AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಜಶಾಲಾ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಲಿದೆ; ಓವೈಸಿ ವಿಶ್ವಾಸ

ಮಧ್ಯಪ್ರದೇಶದ ಭೋಜಶಾಲಾ-ಕಮಲ್ ಮೌಲಾ ಮಸೀದಿ ವಿವಾದದಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ ಇಂದು ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ಈ ತೀರ್ಪು ಬಾಬ್ರಿ ಮಸೀದಿ ತೀರ್ಪಿನಂತೆಯೇ ಇದೆ. ಭೋಜಶಾಲಾ ಸಂಕೀರ್ಣವನ್ನು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯ ಎಂದು ಘೋಷಿಸಿರುವ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದುಗೊಳಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭೋಜಶಾಲಾ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಲಿದೆ; ಓವೈಸಿ ವಿಶ್ವಾಸ
OwaisiImage Credit source: PTI
ಸುಷ್ಮಾ ಚಕ್ರೆ
|

Updated on: May 15, 2026 | 6:17 PM

Share

ನವದೆಹಲಿ, ಮೇ 15: ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾ ವಿವಾದಿತ ಪ್ರದೇಶವನ್ನು ಸರಸ್ವತಿ ದೇವಿಯ ದೇವಾಲಯವೆಂದು ಘೋಷಿಸಿದ್ದಕ್ಕೆ AIMIM ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಬಾಬ್ರಿ ಮಸೀದಿ ತೀರ್ಪಿನಂತೆಯೇ ಇದೆ ಎಂದು ಹೇಳಿರುವ ಅವರು ಸುಪ್ರೀಂ ಕೋರ್ಟ್ ಈ ತೀರ್ಪನ್ನು ರದ್ದುಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ಭೋಜಶಾಲಾ ತೀರ್ಪು ಮತ್ತು ರಾಮ ಜನ್ಮಭೂಮಿ ಮಂದಿರ-ಬಾಬ್ರಿ ಮಸೀದಿ ಪ್ರಕರಣದ ತೀರ್ಪಿನ ನಡುವೆ ಸ್ಪಷ್ಟವಾದ ಹೋಲಿಕೆಗಳು ಇವೆ ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಈ ಆದೇಶವನ್ನು ರದ್ದುಗೊಳಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಈ ತೀರ್ಪಿಗೆ ಬಾಬ್ರಿ ಮಸೀದಿ ತೀರ್ಪಿನೊಂದಿಗೆ ಸ್ಪಷ್ಟ ಹೋಲಿಕೆಗಳಿವೆ” ಎಂದು ಓವೈಸಿ ಎಕ್ಸ್​​ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ಪ್ರಶ್ನಿಸಿರುವ ಮುಸ್ಲಿಂ ಕಡೆಯವರು ಸಹ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಚೀನಾದ ಬೆಂಬಲವಿಲ್ಲದಿದ್ದರೆ ಪಾಕಿಸ್ತಾನ ಏನೂ ಇಲ್ಲ; ಓವೈಸಿ ತೀವ್ರ ವಾಗ್ದಾಳಿ

“ನಮ್ಮ ವಿರುದ್ಧ ತೆಗೆದುಕೊಂಡ ನಿರ್ಧಾರವನ್ನು ನಾವು ಪರಿಶೀಲಿಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ನಲ್ಲಿ ಈ ತೀರ್ಪನ್ನು ಪ್ರಶ್ನಿಸುತ್ತೇವೆ” ಎಂದು ಧಾರ್ ಶಹರ್ ಖಾಜಿ ವಕಾರ್ ಸಾದಿಕ್ ANIಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ ಸಂಕೀರ್ಣವು ಸರಸ್ವತಿ ದೇವಿಗೆ ಮೀಸಲಾಗಿರುವ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ಸಮುದಾಯವು ಈ ಜಿಲ್ಲೆಯಲ್ಲಿ ಮಸೀದಿ ನಿರ್ಮಿಸಲು ಪ್ರತ್ಯೇಕ ಭೂಮಿಯನ್ನು ಪಡೆಯಲು ರಾಜ್ಯ ಸರ್ಕಾರವನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ