AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಶ್ರಮ್​​ ವೆಬ್​ಸೈಟ್​​ನ ದಾಖಲೆ; ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ

ಒಡಿಶಾ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಿಂದ ಅತಿಹೆಚ್ಚು ಸಂಖ್ಯೆಯ ಕಾರ್ಮಿಕರು ಇ-ಶ್ರಮ್​​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರೇ ಜಾಸ್ತಿಯಿದ್ದಾರೆ.

ಇ-ಶ್ರಮ್​​ ವೆಬ್​ಸೈಟ್​​ನ ದಾಖಲೆ; ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 17, 2021 | 6:09 PM

Share

ದೇಶದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್​ ತಯಾರಿಸಲು ಕೇಂದ್ರ ಸರ್ಕಾರ ಹೊರತಂದ ಇ-ಶ್ರಮ್​ ಪೋರ್ಟಲ್ (E-Shram Portal)​ ಯಶಸ್ವಿಯಾಗಿದೆ. ಈ-ಶ್ರಮ್​ ಪ್ರಾರಂಭವಾಗಿ ಎರಡೇ ತಿಂಗಳಲ್ಲಿ ಅಸಂಘಟಿತ ವಲಯದ 4 ಕೋಟಿಗೂ ಅಧಿಕ ಕಾರ್ಮಿಕರು ಇದರಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಸಚಿವ ಭೂಪೇಂದ್ರ ಯಾದವ್​ ತಿಳಿಸಿದ್ದಾರೆ. ಇದು ನಿಜಕ್ಕೂ ಒಂದು ಮೈಲಿಗಲ್ಲು. ಈ ಪೋರ್ಟಲ್​​ನಲ್ಲಿ ಹೆಸರು ನೋಂದಣಿ ಮಾಡಿಕೊಂಡ ಕಾರ್ಮಿಕರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅರ್ಹರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.  

ಇ-ಶ್ರಮ್​ ಯೋಜನೆ ಆಗಸ್ಟ್​ 26ರಂದು ಉದ್ಘಾಟನೆಯಾಗಿದೆ. ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣ ಯೋಜನೆ ಇದು. ಅಕ್ಟೋಬರ್​ 17ರವರೆಗೆ ಒಟ್ಟು 4.15 ಕೋಟಿ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು eshram.gov.in ವೆಬ್​​ಸೈಟ್​​ನಲ್ಲಿ ತೋರಿಸುತ್ತಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಕಾರ್ಮಿಕ ಸಚಿವಾಲಯ, ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಂಡವರಲ್ಲಿ ಶೇ.50.02ರಷ್ಟು ಮಹಿಳೆಯರೇ ಆಗಿದ್ದಾರೆ. ಉಳಿದ 49.98 ಪರ್ಸಂಟ್​ ಜನರು ಪುರುಷರು. ಹಾಗೇ, ಶೇ.43 ಕಾರ್ಮಿಕರು ಒಬಿಸಿ ಸಮುದಾಯದವು, ಶೇ.27 ಜನರು ಜನರಲ್​ ಕೆಟೆಗರಿ, ಶೇ.23ರಷ್ಟು ಜನರು ಎಸ್​ಸಿಯವರು ಮತ್ತು ಶೇ.7ರಷ್ಟು ಕಾರ್ಮಿಕರು ಎಸ್​ಟಿ ಸಮುದಾಯಕ್ಕೆ ಸೇರಿದವರು ಎಂದು ತಿಳಿಸಿದೆ.

ಒಡಿಶಾ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಿಂದ ಅತಿಹೆಚ್ಚು ಸಂಖ್ಯೆಯ ಕಾರ್ಮಿಕರು ಇ-ಶ್ರಮ್​​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರೇ ಜಾಸ್ತಿಯಿದ್ದಾರೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.  ಅದನ್ನು ಹೊರತುಪಡಿಸಿದರೆ ಆಟೋಮೊಬೈಲ್​, ಸಾರಿಗೆ, ಎಲೆಕ್ಟ್ರಾನಿಕ್ಸ್​, ಹಾರ್ಡ್​ವೇರ್​, ಶಿಕ್ಷಣ, ಆರೋಗ್ಯ, ರಿಟೇಲ್​, ಪ್ರವಾಸೋದ್ಯಮ, ಆತಿಥ್ಯ, ಆಹಾರ ಉದ್ಯಮದ ಕಾರ್ಮಿಕರೂ ಕೂಡ ಇ-ಶ್ರಮ್​ ವೇದಿಕೆಯಲ್ಲಿ ಹೆಸರು ನೋಂದಣಿ ಮಾಡಿದ್ದಾರೆ ಎಂದು ಹೇಳಿದೆ. ಇನ್ನು,  ನೋಂದಾಯಿತರಲ್ಲಿ ಶೇ.65.68 ರಷ್ಟು ಮಂದಿ 16-40ವರ್ಷದವರು. ಶೇ.34.32 ರಷ್ಟು ಮಂದಿ 40 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಎಂದೂ ಮಾಹಿತಿ ನೀಡಿದೆ.

ಇದನ್ನೂ ಓದಿ: ಉತ್ತರಾಖಂಡ್​​ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ರಕ್ಷಣಾ ತಂಡಗಳು ಸಜ್ಜು

ಟಿ20 ವಿಶ್ವಕಪ್​ಗೆ ಸಾಕ್ಷಿಯಾಗಲು ದುಬೈಗೆ ತೆರಳಿದ್ದಾರಾ ಅನುಷ್ಕಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?