AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಸ್ಥಗಿತ; ಆಗ್ರಾದ ಆಸ್ಪತ್ರೆಯಲ್ಲಿ ಸೋಂಕಿತರ ಕೊಲೆ? ಸ್ಫೋಟಕ ಸತ್ಯ ಬಾಯ್ಬಿಟ್ಟ ಆಸ್ಪತ್ರೆ ಮಾಲೀಕ

ಪಾರಸ್ ಆಸ್ಪತ್ರೆ ಮಾಲೀಕನ ವಿಡಿಯೋ, ಆಡಿಯೋ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಪಾರಸ್ ಆಸ್ಪತ್ರೆಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿತ್ತು. ಮುಖ್ಯಮಂತ್ರಿ ಕೂಡ ಆಕ್ಸಿಜನ್ ಪಡೆಯಲು ಆಗಲ್ಲವೆಂದಿದ್ರು. ಹೀಗಾಗಿ ರೋಗಿಗಳನ್ನ ಡಿಸ್ಚಾರ್ಜ್ ಮಾಡಲು ಆರಂಭಿಸಿದ್ದೆವು....

ಆಕ್ಸಿಜನ್ ಸ್ಥಗಿತ; ಆಗ್ರಾದ ಆಸ್ಪತ್ರೆಯಲ್ಲಿ ಸೋಂಕಿತರ ಕೊಲೆ?  ಸ್ಫೋಟಕ ಸತ್ಯ ಬಾಯ್ಬಿಟ್ಟ ಆಸ್ಪತ್ರೆ ಮಾಲೀಕ
ವೈದ್ಯಕೀಯ ಆಮ್ಲಜನಕ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 08, 2021 | 2:13 PM

Share

ಉತ್ತರ ಪ್ರದೇಶದ ಆಗ್ರಾದ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಸ್ಥಗಿತಗೊಂಡು ಕೇವಲ 5 ನಿಮಿಷದಲ್ಲಿ 22 ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿ ಆಘಾತಕಾರಿ ಮಾಹಿತಿಯೊಂದು ಬಹಿರಂಗಗೊಂಡಿದೆ. ಆಕ್ಸಿಜನ್ ನಿಲ್ಲಿಸುವುದಾಗಿ ನಾನೇ ಹೇಳಿದ್ದೆ ಎಂದು ಪಾರಸ್ ಆಸ್ಪತ್ರೆ ಮಾಲೀಕ ಡಾ.ಅರಿಂಜಯ್ ಜೈನ್ ಬಾಯ್ಬಿಟ್ಟಿದ್ದಾರೆ.

ಏಪ್ರಿಲ್ 27ರಂದು ಉತ್ತರ ಪ್ರದೇಶದ ಆಗ್ರಾದ ಪಾರಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸ್ಥಗಿತಗೊಂಡು ಕೇವಲ 5 ನಿಮಿಷದಲ್ಲಿ 22 ಸೋಂಕಿತರು ಮೃತಪಟ್ಟಿದ್ದರು. ಸದ್ಯ ಈಗ ಆಸ್ಪತ್ರೆ ಮಾಲೀಕ ನಡೆದಿದ್ದ ಘಟನೆ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಪಾರಸ್ ಆಸ್ಪತ್ರೆ ಮಾಲೀಕ ಡಾ.ಅರಿಂಜಯ್ ಜೈನ್ ಸೂಚನೆ ಮೇರೆಗೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಈ ಪರಿಣಾಮವಾಗಿ ಕೇವಲ 5 ನಿಮಿಷದಲ್ಲಿ 22 ಸೋಂಕಿತರು ಮೃತಪಟ್ಟಿದ್ದಾರೆ. 22 ರೋಗಿಗಳ ಸಾವಿನ ಬಗ್ಗೆ ತನಿಖೆಗೆ ನಡೆಸಲು ಉತ್ತರ ಪ್ರದೇಶದ ಆಗ್ರಾ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.

ಘಟನೆ ಖಂಡಿಸಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಆಕ್ರೋಶ ಹೊರ ಹಾಕಿದ್ದರು. ಉತ್ತರ ಪ್ರದೇಶದಲ್ಲಿ ಮೆಡಿಕಲ್ ಆಕ್ಸಿಜನ್ ಮಾತ್ರವಲ್ಲ. ಮಾನವೀಯತೆ ಕೊರತೆಯಿದೆ ಎಂದು ವಾಗ್ದಾಳಿ ನಡೆಸಿದ್ದರು. ಸದ್ಯ ಈಗ ಪಾರಸ್ ಆಸ್ಪತ್ರೆ ಮಾಲೀಕನ ವಿಡಿಯೋ, ಆಡಿಯೋ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಪಾರಸ್ ಆಸ್ಪತ್ರೆಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿತ್ತು. ಮುಖ್ಯಮಂತ್ರಿ ಕೂಡ ಆಕ್ಸಿಜನ್ ಪಡೆಯಲು ಆಗಲ್ಲವೆಂದಿದ್ರು. ಹೀಗಾಗಿ ರೋಗಿಗಳನ್ನ ಡಿಸ್ಚಾರ್ಜ್ ಮಾಡಲು ಆರಂಭಿಸಿದ್ದೆವು.

ರೋಗಿಗಳ ಕುಟುಂಬಸ್ಥರಿಗೆ ಕೌನ್ಸೆಲಿಂಗ್ ಮಾಡಲು ಆರಂಭಿಸಿದೆವು. ಕೆಲವರು ನಮ್ಮ ಮಾತು ಕೇಳಿ ರೋಗಿಗಳನ್ನು ಕರೆದೊಯ್ದರು. ಇನ್ನೂ ಕೆಲವರು ಆಸ್ಪತ್ರೆ ಬಿಟ್ಟು ಹೋಗುವುದಿಲ್ಲವೆಂದು ಹೇಳಿದ್ದರು. ಆ ಸಂದರ್ಭದಲ್ಲಿ ಅಣಕು ಕಾಱಚರಣೆ ಮಾಡೋಣ ಅಂದೆ ಯಾರು ಬದುಕ್ತಾರೋ, ಯಾರು ಸಾಯ್ತಾರೋ ನೋಡೋಣ ಎಂದೆ. ಏ.27ರ ಬೆಳಗ್ಗೆ 7 ಗಂಟೆ ಸುಮಾರಿಗೆ ಅಣಕು ಕಾರ್ಯಾಚರಣೆ ಮಾಡಿದೆವು. ಯಾರಿಗೂ ಗೊತ್ತಾಗದಂತೆ ಆಮ್ಲಜನಕ ಪೂರೈಕೆ ನಿಲ್ಲಿಸಿದ್ದೆವು. 22 ರೋಗಿಗಳು ಸಾಯುತ್ತಾರೆ ಎಂದು ನಾವು ಗುರುತಿಸಿದೆವು ಎಂದು ಪಾರಸ್ ಆಸ್ಪತ್ರೆ ಮಾಲೀಕ ಡಾ.ಅರಿಂಜಯ್ ಜೈನ್ ಹೇಳಿರುವ ವಿಡಿಯೋ, ಆಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ; ಆಡಿಯೋದಲ್ಲಿರುವುದು ಸತ್ಯವಾದರೆ ಅಧಿಕಾರಿಯನ್ನು ಬಂಧಿಸಿ ಎಂದ ಮಾಜಿ ಶಾಸಕ ವಾಸು

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ