AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ

ನಿನ್ನೆ 53 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಅದರಲ್ಲಿ 47,55,674 ಜನರಿಗೆ ಮೊದಲ ಡೋಸ್​ ಆಗಿದ್ದು, ಉಳಿದ 6,31,277 ಮಂದಿಗೆ ಎರಡನೇ ಡೋಸ್​ ನೀಡಲಾಗಿದೆ.

Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 23, 2021 | 9:03 AM

Share

ದೆಹಲಿ: ಜೂನ್​ 21ರಿಂದ ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿ ಜಾರಿಯಾಗಿದೆ. ದೇಶಾದ್ಯಂತ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್​ ನೀಡಲಾಗುತ್ತಿದೆ. ಈ ನೀತಿ ಜಾರಿಗೆ ಬಂದ ಮೊದಲ ದಿನ ಅಂದರೆ ಸೋಮವಾರ ಬರೋಬ್ಬರಿ 88 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿತ್ತು. ಆದರೆ ಎರಡನೇ ದಿನ ಅಂದರೆ ಮಂಗಳವಾರ ಈ ಸಂಖ್ಯೆ ಕಡಿಮೆಯಾಗಿದೆ. ನಿನ್ನೆ ರಾತ್ರಿ 11.59ರ ಹೊತ್ತಿನ ಕೊವಿನ್​ ಆ್ಯಪ್​ ಡಾಟಾ ಅನ್ವಯ ಮಂಗಳವಾರ 53,86,951 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಮೊನ್ನೆಗಿಂತ..ನಿನ್ನೆಗೆ ಸುಮಾರು 30 ಲಕ್ಷ ಕಡಿಮೆಯಾಗಿದೆ.

ನಿನ್ನೆ 53 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಅದರಲ್ಲಿ 47,55,674 ಜನರಿಗೆ ಮೊದಲ ಡೋಸ್​ ಆಗಿದ್ದು, ಉಳಿದ 6,31,277 ಮಂದಿಗೆ ಎರಡನೇ ಡೋಸ್​ ನೀಡಲಾಗಿದೆ. ನಿನ್ನೆ ಒಟ್ಟಾರೆ 59 ಜನರಿಗೆ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗಿದ್ದು ವರದಿಯಾಗಿದೆ. ಇನ್ನು ಮಂಗಳವಾರ 28,55,609 ಪುರುಷರು ಹಾಗೂ 25,30,203 ಮಹಿಳೆಯರು ಲಸಿಕೆ ಪಡೆದಿದ್ದಾರೆ.

ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಪೌಲ್​, ಸೋಮವಾರದ ದಾಖಲೆ ಲಸಿಕೆ ಅಭಿಯಾನದ ಬಗ್ಗೆ ಮಾತನಾಡಿದ್ದರು. ಅಂದು ಶೇ.46ರಷ್ಟು ಮಹಿಳೆಯರು ಮತ್ತು ಶೇ.53 ರಷ್ಟು ಪುರುಷರು ಲಸಿಕೆ ಪಡೆದಿದ್ದಾರೆ. ನಾವು ಈ ಅಸಮತೋಲನವನ್ನು ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಮೂರನೆ ಅಲೆ ಸನಿಹವಾಗುತ್ತಿದೆ.. ಆದ್ರೆ ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ವೈದ್ಯರ ಕೊರತೆ.. 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?