AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ

ನಿನ್ನೆ 53 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಅದರಲ್ಲಿ 47,55,674 ಜನರಿಗೆ ಮೊದಲ ಡೋಸ್​ ಆಗಿದ್ದು, ಉಳಿದ 6,31,277 ಮಂದಿಗೆ ಎರಡನೇ ಡೋಸ್​ ನೀಡಲಾಗಿದೆ.

Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 23, 2021 | 9:03 AM

Share

ದೆಹಲಿ: ಜೂನ್​ 21ರಿಂದ ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿ ಜಾರಿಯಾಗಿದೆ. ದೇಶಾದ್ಯಂತ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್​ ನೀಡಲಾಗುತ್ತಿದೆ. ಈ ನೀತಿ ಜಾರಿಗೆ ಬಂದ ಮೊದಲ ದಿನ ಅಂದರೆ ಸೋಮವಾರ ಬರೋಬ್ಬರಿ 88 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿತ್ತು. ಆದರೆ ಎರಡನೇ ದಿನ ಅಂದರೆ ಮಂಗಳವಾರ ಈ ಸಂಖ್ಯೆ ಕಡಿಮೆಯಾಗಿದೆ. ನಿನ್ನೆ ರಾತ್ರಿ 11.59ರ ಹೊತ್ತಿನ ಕೊವಿನ್​ ಆ್ಯಪ್​ ಡಾಟಾ ಅನ್ವಯ ಮಂಗಳವಾರ 53,86,951 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಮೊನ್ನೆಗಿಂತ..ನಿನ್ನೆಗೆ ಸುಮಾರು 30 ಲಕ್ಷ ಕಡಿಮೆಯಾಗಿದೆ.

ನಿನ್ನೆ 53 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಅದರಲ್ಲಿ 47,55,674 ಜನರಿಗೆ ಮೊದಲ ಡೋಸ್​ ಆಗಿದ್ದು, ಉಳಿದ 6,31,277 ಮಂದಿಗೆ ಎರಡನೇ ಡೋಸ್​ ನೀಡಲಾಗಿದೆ. ನಿನ್ನೆ ಒಟ್ಟಾರೆ 59 ಜನರಿಗೆ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗಿದ್ದು ವರದಿಯಾಗಿದೆ. ಇನ್ನು ಮಂಗಳವಾರ 28,55,609 ಪುರುಷರು ಹಾಗೂ 25,30,203 ಮಹಿಳೆಯರು ಲಸಿಕೆ ಪಡೆದಿದ್ದಾರೆ.

ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಪೌಲ್​, ಸೋಮವಾರದ ದಾಖಲೆ ಲಸಿಕೆ ಅಭಿಯಾನದ ಬಗ್ಗೆ ಮಾತನಾಡಿದ್ದರು. ಅಂದು ಶೇ.46ರಷ್ಟು ಮಹಿಳೆಯರು ಮತ್ತು ಶೇ.53 ರಷ್ಟು ಪುರುಷರು ಲಸಿಕೆ ಪಡೆದಿದ್ದಾರೆ. ನಾವು ಈ ಅಸಮತೋಲನವನ್ನು ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಮೂರನೆ ಅಲೆ ಸನಿಹವಾಗುತ್ತಿದೆ.. ಆದ್ರೆ ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ವೈದ್ಯರ ಕೊರತೆ.. 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​