಆರೋಗ್ಯ, ರಿಟೇಲ್​, ಪ್ರವಾಸೋದ್ಯಮ, ಆತಿಥ್ಯ, ಆಹಾರ ಉದ್ಯಮದ ಕಾರ್ಮಿಕರೂ ಕೂಡ ಇ-ಶ್ರಮ್​ ವೇದಿಕೆಯಲ್ಲಿ ಹೆಸರು ನೋಂದಣಿ ಮಾಡಿದ್ದಾರೆ ಎಂದು ಹೇಳಿದೆ. ಇನ್ನು,  ನೋಂದಾಯಿತರಲ್ಲಿ ಶೇ.65.68 ರಷ್ಟು ಮಂದಿ 16-40ವರ್ಷದವರು. ಶೇ.34.32 ರಷ್ಟು ಮಂದಿ 40 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಎಂದೂ ಮಾಹಿತಿ ನೀಡಿದೆ.

ಇದನ್ನೂ ಓದಿ: ಉತ್ತರಾಖಂಡ್​​ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ರಕ್ಷಣಾ ತಂಡಗಳು ಸಜ್ಜು

ಟಿ20 ವಿಶ್ವಕಪ್​ಗೆ ಸಾಕ್ಷಿಯಾಗಲು ದುಬೈಗೆ ತೆರಳಿದ್ದಾರಾ ಅನುಷ್ಕಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!