AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಏರಿಕೆಯಾಗುತ್ತಿದೆ ಕೊವಿಡ್​ 19 ಸೋಂಕಿತರ ಸಂಖ್ಯೆ; ನಿರ್ಬಂಧ ನಿಯಮ ಉಲ್ಲಂಘನೆ, ನಿನ್ನೆ ಒಂದೇ ದಿನ 1.15 ಕೋಟಿ ರೂ.ದಂಡ ವಸೂಲಿ

ಕೊರೊನಾ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಹೊಸವರ್ಷದ ಮುಂಚಿತವಾಗಿಯೇ ಒಂದಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಗುಂಪುಗೂಡುವಿಕೆ ನಿಷೇಧಿಸಲಾಗಿದೆ. ಆದರೆ ಸಾರ್ವಜನಿಕರು ಕಾಯ್ದೆ ಉಲ್ಲಂಘನೆ ಮಾಡುತ್ತಿದ್ದಾರೆ.

ದೆಹಲಿಯಲ್ಲಿ ಏರಿಕೆಯಾಗುತ್ತಿದೆ ಕೊವಿಡ್​ 19 ಸೋಂಕಿತರ ಸಂಖ್ಯೆ; ನಿರ್ಬಂಧ ನಿಯಮ ಉಲ್ಲಂಘನೆ, ನಿನ್ನೆ ಒಂದೇ ದಿನ 1.15 ಕೋಟಿ ರೂ.ದಂಡ ವಸೂಲಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jan 03, 2022 | 5:09 PM

Share

ದೆಹಲಿಯಲ್ಲಿ ಕೊವಿಡ್​ 19 ಕೇಸ್(Covid 19 Cases)​ಗಳು ಏರಿಕೆಯಾಗುತ್ತಿವೆ. ಸದ್ಯ ರಾಷ್ಟ್ರರಾಜಧಾನಿಯಲ್ಲಿ ಪಾಸಿಟಿವಿಟಿ ದರ ಶೇ.6ರಷ್ಟಿದೆ. ದೆಹಲಿಯಲ್ಲಿ ಇಂದು 4100 ಕೊರೊನಾ ಸೋಂಕಿನ ಕೇಸ್​ಗಳು ಪತ್ತೆಯಾಗಿದ್ದು, ಕಳೆದ 7.5 ತಿಂಗಳಲ್ಲೇ ಇದು ಅತ್ಯಂತ ಹೆಚ್ಚಿನ ಪ್ರಕರಣಗಳಾಗಿವೆ.  ಹೀಗೆ ಪತ್ತೆಯಾಗುತ್ತಿರುವ ಕೊವಿಡ್​ 19 ಕೇಸ್​ಗಳೊಂದಿಗೆ ಒಮಿಕ್ರಾನ್​ ಸೋಂಕಿನ ಪ್ರಕರಣಗಳೂ ಹೆಚ್ಚುತ್ತಿವೆ. ಇನ್ನು ಒಂದು ವಾರದಲ್ಲಿ ಕೊರೊನಾ ಪ್ರಕರಣಗಳು ಗರಿಷ್ಠ ಮಟ್ಟಕ್ಕೆ ತಲುಪಬಹುದು ಎಂದು ತಜ್ಞರು  ಹೇಳಿದ್ದಾರೆ. ಆದರೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಆಸ್ಪತ್ರೆಗೆ ಸೇರುವವರ ಪ್ರಮಾಣ ಕಡಿಮೆ ಎಂದು ಹೇಳಲಾಗಿದೆ.

ದೆಹಲಿಯಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶ್ರೇಣೀಕೃತ ಪ್ರತಿಕ್ರಿಯಾ ಕಾರ್ಯ ಯೋಜನೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಆದರೆ ಈಗ ಇರುವ ಪಾಸಿಟಿವಿಟಿ ದರ ಹೀಗೆ ಮುಂದುವರಿದರೆ ಶೀಘ್ರದಲ್ಲೇ ರೆಡ್​ ಅಲರ್ಟ್​ ಘೋಷಿಸಲಾಗುವುದು ಎಂದೂ ಹೇಳಲಾಗಿದೆ.  ಹಾಗೊಮ್ಮೆ, ರೆಡ್​ ಅಲರ್ಟ್​ ಘೋಷಣೆಯಾದರೆ ದೆಹಲಿಯಲ್ಲಿ ಕೊವಿಡ್ 19 ನಿಯಂತ್ರಿಸಲು ಸಂಪೂರ್ಣ ಪ್ರಮಾಣದ ಕರ್ಫ್ಯೂ, ಜನದಟ್ಟಣಿ ನಿಯಂತ್ರಿಸಲು ವಿವಿಧ ಸಂಸ್ಥೆಗಳ ಸಂಪೂರ್ಣ ಬಂದ್​ನಂತ ನಿಯಮಗಳನ್ನು ಜಾರಿಗೊಳಿಸಬಹುದು.  ಈಗಲೂ ಕೂಡ ಅಲ್ಲಿ ಗುಂಪುಗೂಡುವಿಕೆ ನಿಷೇಧಿಸಲಾಗಿದೆ. ಸಿನಿಮಾ ಹಾಲ್​ಗಳು, ಥಿಯೇಟರ್​ಗಳೆಲ್ಲ ಶೇ.50ರ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಜ.2ರಂದು 1.15 ಕೋಟಿ ರೂ.ದಂಡ ವಸೂಲಿ ಕೊರೊನಾ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಹೊಸವರ್ಷದ ಮುಂಚಿತವಾಗಿಯೇ ಒಂದಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಗುಂಪುಗೂಡುವಿಕೆ ನಿಷೇಧಿಸಲಾಗಿದೆ. ಆದರೆ ಸಾರ್ವಜನಿಕರು ಕಾಯ್ದೆ ಉಲ್ಲಂಘನೆ ಮಾಡುತ್ತಿದ್ದಾರೆ. ಹೀಗೆ ಕೊವಿಡ್ 19 ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಜನವರಿ 2ರಂದು ಒಟ್ಟು 1.15 ಕೋಟಿ ದಂಡ ವಸೂಲಿ ಮಾಡಲಾಗಿದೆ. 45 ಎಫ್​ಐಆರ್​ಗಳು ದಾಖಲಾಗಿವೆ ಎಂದು ದೆಹಲಿ ಸರ್ಕಾರ ತಿಳಿಸಿದೆ.  ಜನವರಿ 1ರಂದು 66 ಎಫ್​ಐಆರ್​ಗಳು ದಾಖಲಾಗಿದ್ದು, ಒಟ್ಟು 99 ಲಕ್ಷ ರೂಪಾಯಿ ದಂಡ ವಸೂಲಿಯಾಗಿದೆ ಎಂದೂ ಮಾಹಿತಿ ನೀಡಿದೆ. ದೆಹಲಿ ಸರ್ಕಾರ ಹಿಂದೆಯೇ ಹೇಳಿತ್ತು. ಕೊವಿಡ್ 19 ನಿಯಂತ್ರಣ ನಿಯಮಗಳನ್ನು ಮೀರಿದರೆ ಸಂಬಂಧಪಟ್ಟ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು. ಸರ್ಕಾರ ಹೇರಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಲಾಗುತ್ತಿದೆ. ಜನವರಿ 2ರಂದು ಒಂದೇ ದಿನ ಬರೋಬ್ಬರಿ 1.15 ಕೋಟಿ ರೂಪಾಯಿ ವಸೂಲಿಯಾಗಿದೆ.

ಇದನ್ನೂ ಓದಿ: ಮೈಸೂರಲ್ಲಿ ಸೇಬು ಹಣ್ಣಿಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತರು ಕಾಂಗ್ರೆಸ್ ಕಾರ್ಯಕರ್ತರು!

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್