AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಅನಂತಪುರದಲ್ಲಿ 14 ಮಂದಿ ಸಾವು

ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಆಮ್ಲಜನಕ ಪೂರೈಕೆ ಪೈಪ್​ಲೈನ್​ನಲ್ಲಿ ಸಮಸ್ಯೆ ಕಾಣಿಸಿಕೊಂಡ ಪರಿಣಾಮ 14 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಅನಂತಪುರದಲ್ಲಿ 14 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: May 01, 2021 | 11:48 PM

ಅನಂತಪುರ (ಆಂಧ್ರ ಪ್ರದೇಶ): ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಆಮ್ಲಜನಕ ಪೂರೈಕೆ ಪೈಪ್​ಲೈನ್​ನಲ್ಲಿ ಸಮಸ್ಯೆ ಕಾಣಿಸಿಕೊಂಡ ಪರಿಣಾಮ 14 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಈ ಪೈಕಿ ಆರು ಮಂದಿ ಆರ್ಥೊಪೆಡಿಕ್ ಮತ್ತು ನಾಲ್ವರು ಎದೆರೋಗಗಳ ವಾರ್ಡ್​​ಗಳಲ್ಲಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕದ ಬೆಂಬಲದೊಂದಿಗೆ ಉಸಿರಾಡುತ್ತಿರುವ 180 ರೋಗಿಗಳ ಪೈಕಿ ಇತರ ನಾಲ್ವರು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನೂ ಜಾಸ್ತಿ ಇರಬಹುದು ಎನ್ನಲಾಗಿದೆ.

ಆಮ್ಲಜನಕ ಕೊರತೆಯ ಕಾರಣ ರೋಗಿಗಳು ಮೃತಪಟ್ಟಿದ್ದಾರೆ ಎಂಬ ವರದಿಗಳನ್ನು ಜಿಲ್ಲಾಧಿಕಾರಿ ಗಂಧಮ್ ಚಂದ್ರಡು ನಿರಾಕರಿಸಿದ್ದಾರೆ. ‘ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಆಸ್ಪತ್ರೆಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಯನ್ನು ಅವರು ಅಲ್ಲಗಳೆದಿದ್ದಾರೆ. ರಾತ್ರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಸಾವುಗಳು ಆಮ್ಲಜನಕ ಸರಬರಾಜಿನಲ್ಲಿ ಆದ ತೊಂದರೆಯಿಂದ ಸಂಭವಿಸಿದ್ದಲ್ಲ. ಕೋವಿಡ್-19ರಿಂದ ಬಳಲುತ್ತಿದ್ದ ರೋಗಿಗಳು ದೇಹಸ್ಥಿತಿ ಬಿಗಡಾಯಿಸಿ ಮೃತಪಟ್ಟಿದ್ದಾರೆ’ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಸಂಭವಿಸಿದ ಸಾವುಗಳ ಬಗ್ಗೆ ಕೆಲವರು ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಎಂದು ತಿಳಿಸಿದರು ಎಂದು ದಿ ಹಿಂದೂ ಜಾಲತಾಣ ವರದಿ ಮಾಡಿದೆ.

‘ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ರೋಗಿಗಳ ಸಂಬಂಧಿಕರು ನನಗೆ ಫೋನ್ ಮಾಡಿ ಮಾಹಿತಿ ನೀಡಿದ್ದರು. ಈ ಬಗ್ಗೆ ಆಸ್ಪತ್ರೆಯ ಗಮನ ಸೆಳೆದಿದ್ದೆ’ ಎಂದು ಅನಂತಪುರದ ಶಾಸಕ ವೆಂಕಟರಾಮಿರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ನಾನು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಕೆ.ಎಸ್.ಎಸ್​.ವೆಂಕಟೇಶ್ವರರಾವ್ ಮತ್ತು ಸ್ಥಾನಿಕ ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದೆ. ಆದರೆ ಅವರು ಗಮನ ಹರಿಸಲಿಲ್ಲ. ಸರಣಿ ಸಾವುಗಳು ವರದಿಯಾದ ನಂತರವಷ್ಟೇ ಸಮಸ್ಯೆ ಸರಿಪಡಿಸಿದರು’ ಎಂದು ವೆಂಕಟರಾಮಿರೆಡ್ಡಿ ಪ್ರತಿಕ್ರಿಯಿಸಿದರು.

(Oxygen Supply Problem 14 die in Andhra Pradesh Anantapur due to snag in oxygen supply)

ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಕಲಬುರಗಿ ಆಸ್ಪತ್ರೆಯಲ್ಲಿ ಇಬ್ಬರು ಕೊರೊನಾ ಸೋಂಕಿತರ ಸಾವು

ಇದನ್ನೂ ಓದಿ: ರೈಲ್ವೆ ಸಿಬ್ಬಂದಿಗೂ ತಟ್ಟಿದ ಆಕ್ಸಿಜನ್ ಕೊರತೆಯ ಬಿಸಿ; ವಿಭಾಗೀಯ ಆಸ್ಪತ್ರೆಯಲ್ಲಿ ಆತಂಕ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ