AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಡುತ್ತಿರುವ ಶೇ.60ರಷ್ಟು ಜನರು ಲಸಿಕೆ ಹಾಕಿಸದವರು, ಭಾಗಶಃ ಲಸಿಕೆ ಪಡೆದವರು: ಅಧ್ಯಯನ ವರದಿ

ಕೊರೊನಾ ಎರಡನೇ ಅಲೆ ಇರುವ ಸಂದರ್ಭದಲ್ಲಿ ಅಂದರೆ ಏಪ್ರಿಲ್​​ನಲ್ಲಿ  ದಿನವೊಂದಕ್ಕೆ 28 ಸಾವಿರ ಕೇಸ್​ಗಳು ದಾಖಲಾದಾಗಲೇ ಆಸ್ಪತ್ರೆಗಳಲ್ಲಿ ಬೆಡ್​ಗಳಿಗೆ ಕೊರತೆ ಉಂಟಾಗಿತ್ತು. ಐಸಿಯು ಕೂಡ ಖಾಲಿ ಇರಲಿಲ್ಲ.

ಕೊರೊನಾದಿಂದ ಮೃತಪಡುತ್ತಿರುವ ಶೇ.60ರಷ್ಟು ಜನರು ಲಸಿಕೆ ಹಾಕಿಸದವರು, ಭಾಗಶಃ ಲಸಿಕೆ ಪಡೆದವರು: ಅಧ್ಯಯನ ವರದಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde

Updated on: Jan 22, 2022 | 7:41 PM

Share

ದೆಹಲಿ: ಸದ್ಯದ ಕೊರೊನಾ ಮೂರಲೇ ಅಲೆ (Corona 3rd Wave)ಸಂದರ್ಭದಲ್ಲಿ ಶೇ.60ರಷ್ಟು ಪ್ರಮಾಣದಲ್ಲಿ ಸಾವಿಗೆ ಕಾರಣರಾದವರು, ಕೊರೊನಾ ಲಸಿಕೆ ಪಡೆಯದವರು ಮತ್ತು ಭಾಗಶಃ ಲಸಿಕೆ ಪಡೆದು ಸೋಂಕಿಗೆ ಒಳಗಾದವರು ಎಂದು ಖಾಸಗಿ ಆಸ್ಪತ್ರೆಯೊಂದು ನಡೆಸಿದ ಅಧ್ಯಯನ ವರದಿ ಹೇಳಿದೆ. ಅಂದರೆ ಇದೀಗ ಕೊವಿಡ್ 19 ಮೂರನೇ ಅಲೆ ನಡೆಯುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಸಾವಿನ ಪ್ರಮಾಣ ಕಡಿಮೆ ಇದೆ. ಹಾಗಿದ್ದಾಗ್ಯೂ ದಿನವೊಂದರಲ್ಲಿ 400ಕ್ಕೂ ಹೆಚ್ಚಿನ ಜನರು ಸೋಂಕಿನಿಂದ ಸಾಯುತ್ತಿದ್ದಾರೆ. ಈ ಬಾರಿ ಕೊರೊನಾದಿಂದ ಸಾಯುತ್ತಿರುವವರಲ್ಲಿ ಶೇ.60ರಷ್ಟು ಜನರು ಒಂದೇ ಡೋಸ್ ಕೊರೊನಾ ಲಸಿಕೆ ಪಡೆದವರು ಅಥವಾ ಒಂದೂ ಡೋಸ್ ಲಸಿಕೆ ಪಡೆಯದೆ ಇರುವವರು ಎಂದು ಅಧ್ಯಯನ ಹೇಳಿದೆ.

ದೆಹಲಿಯ ಮ್ಯಾಕ್ಸ್ ಹೆಲ್ತ್​ಕೇರ್​ ಖಾಸಗಿ ಆಸ್ಪತ್ರೆ ಈ ಅಧ್ಯಯನ ನಡೆಸಿದೆ. ಈ ಬಾರಿ ಸೋಂಕಿನಿಂದ ಮೃತಪಡುತ್ತಿರುವವರು ಬಹುತೇಕ 70 ವರ್ಷ ಮೇಲ್ಪಟ್ಟವರು. ಅದೂ ಕೂಡ ಕಿಡ್ನಿ, ಹಾರ್ಟ್​, ಡಯಾಬಿಟಿಸ್, ಕ್ಯಾನ್ಸರ್​​ನಂತಹ ಬೇರೆ ಕೆಲವು ರೋಗಗಳಿಂದ ಬಳಲುತ್ತಿರುವವರೇ ಹೆಚ್ಚಾಗಿ ಸಾಯುತ್ತಿದ್ದಾರೆ ಎಂದೂ ಅಧ್ಯಯನ ವರದಿ ಹೇಳಿದೆ. ಕೊರೊನಾದ ಕಳೆದ ಎರಡು ಅಲೆಗಳಿಗೆ ಹೋಲಿಸಿದರೆ ಈ ಬಾರಿ ಕೇವಲ ಶೇ.23.4ರಷ್ಟು ಜನರಿಗೆ ಮಾತ್ರ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ ಬೇಕಾಗುತ್ತಿದೆ. ಮೊದಲ ಅಲೆಯಲ್ಲಿ ಶೇ.63 ರಷ್ಟು ಜನರಿಗೆ ಆಮ್ಲಜನಕ ಬೇಕಿತ್ತು. ಆದರೆ ಎರಡನೇ ಅಲೆಯಲ್ಲಿ ಶೇ.74ರಷ್ಟು ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೇಕಾಗಿತ್ತು ಎಂದು ಅಧ್ಯಯನ ವರದಿ ಹೇಳಿದೆ.

ಕೊರೊನಾ ಎರಡನೇ ಅಲೆ ಇರುವ ಸಂದರ್ಭದಲ್ಲಿ ಅಂದರೆ ಏಪ್ರಿಲ್​​ನಲ್ಲಿ  ದಿನವೊಂದಕ್ಕೆ 28 ಸಾವಿರ ಕೇಸ್​ಗಳು ದಾಖಲಾದಾಗಲೇ ಆಸ್ಪತ್ರೆಗಳಲ್ಲಿ ಬೆಡ್​ಗಳಿಗೆ ಕೊರತೆ ಉಂಟಾಗಿತ್ತು. ಐಸಿಯು ಕೂಡ ಖಾಲಿ ಇರಲಿಲ್ಲ. ಆದರೆ ಪ್ರಸ್ತುತ ಮೂರನೇ ತರಂಗದಲ್ಲಿ ಕಳೆದ ವಾರ ಕೊರೊನಾ ಸೋಂಕಿತರ ಸಂಖ್ಯೆ ಉತ್ತುಂಗದಲ್ಲಿ ಇದ್ದರೂ, ಆಸ್ಪತ್ರೆಗಳಲ್ಲಿ ಬೆಡ್​ಗಳು ಲಭ್ಯವಿದ್ದವು. ಯಾವುದೇ ತೊಂದರೆಯೂ ಆಗಲಿಲ್ಲ ಎಂದು ಅಧ್ಯಯನದಲ್ಲಿ ವಿಶ್ಲೇಷಿಸಲಾಗಿದೆ. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ನಮ್ಮ ಆಸ್ಪತ್ರೆಯಲ್ಲಿ 20,883 ಸೋಂಕಿತರು ದಾಖಲಾಗಿದ್ದರು. ಎರಡನೇ ಅಲೆ ಸಂದರ್ಭದಲ್ಲಿ 12,444 ಮತ್ತು ಮೂರನೇ ಅಲೆ (ಈಗಿನ ಅಲೆ)ಯಲ್ಲಿ 1,378 ಮಂದಿ ದಾಖಲಾಗಿದ್ದಾರೆ ಎಂದೂ ಮ್ಯಾಕ್ಸ್ ಆಸ್ಪತ್ರೆ ತಿಳಿಸಿದೆ. ಇನ್ನು ಸಾವಿನ ದರ ಮೊದಲ ಅಲೆಯಲ್ಲಿ ಶೇ.7.2ರಷ್ಟಿತ್ತು. ಇದು ಎರಡನೇ ಅಲೆಯಲ್ಲಿ ಶೇ.10.5ರಷ್ಟಾಯ್ತು ಮತ್ತು ಸದ್ಯದ ಪರಿಸ್ಥಿತಿಯಲ್ಲಿ ಶೇ.6ರಷ್ಟಿದೆ ಎಂದು ಆಸ್ಪತ್ರೆ ಅಧ್ಯಯನದಲ್ಲಿ ಹೇಳಿದೆ. ಹಾಗಿದ್ದಾಗ್ಯೂ ಮ್ಯಾಕ್ಸ್ ಆಸ್ಪತ್ರೆ ತನ್ನಲ್ಲಿ ಲಭ್ಯವಿರುವ ದತ್ತಾಂಶಗಳನ್ನು ಆಧರಿಸಿ ಈ ಅಧ್ಯಯನ ನಡೆಸಿದೆ.

ಇದನ್ನೂ ಓದಿ: ದಯಾಮರಣ ಕೋರಿ ಹಾಸನದ 300ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಂದ ರಾಷ್ಟ್ರಪತಿ, ಸಿಎಂಗೆ ಪತ್ರ

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್