Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ

ನಿನ್ನೆ 53 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಅದರಲ್ಲಿ 47,55,674 ಜನರಿಗೆ ಮೊದಲ ಡೋಸ್​ ಆಗಿದ್ದು, ಉಳಿದ 6,31,277 ಮಂದಿಗೆ ಎರಡನೇ ಡೋಸ್​ ನೀಡಲಾಗಿದೆ.

Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 23, 2021 | 9:03 AM

ದೆಹಲಿ: ಜೂನ್​ 21ರಿಂದ ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿ ಜಾರಿಯಾಗಿದೆ. ದೇಶಾದ್ಯಂತ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್​ ನೀಡಲಾಗುತ್ತಿದೆ. ಈ ನೀತಿ ಜಾರಿಗೆ ಬಂದ ಮೊದಲ ದಿನ ಅಂದರೆ ಸೋಮವಾರ ಬರೋಬ್ಬರಿ 88 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿತ್ತು. ಆದರೆ ಎರಡನೇ ದಿನ ಅಂದರೆ ಮಂಗಳವಾರ ಈ ಸಂಖ್ಯೆ ಕಡಿಮೆಯಾಗಿದೆ. ನಿನ್ನೆ ರಾತ್ರಿ 11.59ರ ಹೊತ್ತಿನ ಕೊವಿನ್​ ಆ್ಯಪ್​ ಡಾಟಾ ಅನ್ವಯ ಮಂಗಳವಾರ 53,86,951 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಮೊನ್ನೆಗಿಂತ..ನಿನ್ನೆಗೆ ಸುಮಾರು 30 ಲಕ್ಷ ಕಡಿಮೆಯಾಗಿದೆ.

ನಿನ್ನೆ 53 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಅದರಲ್ಲಿ 47,55,674 ಜನರಿಗೆ ಮೊದಲ ಡೋಸ್​ ಆಗಿದ್ದು, ಉಳಿದ 6,31,277 ಮಂದಿಗೆ ಎರಡನೇ ಡೋಸ್​ ನೀಡಲಾಗಿದೆ. ನಿನ್ನೆ ಒಟ್ಟಾರೆ 59 ಜನರಿಗೆ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗಿದ್ದು ವರದಿಯಾಗಿದೆ. ಇನ್ನು ಮಂಗಳವಾರ 28,55,609 ಪುರುಷರು ಹಾಗೂ 25,30,203 ಮಹಿಳೆಯರು ಲಸಿಕೆ ಪಡೆದಿದ್ದಾರೆ.

ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಪೌಲ್​, ಸೋಮವಾರದ ದಾಖಲೆ ಲಸಿಕೆ ಅಭಿಯಾನದ ಬಗ್ಗೆ ಮಾತನಾಡಿದ್ದರು. ಅಂದು ಶೇ.46ರಷ್ಟು ಮಹಿಳೆಯರು ಮತ್ತು ಶೇ.53 ರಷ್ಟು ಪುರುಷರು ಲಸಿಕೆ ಪಡೆದಿದ್ದಾರೆ. ನಾವು ಈ ಅಸಮತೋಲನವನ್ನು ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಮೂರನೆ ಅಲೆ ಸನಿಹವಾಗುತ್ತಿದೆ.. ಆದ್ರೆ ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ವೈದ್ಯರ ಕೊರತೆ.. 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ