AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​​ಲೈನ್​ನಲ್ಲಿ ಆರ್ಡರ್​ ಮಾಡಿದರೆ ಮನೆಬಾಗಿಲಿಗೆ ಬರುತ್ತದೆ ವೈದ್ಯಕೀಯ ಆಕ್ಸಿಜನ್​ ಸಿಲಿಂಡರ್​; ಈ ಜಿಲ್ಲೆಯಲ್ಲಿ ವಿನೂತನ ಕ್ರಮ

ಕೊವಿಡ್ 19 ಸೋಂಕಿತ ಅಥವಾ ಅವರನ್ನು ನೋಡಿಕೊಳ್ಳುತ್ತಿರುವವರು ಆಕ್ಸಿಜನ್ ಸಿಲಿಂಡರ್​ ಅಗತ್ಯವಿದ್ದರೆ ಆನ್​ಲೈನ್ ಮೂಲಕ ನೋಂದಣಿ ಮಾಡಬೇಕು. ಹೀಗೆ ಆನ್​ಲೈನ್​ನಲ್ಲಿ ಬುಕ್ ಮಾಡುವಾಗ ಅಲ್ಲಿ ನಿಮ್ಮ ಆಧಾರ್ ನಂಬರ್ ಅಗತ್ಯ.

ಆನ್​​ಲೈನ್​ನಲ್ಲಿ ಆರ್ಡರ್​ ಮಾಡಿದರೆ ಮನೆಬಾಗಿಲಿಗೆ ಬರುತ್ತದೆ ವೈದ್ಯಕೀಯ ಆಕ್ಸಿಜನ್​ ಸಿಲಿಂಡರ್​; ಈ ಜಿಲ್ಲೆಯಲ್ಲಿ ವಿನೂತನ ಕ್ರಮ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 09, 2021 | 3:15 PM

Share

ಗುರುಗ್ರಾಮ​: ಕೊವಿಡ್​ 2ನೇ ಅಲೆ ಉಲ್ಬಣ ಆಗುತ್ತಿರುವ ಬೆನ್ನಲ್ಲೇ ದೇಶದ ಅನೇಕ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಕ್ಸಿಜನ್​, ಬೆಡ್​ಗಳ ಅಭಾವ ಉಂಟಾಗಿದೆ. ತಮ್ಮ ಜಿಲ್ಲೆಗಳಲ್ಲಿ ಎಲ್ಲ ವೈದ್ಯಕೀಯ ವ್ಯವಸ್ಥೆಯನ್ನು ಸುವ್ಯವಸ್ಥಿತವಾಗಿಡಲು ಆಯಾ ಜಿಲ್ಲಾಡಳಿತಗಳು, ಆಯಾ ರಾಜ್ಯ ಸರ್ಕಾರಗಳೊಂದಿಗೆ ಕೈ ಜೋಡಿಸಿ ಕೆಲಸ ಮಾಡುತ್ತಿವೆ. ಅದರಲ್ಲಿ ಒಂದಷ್ಟು ಜಿಲ್ಲಾಡಳಿತಗಳು ತಮ್ಮದೇ ಆದ ಸ್ವಂತ ನಿರ್ಧಾರ ಕೈಗೊಂಡು ಜನರಿಗೆ ಅನುಕೂಲ ಮಾಡಿಕೊಡುತ್ತಿವೆ. ಇದೀಗ ದೆಹಲಿಯ ಗುರುಗ್ರಾಮ ಜಿಲ್ಲಾಡಳಿತ ಒಂದೊಳ್ಳೆ ಕೆಲಸ ಪ್ರಾರಂಭಿಸುವ ಮೂಲಕ ಸುದ್ದಿಯಾಗಿದೆ.

ಇಲ್ಲಿ ಅಪಾರ ಸಂಖ್ಯೆಯ ಕೊರೊನಾ ರೋಗಿಗಳು ಮನೆಯಲ್ಲೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅನುಕೂಲ ಆಗುವಂತೆ ಗುರುಗ್ರಾಮ ಜಿಲ್ಲಾಡಳಿತ ಮನೆ ಬಾಗಿಲಿಗೆ ವೈದ್ಯಕೀಯ ಆಕ್ಸಿಜನ್ ಡೆಲಿವರಿ ಕೊಡುತ್ತಿದೆ. ಈ ಹೊಸ ಯೋಜನೆ ಇಂದಿನಿಂದ ಪ್ರಾರಂಭವಾಗಿದ್ದು, ಅಡುಗೆ ಅನಿಲದ ಮಾದರಿಯಲ್ಲೇ ವೈದ್ಯಕೀಯ ಆಮ್ಲಜನಕದ ಸಿಲೆಂಡರ್ ಕೂಡ ಮನೆಮನೆಯ ಬಾಗಿಲಿಗೆ ಪೂರೈಕೆ ಆಗುತ್ತದೆ.

ಇದಕ್ಕೊಂದು ಆನ್​ಲೈನ್ ಪೋರ್ಟಲ್​ ರಚಿಸಲಾಗಿದೆ. ಕೊವಿಡ್ 19 ಸೋಂಕಿತ ಅಥವಾ ಅವರನ್ನು ನೋಡಿಕೊಳ್ಳುತ್ತಿರುವವರು ಆಕ್ಸಿಜನ್ ಸಿಲಿಂಡರ್​ ಅಗತ್ಯವಿದ್ದರೆ ಆನ್​ಲೈನ್ ಮೂಲಕ ನೋಂದಣಿ ಮಾಡಬೇಕು. ಹೀಗೆ ಆನ್​ಲೈನ್​ನಲ್ಲಿ ಬುಕ್ ಮಾಡುವಾಗ ಅಲ್ಲಿ ನಿಮ್ಮ ಆಧಾರ್ ನಂಬರ್​, ರೋಗಿಯ ವಯಸ್ಸು, ವಿಳಾಸ, ಎಷ್ಟು ಗಾತ್ರವಿರುವ ಸಿಲಿಂಡರ್ ಬೇಕು ಎಂಬುದನ್ನು ಸರಿಯಾಗಿ ನಮೂದಿಸಬೇಕು. ನಂತರ ಮನೆ ಬಾಗಿಲಿಗೆ ಸಿಲಿಂಡರ್ ತಂದು ಕೊಡುತ್ತಾರೆ. ಆದರೆ ಹೀಗೆ ಆರ್ಡರ್ ಮಾಡುವವರು ಆಕ್ಸಿಮೀಟರ್​ನಲ್ಲಿ ಆಮ್ಲಜನಕ ಮಟ್ಟ ಕಡಿಮೆ ತೋರಿಸುತ್ತಿರುವ ಫೋಟೋವೊಂದನ್ನು ಹಾಕುವುದು ಕಡ್ಡಾಯ. ಫೋಟೋ ಹಾಕದೆ ಇದ್ದರೆ ಅದು ಆರ್ಡರ್ ಆಗುವುದಿಲ್ಲ. ಅದಿಲ್ಲದಿದ್ದರೆ ವೈದ್ಯರ ಸಹಿ ಇರುವ ಔಷಧ ಚೀಟಿಯ ಫೋಟೋವನ್ನಾದರೂ ಹಾಕಬೇಕು. ಈ ಕೆಲಸದಲ್ಲಿ ಜಿಲ್ಲಾಡಳಿತದೊಂದಿಗೆ ಎನ್​ಜಿಒವೊಂದು ಕೈಜೋಡಿಸಿದೆ.

ಇನ್ನು ಖಾಲಿ ಸಿಲಿಂಡರ್​ಗಳನ್ನು ಮರುಪೂರಣ ಮಾಡಿಕೊಡಲು ಕೂಡ ವ್ಯವಸ್ಥೆ ಮಾಡಲಾಗುವುದು. ಒಂದು ಮನೆಯಲ್ಲಿ ಖಾಲಿಯಾದ ಸಿಲಿಂಡರ್​ನ್ನು ತುಂಬಿ ಮತ್ತೆ ಅವರಿಗೆ ನೀಡಲು ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದೂ ಜಿಲ್ಲಾಡಳಿತ ಮಾಹಿತಿ ನೀಡಿದೆ. ಗುರುಗ್ರಾಮ ಜಿಲ್ಲಾಡಳಿತದ ಈ ಕ್ರಮದಿಂದ ಅಲ್ಲಿನ ಅನೇಕ ರೋಗಿಗಳು ಉಪಯೋಗಪಡೆಯುವಂತಾಗಿದೆ.

Published On - 3:12 pm, Sun, 9 May 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ